08:50 AM (IST) Jul 05

Karnataka News Live 5 July 2026ಕುಡಿಯುವ ಗುಟುಕು ನೀರಿಗೆ ಕಠಿಣ ನಿಯಮ ಜಾರಿ! ಬೆಂಗಳೂರು ಜನರು ಓದಲೇಬೇಕಾದ ಸ್ಟೋರಿ

ಮುಂಗಾರು ಕೊರತೆಯಿಂದ ಬೆಂಗಳೂರಿನಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ತಡೆಯಲು ಜಲಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ವಾಹನ ತೊಳೆಯುವುದು, ಈಜುಕೊಳ ಸೇರಿದಂತೆ ಹಲವು ಚಟುವಟಿಕೆಗಳಿಗೆ ಕುಡಿಯುವ ನೀರು ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ₹5,000 ದಂಡ ವಿಧಿಸುವುದಾಗಿ ಎಚ್ಚರಿಸಿದೆ. ಎಲ್ಲಾ ಕಟ್ಟಡಗಳಲ್ಲಿ ಏರೇಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.
Read Full Story
08:36 AM (IST) Jul 05

Karnataka News Live 5 July 2026ಖಾಸಗಿ ಶಾಲೆಗಳತ್ತ ಸರ್ಕಾರಿ ಶಾಲೆಯ 30 ಸಾವಿರ ಮಕ್ಕಳು! ರಾಜ್ಯದಲ್ಲಿ ಶಿಕ್ಷಣ ಸಚಿವರೇ ಇಲ್ಲ

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 7ನೇ ತರಗತಿ ಪಾಸಾದ ಸುಮಾರು 30 ಸಾವಿರ ವಿದ್ಯಾರ್ಥಿಗಳು, 8ನೇ ತರಗತಿಗೆ ಸೂಕ್ತ ವ್ಯವಸ್ಥೆ, ಪಠ್ಯಪುಸ್ತಕಗಳು ಮತ್ತು ಶಿಕ್ಷಕರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣದಿಂದಾಗಿ, ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದು, ಉಳಿದವರು ಕನ್ನಡ ಮಾಧ್ಯಮದಲ್ಲಿಯೇ ಮುಂದುವರಿಯುವ ಅನಿವಾರ್ಯತೆಗೆ ಸಿಲುಕಿದ್ದಾರೆ.
Read Full Story
08:24 AM (IST) Jul 05

Karnataka News Live 5 July 2026Abhimanyu - ಮರದ ದಿಮ್ಮಿ ಸಾಗಿಸುವಾಗ ದಸರಾ ಆನೆ ಅಭಿಮನ್ಯು ದಂತ ಭಗ್ನ!

ಮೈಸೂರು ದಸರಾದ ಅಂಬಾರಿ ಆನೆ ಅಭಿಮನ್ಯುವಿನ ದಂತ ಭಗ್ನವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆ ಇತ್ತೀಚೆಗೆ ಮರದ ದಿಮ್ಮಿ ಸಾಗಿಸುವ ವೇಳೆ ಎಡ ಭಾಗದ ದಂತದ ತುದಿ ಭಾಗ ಮುರಿದಿದೆ.

Read Full Story
08:08 AM (IST) Jul 05

Karnataka News Live 5 July 2026ಜಾಕ್‌ವೆಲ್‌ ಮೂಲಕ ಹಿರಣ್ಯಕೇಶಿ ನದಿಯಿಂದ 33 ಕೆರೆಗೆ ನೀರು ತುಂಬಿಸುವ ಯೋಜನೆಗೆ ಚಾಲನೆ

ಶಾಸಕ ನಿಖಿಲ್ ಕತ್ತಿ ಅವರು ಹುಕ್ಕೇರಿ ಹಾಗೂ ನೆರೆಯ ತಾಲೂಕುಗಳ 33 ಕೆರೆಗಳಿಗೆ ಹಿರಣ್ಯಕೇಶಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯು ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗಲಿದೆ. ಇದೇ ವೇಳೆ, ಅವರು ಸಂಕೇಶ್ವರ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಸೇರಿದಂತೆ ಇತರ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಮಾತನಾಡಿದರು.
Read Full Story
07:58 AM (IST) Jul 05

Karnataka News Live 5 July 2026ಹಾವೇರಿ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಚಿಂತನೆ; ಮಳೆ ಕೊರತೆ

ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆಯಾಗಿದ್ದರೂ, ಇತ್ತೀಚಿನ ಮಳೆಯಿಂದ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಮೋಡ ಬಿತ್ತನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ನಗರದ ರಸ್ತೆ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.

Read Full Story
07:54 AM (IST) Jul 05

Karnataka News Live 5 July 2026KPSC - ಪುತ್ರಿಯರಿಗೆ ಸರ್ಕಾರಿ ಹುದ್ದೆ ಕೊಡಿಸಲು ಸುಳ್ಳು ಪತ್ರ ಕೇಸ್ ಈಗ ರಾಜ್ಯಪಾಲರ ಅಂಗಳದಲ್ಲಿ! ರಾಜೀನಾಮೆ ನೀಡ್ತಾರಾ ಸಾಹುಕಾರ್‌?

ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರ ಭವಿಷ್ಯ ರಾಜ್ಯಪಾಲರು ನಿರ್ಧರಿಸುವ ನಿರ್ಣಾಯಕ ಹಂತ ತಲುಪಿದೆ. ರಾಜ್ಯಪಾಲರ ನಿರ್ಧಾರವೇನು?

Read Full Story
07:44 AM (IST) Jul 05

Karnataka News Live 5 July 2026Ilakal - ಅಂಧ ಅನಾಥ ಯುವತಿ ಹುಲಿಗೆಮ್ಮಾಳ ಬಾಳಿಗೆ ಬೆಳಕಾದ ನಾಗರಾಜ್; ಅಪರೂಪದ ಮದುವೆ

ಹುಟ್ಟು ಕುರುಡಿಯಾದ ಅನಾಥ ಯುವತಿ ಹುಲಿಗೆಮ್ಮಳನ್ನು, ತಾನೂ ಅನಾಥನಾದ ನಾಗರಾಜ ಎಂಬ ಯುವಕ ಮದುವೆಯಾಗಿದ್ದಾನೆ. ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದವರು ಈ ಮದುವೆಯ ಸಂಪೂರ್ಣ ಖರ್ಚು ವಹಿಸಿ, ನವ ದಂಪತಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

Read Full Story
07:35 AM (IST) Jul 05

Karnataka News Live 5 July 202611 ಗಂಟೆಯಲ್ಲಿ 18 ಎಕರೆ ಜಮೀನು ಬಿತ್ತನೆ; ಚಿಕ್ಕರೂಗಿ ರೈತನ ಬೆರಗುಗೊಳಿಸಿದ ಸಾಧನೆ!

ರೈತ ಮಲ್ಲಪ್ಪ ರೊಟ್ಟಿ ಅವರು ಸತತ 11 ಗಂಟೆಗಳಲ್ಲಿ 18 ಎಕರೆ ಜಮೀನು ಬಿತ್ತನೆ ಮಾಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಗೌರವಿಸಿ, ಗ್ರಾಮಸ್ಥರು ರೈತ ದಂಪತಿಯನ್ನು ಚಕ್ಕಡಿಬಂಡಿಯಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಈ ಘಟನೆಯು ಕೃಷಿಯಿಂದ ವಿಮುಖರಾಗುತ್ತಿರುವ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ ಎಂದು ಪ್ರಗತಿಪರ ರೈತರು ಶ್ಲಾಘಿಸಿದ್ದಾರೆ.

Read Full Story
07:23 AM (IST) Jul 05

Karnataka News Live 5 July 2026ಯುವ ಉದ್ಯಮಿಗಳಲ್ಲಿ ಬೆಂಗಳೂರು ನಂ.1 ಯಾರ್‍ಯಾರಿದ್ದಾರೆ ಪಟ್ಟಿಯಲ್ಲಿ?

Avendus Wealth Hurun U30 List ಅವೆಂಡಸ್‌ ವೆಲ್ತ್‌ ಹುರೂನ್‌ ಇಂಡಿಯಾ ಲಿ. ಬಿಡುಗಡೆ ಮಾಡಿದ 2026ನೇ ಸಾಲಿನ 30 ಮತ್ತು ಅದಕ್ಕಿಂತ ಕೆಳಗಿನ ವಯಸ್ಸಿನ ಯುವ ಉದ್ಯಮಿಗಳ ಪಟ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಮುಂಬೈ ಹಿಂದಕ್ಕಿ ಬೆಂಗಳೂರು ಈ ಸ್ಥಾನ ಪಡೆದಿದೆ.

Read Full Story
07:23 AM (IST) Jul 05

Karnataka News Live 5 July 2026Bengaluru - 4 ದಿನದಲ್ಲಿ ಫುಟ್‌ಪಾತ್ ತೆರವುಗೊಳಿಸಿದ್ದೆಷ್ಟು? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರಿನಲ್ಲಿ ಬಿಬಿಎಂಪಿ ಬೃಹತ್ ಕಾರ್ಯಾಚರಣೆ ನಡೆಸಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿದೆ. ಈ ಕ್ರಮಕ್ಕೆ ಬೀದಿ ಬದಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಗಿದ್ದು, ಪಾದಚಾರಿಗಳ ಸುರಕ್ಷತೆಗಾಗಿ ಇದು ಅನಿವಾರ್ಯ ಮತ್ತು ಫುಟ್‌ಪಾತ್ ದುರಸ್ತಿಗೆ ₹70 ಕೋಟಿ ಮೀಸಲಿಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

Read Full Story