- Home
- News
- State
- Karnataka News Live: ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ ಮೇಲೆ ಮತ್ತೆ ಚರ್ಚೆ ಅಪ್ರಸ್ತುತ - ಸಚಿವ ಪ್ರಿಯಾಂಕ್
Karnataka News Live: ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ ಮೇಲೆ ಮತ್ತೆ ಚರ್ಚೆ ಅಪ್ರಸ್ತುತ - ಸಚಿವ ಪ್ರಿಯಾಂಕ್

ಬೆಂಗಳೂರು: ಕಳೆದ ತಿಂಗಳು ಸಾರ್ವಜನಿಕರು ಕಳೆದುಕೊಂಡಿದ್ದ 1.75 ಕೋಟಿ ರು. ಮೌಲ್ಯದ 692 ಮೊಬೈಲ್ಗಳನ್ನು ಪತ್ತೆ ಹಚ್ಚಿ ಈಶಾನ್ಯ ವಿಭಾಗದ ಪೊಲೀಸರು ಮರಳಿಸಿದ್ದಾರೆ.
ಯಲಹಂಕ-83, ಯಲಂಹಕ ನ್ಯೂ ಟೌನ್-76, ಕೊಡಿಗೇಹಳ್ಳಿ-66, ವಿದ್ಯಾರಣ್ಯಪುರ-86, ಸಂಪಿಗೆಹಳ್ಳಿ -107, ಕೊತ್ತನೂರು-70, ಬಾಗಲೂರು-85, ಅಮೃತಹಳ್ಳಿ-66, ಚಿಕ್ಕಜಾಲ-34, ದೇವನಹಳ್ಳಿ-12 ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ-07 ಸೇರಿದಂತೆ ಒಟ್ಟು ಈಶಾನ್ಯ ವಿಭಾಗದ 11 ಠಾಣೆಗಳ ಪೊಲೀಸರು ಒಟ್ಟು 692 ಮೊಬೈಲ್ ಪತ್ತೆ ಹಚ್ಚಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮೊಬೈಲ್ ಪತ್ತೆ ತಂಡ ರಚನೆ
ಮೊಬೈಲ್ಗಳ ಕಳ್ಳತನ ಪತ್ತೆಗೆ ಪ್ರತಿ ವಿಭಾಗದಲ್ಲಿ ತಂಡ ರಚಿಸಲಾಗಿದೆ. ಮೊಬೈಲ್ ಕಣ್ಮರೆ ಬಗ್ಗೆ ಸಿಇಐರ್ ಪೋರ್ಟಲ್ನಲ್ಲಿ ದೂರು ದಾಖಲಾದ ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿಯುತ್ತಾರೆ. ಅಂತೆಯೇ ಏಪ್ರಿಲ್ ತಿಂಗಳಲ್ಲಿ ಈಶಾನ್ಯ ವಿಭಾಗದ ಪೊಲೀಸರು ಉತ್ತಮ ಕಾರ್ಯನಿರ್ವಹಣೆ ತೊರಿದ್ದಾರೆ ಎಂದು ಆಯುಕ್ತರು ಶ್ಲಾಘಿಸಿದರು. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಹ ಕಳವು ಮೊಬೈಲ್ಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೊಬೈಲ್ ಕಳ್ಳತನ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮೊಬೈಲ್ ಕಳ್ಳತನವಾದ ಕೂಡಲೇ ಸಿಇಐಆರ್ ಪೋರ್ಟಲ್ನಲ್ಲಿ ಸಾರ್ವಜನಿಕರು ದೂರು ದಾಖಲಿಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
Karnataka News Live 6 May 2026ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ ಮೇಲೆ ಮತ್ತೆ ಚರ್ಚೆ ಅಪ್ರಸ್ತುತ - ಸಚಿವ ಪ್ರಿಯಾಂಕ್
Karnataka News Live 6 May 2026ಮುಂದಿನ ವಾರ ಸಿದ್ದು, ಡಿಕೆಗೆ ದಿಲ್ಲಿಗೆ ಬುಲಾವ್? ನಾಯಕತ್ವ, ಸಂಪುಟ ಪುನಾರಚನೆ ಚರ್ಚೆ ಸಂಭವ
Karnataka News Live 6 May 20262ನೇ ಸಂಸಾರ ಪೋಷಿಸುವ ವ್ಯಕ್ತಿ ತನ್ನತಾಯಿ ಪೋಷಣೆ ನಿರಾಕರಿಸುವಂತಿಲ್ಲ - ಹೈಕೋರ್ಟ್ ಆದೇಶ
Karnataka News Live 6 May 2026ಶಿರಸಿ-ಬಿಸಿಲಕೊಪ್ಪ ಮಾರ್ಗದಲ್ಲಿ ಭಾರೀ ವಾಹನಗಳಿಗೆ ತಾತ್ಕಾಲಿಕ ನಿಷೇಧ; ಪರ್ಯಾಯ ಮಾರ್ಗ ಸೂಚನೆ
Karnataka News Live 6 May 2026Mysuru - ರಸ್ತೆಬದಿಯಲ್ಲಿ ಮೂತ್ರವಿಸರ್ಜನೆ ತಡೆಗೆ ಕಾಂಪೌಂಡ್ಗೆ ಕನ್ನಡಿಗಳ ಅಳವಡಿಕೆ
ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಸ್ಥಾನದ ಗುರಿಯೊಂದಿಗೆ, ಮೈಸೂರು ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ವಿಶಿಷ್ಟ ಯೋಜನೆ ಕೈಗೊಂಡಿದೆ. ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪ್ರಾಯೋಗಿಕವಾಗಿ ಕನ್ನಡಿಗಳನ್ನು ಅಳವಡಿಸಿದೆ.