ಆಟವಾಡುತ್ತಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 9 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸೈಯದ್ ಸಾಬ್ ಪಾಳ್ಯದಲ್ಲಿ ನಡೆದಿದೆ.
- Home
- News
- State
- Karnataka News Live: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ - ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!
Karnataka News Live: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ - ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಯುಟಿ ಖಾದರ್ ಕಾರ್ಯಪ್ರವೃತ್ತರಾಗಿದ್ದಾರೆ. ಜಯನಗರದ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದ ವೈದ್ಯರು ಗೈರಾಗಿರುವುದನ್ನು ಖಾದರ್ ಗಮನಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತದೆ ಎಂದು ಯುಟಿ ಖಾದರ್ ಹೇಳಿದ್ದಾರೆ. ಹೊಸ ಸಚಿವರ ಕೆಲಸ, ರಾಜ್ಯ ರಾಜಕಾರಣ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಲೈವ್ ಅಪ್ಡೇಟ್ ಇಲ್ಲಿದೆ.
Karnataka News Live 5 June 2026ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ - ಆಟವಾಡುತ್ತಿದ್ದ 9 ವರ್ಷದ ವಿದ್ಯಾರ್ಥಿ ನೀರಿನ ಹೊಂಡಕ್ಕೆ ಬಿದ್ದು ಸಾವು!
Karnataka News Live 5 June 2026ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂದೆ ನಿಜಕ್ಕೂ ಏನಾಗಿದೆ? ಶಾಸಕ ಪೊನ್ನಣ್ಣ ಹೇಳಿದ್ದೇನು?
ಸರ್ಕಾರ ಬದಲಾವಣೆ ಆದಾಗ ಸಹಜವಾಗಿ ಇವೆಲ್ಲಾ ನಡೆಯುತ್ತವೆ, ಅಂತಹ ಸಂದರ್ಭದಲ್ಲಿ ಮನಸ್ತಾಪಗಳು ಇದ್ದೇ ಇರುತ್ತವೆ ಎಂದು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯಿಸಿದ್ದಾರೆ.
Karnataka News Live 5 June 2026Kodagu - 9 ವರ್ಷಗಳ ಬಳಿಕ ಸಿಕ್ಕ ಸ್ವಂತ ಸೂರು - 43 ಆದಿವಾಸಿ ಕುಟುಂಬಗಳ ಕಣ್ಣಲ್ಲಿ ಸಂತಸದ ಕಣ್ಣೀರು!
ಅವರೆಲ್ಲ ಸ್ವಂತ ಸೂರಿಲ್ಲದೆ ಲೈನ್ ಮನೆಗಳಲ್ಲಿ ಬದುಕು ದೂಡುತ್ತಿದ್ದವರು. 9 ವರ್ಷಗಳ ಹಿಂದೆ ಬಂದು ಇಂಚಿಂಚು ಜಾಗಕ್ಕೆ ಹೋರಾಟ ನಡೆಸಿದ್ದರು. ಸ್ವಂತ ಸೂರಿನ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.
Karnataka News Live 5 June 2026ಲವ್ ಮಾಕ್ಟೇಲ್-3 ಸೂಪರ್ ಸಕ್ಸಸ್ ಬೆನ್ನಲ್ಲೇ ಹೊಸ ಕಾರು ಖರೀದಿಸಿದ ಕೃಷ್ಣ-ಮಿಲನಾ - ‘XEV 9e ಸಿನೆಲಕ್ಸ್’ ಸೆಲೆಕ್ಟ್ ಮಾಡಲು ಇದೇ ಕಾರಣ
ಲವ್ ಮಾಕ್ಟೇಲ್-3 ಯಶಸ್ಸಿನ ನಂತರ, ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿ ಮಹೀಂದ್ರಾದ ವಿಶೇಷ ಆವೃತ್ತಿಯ XEV 9e Cineluxe ಕಾರನ್ನು ಖರೀದಿಸಿದ್ದಾರೆ. ಈ ಕಾರು 500+ ಕಿ.ಮೀ ರೇಂಜ್, ಹೋಮ್ ಥಿಯೇಟರ್ ಅನುಭವ ನೀಡುವ ಡಿಸ್ಪ್ಲೇ ಇದರಲ್ಲಿದೆ.
Karnataka News Live 5 June 2026Bathroom Doors - ಬಾತ್ರೂಂ ಬಾಗಿಲಿಗೆ ಈ 4 ಡಿಸೈನ್ ಬೆಸ್ಟ್ - ನೀರು, ತೇವಾಂಶಕ್ಕೆ ನೋ ಟೆನ್ಷನ್!
ಬಾತ್ರೂಂಗೆ ಯಾವ ಬಾಗಿಲು ಹಾಕಿಸೋದು ಬೆಸ್ಟ್? ನೀರು ಬಿದ್ದು ಹಾಳಾಗದ ಡೋರ್ ಯಾವುದು? WPC ಮತ್ತು uPVC ಬಾಗಿಲುಗಳು ತೇವಾಂಶಕ್ಕೆ ಹಾಳಾಗುವುದಿಲ್ಲವೇ? ಮರದ ಬಾಗಿಲುಗಳನ್ನು ಯಾಕೆ ಬಾತ್ರೂಂಗೆ ಬಳಸಬಾರದು? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
Karnataka News Live 5 June 2026ಡಿ.ಕೆ.ಶಿವಕುಮಾರ್ ಸರ್ಕಾರದ ಮುಂದೆ ದೊಡ್ಡ ಸವಾಲುಗಳಿವೆ - ಸಿ.ಟಿ.ರವಿ ಹೇಳಿದ್ದೇನು?
ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಒಳ್ಳೆಯ ಕೆಲಸ ಆಗಿಲ್ಲ. ಮುಂದಿನ ಎರಡು ವರ್ಷವಾದರೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡಲಿ ಎಂಬ ನಿರೀಕ್ಷೆ ಹೊಂದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
Karnataka News Live 5 June 2026ಬೆಂಗಳೂರು - ಹಲಸಿನ ಹಣ್ಣಿನ ಆಸೆಗಾಗಿ ಮರ ಹತ್ತಿದ ಪ್ರಶಸ್ತಿ ವಿಜೇತ ಬಳ್ಳಾರಿ ಮೂಲದ ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಾವು!
Karnataka News Live 5 June 2026ಕಾಲದ ಚಕ್ರದಲ್ಲಿ ಮೌನವಾದ ಸಿಗಂದೂರು ಲಾಂಚ್ - ಸೇತುವೆ ಉದ್ಘಾಟನೆ ಬಳಿಕ ಇದನ್ನ ಕೇಳುವವರೇ ಇಲ್ಲ
Karnataka News Live 5 June 2026ಜಾಗತಿಕ ಹೂಡಿಕೆದಾರರ ಹಾಟ್ಸ್ಪಾಟ್ ಕರ್ನಾಟಕಕ್ಕೆ 2ನೇ ಸ್ಥಾನ, ಭಾರತದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.18 ಏರಿಕೆ!
Karnataka News Live 5 June 2026ಡಿಕೆಶಿ ಕೇವಲ ಕೀಲುಗೊಂಬೆ, ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದಾರೆ - ಆರ್.ಅಶೋಕ್ ವ್ಯಂಗ್ಯ
ಹೈಕಮಾಂಡ್ ಬೆಂಬಲಿಗರು ಮಾತ್ರ ಆಗಿದ್ದು ಡಿಕೆಶಿ ಕೇವಲ ಕೀಲುಗೊಂಬೆಯಾಗಿದ್ದು ಸಿದ್ಧರಾಮಯ್ಯ ಮತ್ತು ಹೈಕಮಾಂಡ್ ಹೇಳಿದಂತೆ ನಡೆಯಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು.
Karnataka News Live 5 June 2026ಸಿಮ್ ಸ್ವಾಪ್ ವಂಚನೆ, ಬಿಎಸ್ಎನ್ಎಲ್ಗೆ ₹55.5 ಲಕ್ಷ ದಂಡ - ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು!
ನಕಲಿ ಸಿಮ್ ನೀಡಿ 'ಸಿಮ್ ಸ್ವಾಪ್' ವಂಚನೆಗೆ ದಾರಿ ಮಾಡಿಕೊಟ್ಟರೆ, ಅದರಿಂದ ಗ್ರಾಹಕರಿಗೆ ಉಂಟಾಗುವ ಹಣಕಾಸಿನ ನಷ್ಟಕ್ಕೆ ಟೆಲಿಕಾಂ ಕಂಪನಿಗಳೇ ಹೊಣೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನಿರ್ಲಕ್ಷ್ಯ ವಹಿಸಿದ ಬಿಎಸ್ಎನ್ಎಲ್ಗೆ ಸಹಕಾರಿ ಬ್ಯಾಂಕ್ಗೆ ₹55.5 ಲಕ್ಷ ದಂಡ ಪಾವತಿಸಲು ಆದೇಶಿಸಿದೆ.
Karnataka News Live 5 June 2026Peddi - ರಾಮ್ ಚರಣ್-ಶಿವಣ್ಣ ಶ್ರಮ ಪಾಪ ನೀರಲ್ಲಿ ಹೋಮ - ಪ್ಯಾನ್ ಇಂಡಿಯಾ ಕಾನ್ಸೆಪ್ಟ್ಗೆ ಮತ್ತೊಂದು ಮೊಳೆ!
ಪೆದ್ದಿ ಬಿಡುಗಡೆಗೆ ಮುನ್ನ ನಟ ರಾಮ್ ಚರಣ್ ಮತ್ತು ನಿರ್ದೇಶಕ ಬುಚ್ಚಿ ಬಾಬು ಸನಾ ಈ ಸಿನಿಮಾ ಕುರಿತು ಕೊಂಚ ಅತಿಯೇ ಅನ್ನಿಸುವಷ್ಟು ಬಿಲ್ಡಪ್ ಕೊಟ್ಟಿದ್ದರು. ಸಿನಿಮಾ ರಂಗದಲ್ಲೇ ಇದೊಂದು ಹೊಸ ಇತಿಹಾಸ ಸೃಷ್ಟಿಸಲಿದೆ.
Karnataka News Live 5 June 2026ಕುದುರೆಮುಖ ವನ್ಯಜೀವಿ ವಿಭಾಗದ ಕಾಡಿನಲ್ಲಿ ಗುಡ್ಡ ಕುಸಿತ, 2019ರ ದುರ್ಘಟನೆ ಮತ್ತೆ ನೆನಪು
Karnataka News Live 5 June 2026ಕೊಡಗಿನಲ್ಲಿ ಭೀಕರ ದುರಂತ - ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು
Karnataka News Live 5 June 2026Exclusive Interview - ನಮ್ಮನೆ ಮಗುವಿಗೆ ನಿಮ್ಮೆಲ್ಲರ ಪ್ರೀತಿ ಸಿಗಲಿ - ಪ್ರಿಯಾ ಸುದೀಪ್
ಪಾತ್ರ ಚಿತ್ರಣ. ಸಾಮಾನ್ಯವಾಗಿ ಒಬ್ಬ ನಾಯಕ ನಟನನ್ನು ಪರಿಚಯಿಸುವಾಗ ದೊಡ್ಡ ಪ್ರಮಾಣದಲ್ಲಿ ಸಿನಿಮಾ ಮಾಡಲು ಮುಂದಾಗುತ್ತಾರೆ. ಪಾತ್ರದ ಶೇಡ್ಸ್ ಅದ್ಭುತವಾಗಿತ್ತು ಎಂದು ಪ್ರಿಯಾ ಸುದೀಪ್ ಸಂದರ್ಶನದಲ್ಲಿ ಹೇಳಿದರು.
Karnataka News Live 5 June 2026ಬಿಜೆಪಿ ಮುಖಂಡ ದೇವರಾಜೇಗೌಡ ಲೈಂಗಿಕ ದೌರ್ಜನ್ಯ ಕೇಸ್ - ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರಿಗೆ ಹೈಕೋರ್ಟ್ ಸೂಚನೆ!
Karnataka News Live 5 June 2026ಬಂಡೀಪುರ ಕಾಡಿನೊಳಗೆ ರೌಡಿಶೀಟರ್ ಬಿಂದಾಸ್ ಗುಂಡು ತುಂಡು ಪಾರ್ಟಿ, ಇಲಾಖೆಯ ಸಿಬ್ಬಂದಿಯೇ ಶಾಮೀಲು?
Karnataka News Live 5 June 2026ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ - ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!
Karnataka News Live 5 June 2026ಸಚಿವ ರಾಮಲಿಂಗಾ ರೆಡ್ಡಿ, ಮುನಿಯಪ್ಪ ಬಳಿಕ ಮತ್ತೊಬ್ಬ ಸಚಿವ ಅಸಮಾಧಾನ!
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲೇ ಸಂಕಷ್ಟಗಳು ಎದುರಾಗುತ್ತಿವೆ. ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಕೆಎಚ್ ಮುನಿಯಪ್ಪ ಕೂಡ ಡಿಕೆಶಿ ನಡೆಗೆ ಅಸಮಾಧಾನ ಹೊರಹಾಕಿದ ಬೆನ್ನಲ್ಲೆ ಇದೀಗ ಕೆಜೆ ಜಾರ್ಜ್ ಕೂಡ ಅಸಮಾಧಾನ.