ಬಿಗ್ಬಾಸ್ ಮನೆಯಿಂದ ಅನಿರೀಕ್ಷಿತವಾಗಿ ಹೊರಬಂದ ಮಲ್ಲಮ್ಮ, ತಮ್ಮ ಎಲಿಮინೇಷನ್ಗೆ ಕಾಂಟ್ರವರ್ಸಿ ಇಲ್ಲದಿರುವುದೇ ಕಾರಣ ಎಂಬ ಚರ್ಚೆಯ ನಡುವೆ, ಬಿಗ್ ಬಾಸ್ 12ರ ವಿನ್ನರ್ ಯಾರೆಂದು ಅಳುಕುತ್ತಲೇ ಗಿ ಹೆಸರನ್ನು ಸೂಚಿಸಿದ್ದಾರೆ. ಅವರು ಹೇಳಿದ್ದು ಯಾರ ಹೆಸರನ್ನು?
- Home
- News
- State
- Karnataka News Live: ಹೇಳಲೋ, ಬೇಡವೋ ಎಂದು ಅಂಜುತ್ತಲೇ Bigg Boss 12ರ ವಿನ್ನರ್ ಘೋಷಿಸಿದ ಮಲ್ಲಮ್ಮ- ಇವರೇ ಅವರು!
Karnataka News Live: ಹೇಳಲೋ, ಬೇಡವೋ ಎಂದು ಅಂಜುತ್ತಲೇ Bigg Boss 12ರ ವಿನ್ನರ್ ಘೋಷಿಸಿದ ಮಲ್ಲಮ್ಮ- ಇವರೇ ಅವರು!

ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನ ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ
Karnataka News Live 5 November 2025ಹೇಳಲೋ, ಬೇಡವೋ ಎಂದು ಅಂಜುತ್ತಲೇ Bigg Boss 12ರ ವಿನ್ನರ್ ಘೋಷಿಸಿದ ಮಲ್ಲಮ್ಮ- ಇವರೇ ಅವರು!
Karnataka News Live 5 November 2025ನಾನು ಡಾಕ್ಟರ್ ಆಗಬೇಕಿತ್ತು, ಆದ್ರೆ ವೈದ್ಯೆಯ ಗಂಡನಾದೆ - ನಟ ಡಾಲಿ ಧನಂಜಯ ಮಾತಿನ ಮರ್ಮವೇನು?
ನಾನು ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದೆ. ಕನ್ನಡದಲ್ಲಿ 125ಕ್ಕೆ 123 ಅಂಕ ಗಳಿಸಿದ್ದು ನನ್ನ ಕನ್ನಡ ಪ್ರೀತಿಗೆ ಸಾಕ್ಷಿ. ಮುಂದೆ ವೈದ್ಯನಾಗಬೇಕೆನ್ನುವ ಮಹದಾಸೆ ಇತ್ತು ಎಂದರು ನಟ ಡಾಲಿ ಧನಂಜಯ.
Karnataka News Live 5 November 2025ದರೋಡೆಗೆ ಇಳಿದಿದೆ ಲಗ್ನ ಪತ್ರಿಕೆ ಗ್ಯಾಂಗ್, ಮದುವೆ ಆಹ್ವಾನ ಕೊಡೋ ನೆಪದಲ್ಲಿ ಮನಗೆ ನುಗ್ಗಿ ಕಳ್ಳತನ
ದರೋಡೆಗೆ ಇಳಿದಿದೆ ಲಗ್ನ ಪತ್ರಿಕೆ ಗ್ಯಾಂಗ್, ಮದುವೆ ಆಹ್ವಾನ ಕೊಡೋ ನೆಪದಲ್ಲಿ ಮನಗೆ ನುಗ್ಗಿ ಕಳ್ಳತನ, ಎಚ್ಚರ ಬೆಂಗಳೂರಿನ ಹೊರ ವಲಯದಲ್ಲಿ ಇದೀಗ ಲಗ್ನ ಪತ್ರಿಕೆ ಮೂಲಕ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ, ಎಚ್ಚರ.
Karnataka News Live 5 November 2025ರಣಬೀರ್ ಕಪೂರ್ ಹಾದಿಯಲ್ಲಿ ವಿಕ್ಕಿ ಕೌಶಲ್.. 'ಮಹಾವತಾರ' ಚಿತ್ರಕ್ಕಾಗಿ ಈ ಎರಡು ಅಭ್ಯಾಸ ಬಿಟ್ಟರಾ?
'ಮಹಾವತಾರ' ಚಿತ್ರದಲ್ಲಿ ವಿಕ್ಕಿ ಕೌಶಲ್ ಪರಶುರಾಮನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಮಾಂಸಾಹಾರವನ್ನು ತ್ಯಜಿಸಲಿದ್ದಾರೆ. ಇದು ಪಾತ್ರಕ್ಕೆ ಗೌರವ ತೋರಿಸುವ ಅವರ ವಿಧಾನವಾಗಿದೆ.
Karnataka News Live 5 November 202525ನೇ ವಯಸ್ಸಿನಲ್ಲಿ ಎಂಬಿಎ ಓದುವವರು ಮೂರ್ಖರು, ನಿಖಿಲ್ ಕಾಮತ್ ಹೀಗೆ ಹೇಳಿದ್ದೇಕೆ?
25ನೇ ವಯಸ್ಸಿನಲ್ಲಿ ಎಂಬಿಎ ಓದುವವರು ಮೂರ್ಖರು, ನಿಖಿಲ್ ಕಾಮತ್ ಹೀಗೆ ಹೇಳಿದ್ದೇಕೆ? ನಿಖಿಲ್ ಕಾಮತ್ ಹೇಳಿಕೆ ವಿವಾದ ಸೃಷ್ಟಿಸಿದೆ. ಭಾರತದಲ್ಲಿ ಈಗ ಕಾಲೇಜುಗಳು ಸತ್ತಿದೆ ಎಂದು ನಿಖಿಲ್ ಹೇಳಿದ್ದಾರೆ.
Karnataka News Live 5 November 2025ಎಸ್ಎಸ್ಎಲ್ಸಿಯಲ್ಲಿ ಶೇ.100ರಷ್ಟು ಫಲಿತಾಂಶಕ್ಕೆ ತಾಕೀತು - ಗೃಹ ಸಚಿವ ಪರಮೇಶ್ವರ್
ಜಿಲ್ಲೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಶ್ರಮಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಶಿಕ್ಷಣ ಇಲಾಖೆಗೆ ತಾಕೀತು ಮಾಡಿದರು.
Karnataka News Live 5 November 2025ಸಲ್ಮಾನ್ ಖಾನ್ ಗೋಲ್ಡನ್ ಹಾರ್ಟ್ ಬಾಯ್, ನಿಜವಾಗಿಯೂ ದೇವರು ಕಳುಹಿಸಿದ ವ್ಯಕ್ತಿ - ನೃತ್ಯ ನಿರ್ದೇಶಕ ಚಿನ್ನಿ ಪ್ರಕಾಶ್
ಕೊರಿಯೋಗ್ರಾಫರ್ ಚಿನ್ನಿ ಪ್ರಕಾಶ್ ಸಲ್ಮಾನ್ ಖಾನ್ ಅವರನ್ನು ಗೋಲ್ಡನ್ ಹಾರ್ಟ್ ಬಾಯ್ ಎಂದು ಕರೆದಿದ್ದಾರೆ. ಸಲ್ಮಾನ್ ಖಾನ್ ಬಾಲಿವುಡ್ನ ಅತಿದೊಡ್ಡ ಮತ್ತು ಉದಾರ ಸೂಪರ್ಸ್ಟಾರ್ಗಳಲ್ಲಿ ಒಬ್ಬರು ಎಂದು ಹೇಳಿದ್ದಾರೆ.
Karnataka News Live 5 November 2025ಮೂರು ಬಾರಿ ಗೆದ್ದು ಶಾಸಕನಾಗಿರುವ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ - ಗೋಪಾಲಕೃಷ್ಣ ಬೇಳೂರು
ಮೂರು ಬಾರಿ ಗೆದ್ದು ಶಾಸಕನಾಗಿರುವ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಬೇಳೂರು ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ಮನವಿ ಮಾಡಿದ್ದೇನೆ.
Karnataka News Live 5 November 2025ಸಿಎಂ ಕುರ್ಚಿಗಾಗಿ ಕಿತ್ತಾಟ ಬಿಟ್ಟು ಅಭಿವೃದ್ಧಿಗೆ ಗಮನ ನೀಡಲಿ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವುದಕ್ಕೆ ಒಬ್ಬರು ಹೋರಾಟ ಮಾಡಿದರೆ, ಕುರ್ಚಿಯನ್ನು ಪಡೆದು ಸಿಎಂ ಆಗುವ ಆಟದಲ್ಲಿ ಮತ್ತೊಬ್ಬರು ತೊಡಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Karnataka News Live 5 November 2025Brahmagantu ದೀಪಾ ಕೈಯಲ್ಲಿ ಮಗು! ಅಬ್ಬಬ್ಬಾ ಇದೇನಿದು ಭಾರಿ ಟ್ವಿಸ್ಟ್? ಸೀರಿಯಲ್ ಪ್ರಿಯರಿಗೆ ಇಲ್ಲಿದೆ ಚಮಕ್!
‘ನಾ ನಿನ್ನ ಬಿಡಲಾರೆ’ ಮತ್ತು ‘ಬ್ರಹ್ಮಗಂಟು’ ಸೀರಿಯಲ್ಗಳ ಮಹಾಸಂಗಮದ ನಡುವೆ, ದೀಪಾ ಪಾತ್ರಧಾರಿ ದಿಯಾ ಪಾಲಕ್ಕಲ್ ಮಗುವಿನೊಂದಿಗಿನ ವಿಡಿಯೋ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಬ್ರಹ್ಮಗಂಟು ಸೀರಿಯಲ್ನಲ್ಲಿ ದೀಪಾಗೆ ಮಗುವಾಗುತ್ತಾ? ಏನಿದು ಟ್ವಿಸ್ಟ್?
Karnataka News Live 5 November 2025ಕಬ್ಬು ಬೆಳೆಗಾರರ ಜೊತೆಗೆ ಸಚಿವರ ಸಂಧಾನ ವಿಫಲ, ನಾಳೆ ಸಂಜೆವರೆಗೆ ಸರ್ಕಾರಕ್ಕೆ ಡೆಡ್ಲೈನ್
ಕಬ್ಬು ಬೆಳೆಗಾರರ ಜೊತೆಗೆ ಸಚಿವರ ಸಂಧಾನ ವಿಫಲ, ನಾಳೆ ಸಂಜೆವರೆಗೆ ಸರ್ಕಾರಕ್ಕೆ ಡೆಡ್ಲೈನ್ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಭೆಗೆ ಬರುವುದಿಲ್ಲ, ನೀವೇ ನಿರ್ಧಾರ ಪ್ರಕಟಿಸಿ ಹೇಳಿ, ಸಂಜೆ ವರೆಗೆ ಟೈಮ್ ಕೊಡುತ್ತೇವೆ ಎಂದು ರೈತರು ಖಡಕ್ ಎಚ್ಚರಿಕೆ ನೀಡಿದ್ದಾರೆ.
Karnataka News Live 5 November 2025ನವೆಂಬರ್ ಕ್ರಾಂತಿ ಪಕ್ಕಾ, ಸಿದ್ದರಾಮಯ್ಯ ಮನೆಗೆ ಹೋಗೋದು ಪಕ್ಕಾ - ಆರ್.ಅಶೋಕ್ ವ್ಯಂಗ್ಯ
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ರೈತರ ಸರಣಿ ಆತ್ಮ*ತ್ಯೆ ಮುಂದುವರೆದಿದೆ.ಕಳೆದ 2 ವರ್ಷದಲ್ಲಿ 2000ಕ್ಕೂ ಹೆಚ್ಚು ರೈತರ ಆತ್ಮ*ತ್ಯೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ಮೇಲೆ ರೈತರಿಗೆ ವಿಶ್ವಾಸ ಕುಂದಿದೆ ಎಂದು ಆರ್.ಅಶೋಕ್ ಹೇಳಿದರು.
Karnataka News Live 5 November 2025ಅಣ್ಣಾವ್ರ ಮೊಮ್ಮಗಳು ಇಷ್ಟೊಂದು ಬೋಲ್ಡ್ ಆದ್ರಾ.. ಕಣ್ಣು ಕುಕ್ಕುವ ರೀತಿಯಲ್ಲಿ ಕಾಣಿಸಿಕೊಂಡ ಧನ್ಯಾ!
ಧನ್ಯಾ ರಾಮ್ಕುಮಾರ್ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿ ಹಾಟ್ ಟಾಪಿಕ್ ಆಗಿವೆ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿವೆ.
Karnataka News Live 5 November 2025'ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ ಗೀತೆ..' ರಾಷ್ಟ್ರಗೀತೆಗೆ ಅವಮಾನ ಮಾಡಿದ ಉತ್ತರ ಕನ್ನಡ ಸಂಸದ ಕಾಗೇರಿ
Uttara Kannada MP Kageri Claims Jana Gana Mana Was Written to Welcome the British ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹೊನ್ನಾವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Karnataka News Live 5 November 2025ಯಡಿಯೂರು ದೇಗುಲ ಪೂಜೆ ಮುಗಿಸಿ ಬರುವಾಗ ಅಪಘಾತ, ತುಮಕೂರು ದಂಪತಿ ಸ್ಥಳದಲ್ಲೇ ಸಾವು
ಯಡಿಯೂರು ದೇಗುಲ ಪೂಜೆ ಮುಗಿಸಿ ಬರುವಾಗ ಅಪಘಾತ, ತುಮಕೂರು ದಂಪತಿ ಸ್ಥಳದಲ್ಲೇ ಸಾವು, ಬೈಕ್ನಲ್ಲಿ ಹಿಂದಿರುಗುತ್ತಿದ್ದ ದಂಪತಿ ಬೈಕ್ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Karnataka News Live 5 November 2025'ದಿ ಗರ್ಲ್ಫ್ರೆಂಡ್' ಸಿನಿಮಾಗೆ ಮೊದಲು ಅಂದುಕೊಂಡಿದ್ದ ಹೀರೋಯಿನ್ ಯಾರು? ಅವರಿಂದಲೇ ರಶ್ಮಿಕಾಗೆ ಚಾನ್ಸ್ ಸಿಕ್ಕಿತ್ತಾ?
ರಶ್ಮಿಕಾ ಮಂದಣ್ಣ ನಟನೆಯ ಲೇಟೆಸ್ಟ್ ಸಿನಿಮಾ 'ದಿ ಗರ್ಲ್ಫ್ರೆಂಡ್'. ರಾಹುಲ್ ರವೀಂದ್ರನ್ ನಿರ್ದೇಶನದ ಈ ಚಿತ್ರಕ್ಕೆ ರಶ್ಮಿಕಾ ಮೊದಲ ಆಯ್ಕೆಯ ನಾಯಕಿಯಾಗಿರಲಿಲ್ಲ. ಹಾಗಾದ್ರೆ ಆ ನಟಿ ಯಾರು ನೋಡೋಣ.
Karnataka News Live 5 November 2025ಫೆಬ್ರವರಿ 28 ರಿಂದ ಪಿಯುಸಿ, ಮಾ.18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ವೇಳಾಪಟ್ಟಿ ಪ್ರಕಟ
Karnataka SSLC & PUC Exam Time Table 2026 Announced PUC from Feb 28, SSLC from Mar 18 ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
Karnataka News Live 5 November 2025ಬಡವರ ಮನೆಗಳಿಗೆ ಸಿಎಂ ಸಿದ್ದರಾಮಯ್ಯ ಜಿಎಸ್ಟಿ ಹಾಕಿಲ್ಲ - ಸಚಿವ ಜಮೀರ್ ಅಹ್ಮದ್ ಖಾನ್
ಶಿಗ್ಗಾಂವಿ, ಸವಣೂರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಕಾಣುತ್ತಿದೆ. ಅದಕ್ಕೆ ಮತದಾರರು ನೀಡಿದ ಬೆಂಬಲ, ಪ್ರೋತ್ಸಾಹವೇ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
Karnataka News Live 5 November 2025ನವೆಂಬರ್ ಕ್ರಾಂತಿ ನಡೆಯಲಿದೆ, ಡಿಕೆಶಿ ಅವರಂತೂ ಸಿಎಂ ಆಗೋದಿಲ್ಲ - ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು
ಬೆಳಗಾವಿ ಅಧಿವೇಶನದ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ. ಆದರೆ ಡಿ.ಕೆ.ಶಿವಕುಮಾರ್ ಅವರಂತೂ ಮುಖ್ಯಮಂತ್ರಿ ಆಗೋದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.
Karnataka News Live 5 November 2025ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್.. ನಿಯಮಗಳ ಮೀರಿ ನಡೆಯುತ್ತಿದ್ದ ಕಲ್ಲುಕೋರೆಗಳು ಬಂದ್
ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಕಲ್ಲುಕೋರೆಗಳಿಂದ ಈ ಜಿಲ್ಲೆಯ ನೂರಾರು ಕುಟುಂಬಗಳ ಹಲವು ಜನರು ಗಂಭೀರ ಆರೋಗ್ಯದ ಸಮಸ್ಯೆಗಳಿಗೆ ತುತ್ತಾಗಿದ್ದರು. ಕೊನೆಗೂ ಅವುಗಳೀಗೆ ಬೀಗ ಬಿದ್ದಿದೆ.