Bengaluru businessman arrested: ಬೆಂಗಳೂರಿನಲ್ಲಿ ಮಹಿಳಾ ಕಸ್ಟಮ್ಸ್ ಅಧಿಕಾರಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ, ಸುಮಾರು ಏಳು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉದ್ಯಮಿ ಕೃಪಲಾನಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.
- Home
- News
- State
- Karnataka News Live: ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ - ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ - ಉದ್ಯಮಿ ಅಂದರ್
Karnataka News Live: ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ - ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ - ಉದ್ಯಮಿ ಅಂದರ್

ಬಾಗಲಕೋಟೆ: ಬೆಳಗಾವಿ ರಾಜಕಾರಣ ಬಾಗಲಕೋಟೆಗೆ ನುಗ್ಗಾಕ್ ಬಿಡುವುದಿಲ್ಲ ಅನ್ನೋ ಕಾರಣಕ್ಕೆ ರಮೇಶ ಕತ್ತಿ ಬಾಗಲಕೋಟೆಗೆ ಬಂದಿದ್ದಾನೆ. ಬೆಳಗಾವಿ ರಾಜಕಾರಣದ ಗುಂಡಾಗಿರಿ ದರೋಡೆಕೋರತನ ತೆಗೆದು ಹಾಕಬೇಕು. ಬೇರು ಸುಮೇತ ಕಿತ್ತಾಕಬೇಕು ಎನ್ನುವ ಕಾರಣಕ್ಕೆ ರಮೇಶ ಕತ್ತಿ ಇಲ್ಲಿಗೆ ಬಂದಿದ್ದಾನೆ ಎಂದು ಪರೋಕ್ಷವಾಗಿ ಸಚಿವ ಸತೀಶ ಜಾರಕಿಹೊಳಿಗೆ ಮಾಜಿ ಸಂಸದ ರಮೇಶ ಕತ್ತಿ ಟಾಂಗ್ ನೀಡಿದರು.ಬಾಗಲಕೋಟೆಯಲ್ಲಿ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಸಮಯ ಇರೂವರೆಗೂ ಕೂಡ ನಮ್ಮ ಹಿರಿಯರು ಹೇಳಿದಂತೆ ಮನೆ ಮನೆ ಪ್ರಚಾರ, ಪಾದಯಾತ್ರೆ ಮಾಡಿ ಹೋಗುತ್ತೇವೆ. ಬೆಳಗಾವಿಂದ ಬಂದವರು ರಾಜಕಾರಣ ಮಾಡುತ್ತಾರೆ, ದರೋಡೆಕೋರ ರಾಜಕಾರಣ ಮಾಡುತ್ತಾರೆ. ಅವರು ಬೆಳಗಾವಿಯಲ್ಲಿ ಮಾಡಿ ಮೂಲೆಗುಂಪಾಗಿ ಇಲ್ಲಿಗೆ ಬಂದಿದ್ದಾರೆ. ಇಲ್ಲೇನೋ ಅವರು ಚುನಾವಣೆ ಮಾಡಲು ಬಂದಿಲ್ಲ, ಇಲ್ಲಿ ಕಂಬಳಿ ಹಾರಿಸುತ್ತಿದ್ದಾರೆ ಎಂದು ಹೇಳಿದರು.
Karnataka News Live 6 April 2026ಮಹಿಳಾ ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾ*ಚಾರ - ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ - ಉದ್ಯಮಿ ಅಂದರ್
Karnataka News Live 6 April 2026Belagavi - ನಿನ್ನೇ ಪ್ರೀತಿಸುವೆ ಎಂದು ಹಣ, ಮಾನ, ಚಿನ್ನ ದೋಚಿದ! ನ್ಯಾಯಕ್ಕಾಗಿ ಯುವತಿ ಕಣ್ಣೀರು
ಬೆಳಗಾವಿಯಲ್ಲಿ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.
Karnataka News Live 6 April 2026ಮೈಸೂರು ಜಿಲ್ಲೆಯ ಎರಡು ಗ್ರಾಮದ ಜನರು LPGಯೇ ಬಳಸಲ್ಲ; ಇವರಿಗೆಲ್ಲಾ ಇಲ್ಲ ಟೆನ್ಷನ್
ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಅಡುಗೆ ಅನಿಲದ ಕೊರತೆಯ ನಡುವೆಯೂ, ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಗ್ರಾಮಗಳು ಜೈವಿಕ ಅನಿಲ ಬಳಸಿ ಸ್ವಾವಲಂಬಿಯಾಗಿವೆ. ನೂರಾರು ಕುಟುಂಬಗಳು ಇಂಧನಕ್ಕಾಗಿ ಜೈವಿಕ ಅನಿಲವನ್ನು ಅವಲಂಬಿಸಿ, ಆರ್ಥಿಕ ಉಳಿತಾಯ ಮಾಡುತ್ತಿವೆ.
Karnataka News Live 6 April 2026ಪ್ರಧಾನಿಗಳಿಂದ ದಕ್ಷಿಣ ರಾಜ್ಯಗಳ ಧ್ವನಿ ದುರ್ಬಲಗೊಳಿಸುವ ರಾಜಕೀಯ ತಂತ್ರ - ಸಿದ್ದರಾಮಯ್ಯ
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆಯು ದಕ್ಷಿಣದ ರಾಜ್ಯಗಳ ಧ್ವನಿಯನ್ನು ದುರ್ಬಲಗೊಳಿಸುವ ರಾಜಕೀಯ ತಂತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಲಿದೆ.