09:42 AM (IST) Jun 05

Karnataka News Live 5 June 2026ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ, ಖಾತೆ ಹಂಚಿಕೆ ಬೆನ್ನಲ್ಲೇ ಹೊಸ ಸರ್ಕಾರದಲ್ಲಿ ತಳಮಳ

ತೀವ್ರ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡ್ತೇನೆ ಎಂದು ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ.

Read Full Story
09:28 AM (IST) Jun 05

Karnataka News Live 5 June 2026ಮನವೊಲಿಕೆ ಪ್ರಯತ್ನಕ್ಕೆ ಹಿನ್ನಡೆ, ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

ಮುನಿಸಿಕೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ಪಟ್ಟು ಬಿಗಿಗೊಳಿಸಿದ್ದಾರೆ. ಯಾವುದೇ ಮನ ಒಲಿಕೆಗೆ ರಾಮಲಿಂಗಾ ರೆಡ್ಡಿ ಜಗ್ಗಿಲ್ಲ. ಇದೀಗ ರಾಜೀನಾಮೆ ಪತ್ರಕ್ಕೆ ಅಧಿಕೃತ ಸಹಿ ಮಾಡಿದ್ದಾರೆ. ಇದೇ ವೇಳೆ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.

Read Full Story
08:59 AM (IST) Jun 05

Karnataka News Live 5 June 2026ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಮುನಿಸು, ಇಂದು ರಾಜೀನಾಮೆ ಸಲ್ಲಿಕೆ ಸಾಧ್ಯತೆ

ಸಚಿವ ರಾಮಲಿಂಗಾ ರೆಡ್ಡಿ ತಮಗೆ ನೀಡಿರುವ ಜಲಸಂಪನ್ಮೂಲ ಖಾತೆಯಿಂದ ಮುನಿಸಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಪರಿಣಾಮ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Read Full Story
08:40 AM (IST) Jun 05

Karnataka News Live 5 June 2026ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಚಾಟ್ ಬಹಿರಂಗ, ತುಮಕೂರಿನ ಅಲ್ಲಾ ಬಕ್ಷು ಅರೆಸ್ಟ್

ವಿದೇಶಿ ಶಂಕಿತ ಉಗ್ರರ ಜೊತೆ ನಿರಂತರ ಸಂಪರ್ಕದಲ್ಲಿದ್ದ ತುಮಕೂರಿನ 24ರ ಹರೆಯದ ಯುವಕ ಅಲ್ಲಾ ಬಕ್ಷುವನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಚಾಟ್‌ಗಳು, ಉಗ್ರರ ಚಟುವಟಿಕೆ ಕುರಿತು ಚಾಟ್ ಮಾಡಿರುವುದು ಬಯಲಾಗಿದೆ.

Read Full Story
07:54 AM (IST) Jun 05

Karnataka News Live 5 June 2026ಡಿವೋರ್ಸ್ ಹೋರಾಟ ಗೆದ್ದ ಭಾರತದ ಮಹಿಳೆಗೆ ಬರೋಬ್ಬರಿ 85 ಕೋಟಿ ರೂಪಾಯಿ ಜೀವನಾಂಶ

ಕಳೆದ 2 ದಶಕಗಳಿಂದ ನಡೆಸುತ್ತಿದ್ದ ಡಿವೋರ್ಸ್ ಹೋರಾಟದಲ್ಲಿ ಕೊನೆಗೂ ಭಾರತೀಯ ಮಹಿಳೆ ಗೆದ್ದಿದ್ದಾರೆ. ಪರಿಣಾಮ ಇದೀಗ ಜೀವನಾಂಶವಾಗಿ ಬರೋಬ್ಬರಿ 85 ಕೋಟಿ ರೂಪಾಯಿ ಪಡೆದಿದ್ದಾರೆ. ಆರಂಭದಲ್ಲಿ ಕೋರ್ಟ್ 3.5 ಕೋಟಿ ರೂ ಪಡೆದಿದ್ದರು. ಏನಿದು ಪ್ರಕರಣ?

Read Full Story
07:50 AM (IST) Jun 05

Karnataka News Live 5 June 2026Karnataka Politics - ಹೊಸ ಸರ್ಕಾರ ರಚನೆ ಬೆನ್ನಲ್ಲೇ ಡಿಕೆ-ಬಿಕೆ ಬಗ್ಗೆ ರಾಜಣ್ಣ ಹೇಳಿಕೆ ವೈರಲ್!

ಮಾಜಿ ಸಚಿವ ಕೆ.ಎನ್‌. ರಾಜಣ್ಣ ಅವರ ಪ್ರಕಾರ, ಕಾಂಗ್ರೆಸ್ ಪಕ್ಷದ ಶಕ್ತಿ ಅಹಿಂದ ವರ್ಗಗಳಲ್ಲಿದ್ದು, ಅವರ ವಿಶ್ವಾಸ ಗಳಿಸುವುದರ ಮೇಲೆ ಸರ್ಕಾರದ ಭವಿಷ್ಯ ನಿಂತಿದೆ. ಮುಖ್ಯಮಂತ್ರಿ ಆಯ್ಕೆ ಮತ್ತು ಬಿ.ಕೆ. ಹರಿಪ್ರಸಾದ್ ನೇಮಕದ ಬಗ್ಗೆಯೂ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
Read Full Story
07:07 AM (IST) Jun 05

Karnataka News Live 5 June 2026ಗರ್ಭಿಣಿ ನೆಲದ ಕುಳಿತಿರುವುದು ಕಂಡು ಗರಂ ಆದ ಖಾದರ್

ಜಯನಗರ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ವೇಳೆ ಆರೋಗ್ಯ ಸಚಿವ ಯುಟಿ ಖಾದರ್, ವೈದ್ಯಾಧಿಕಾರಿಗಳು, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗರ್ಭಿಣಿಯೊಬ್ಬರು ನೆಲದ ಮೇಲೆ ಕುಳಿತಿರುವುದು ಕಂಡಿದ್ದಾರೆ. ಸ್ಥಳದಲ್ಲೆ ಸಿಬ್ಬಂದಿಗಳನ್ನು, ವೈದ್ಯರನ್ನು ಪ್ರಶ್ನಿಸಿದ್ದಾರೆ.