11:33 PM (IST) Aug 06

Karnataka News Live 6th August 2025ಉರ್ದುವಿನಲ್ಲಿ ಓದಿದ ಯುವಕ, ನಿಸಾರ್ ಜಂಗಮ ದೀಕ್ಷೆ ಪಡೆದು ನಿಜಲಿಂಗಸ್ವಾಮಿಯಾಗಿದ್ದು ಹೇಗೆ? ಪಾಠ ಕಲಿಸಿದ ಶಿಕ್ಷಕ ಹೇಳಿದ್ದೇನು?

ನಿಸಾರ್‌ನ ಈ ಆಧ್ಯಾತ್ಮಿಕ ಒಲವಿಗೆ ಅವರ ಧರ್ಮದ ಕೆಲವರು ವಿರೋಧ ವ್ಯಕ್ತಪಡಿಸಿದ್ದರಂತೆ. ಆದಾಗ್ಯೂ, 2020ರಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಫಸ್ಟ್ ಕ್ಲಾಸ್‌ನಲ್ಲಿ ಉತ್ತೀರ್ಣರಾದ ನಿಸಾರ್, ಲಿಂಗ ದೀಕ್ಷೆ ಪಡೆದ ಬಳಿಕ ಕಾವಿ ಬಟ್ಟೆ ಧರಿಸಿ ಶಾಲೆಗೆ ಅಂಕಪಟ್ಟಿ ಪಡೆಯಲು ಬಂದಿದ್ದರು. 

Read Full Story
11:13 PM (IST) Aug 06

Karnataka News Live 6th August 2025ಟ್ರಂಪ್‌ ತೆರಿಗೆ ಲೆಕ್ಕಕ್ಕಿಲ್ಲ, ರಷ್ಯಾ ಜೊತೆ ಮತ್ತೆ ಕೈಗಾರಿಕಾ ಸಹಕಾರ ಒಪ್ಪಂದ ಮಾಡಿಕೊಂಡ ಭಾರತ!

ಭಾರತ ಮತ್ತು ರಷ್ಯಾ ನಡುವೆ ಕೈಗಾರಿಕಾ ಮತ್ತು ತಾಂತ್ರಿಕ ಸಹಕಾರವನ್ನು ಗಾಢವಾಗಿಸಲು ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದವು ಗಣಿಗಾರಿಕೆ, ರೈಲ್ವೆ ಸಾರಿಗೆ, ರಸಗೊಬ್ಬರಗಳು ಮತ್ತು ಇತರ ಕ್ಷೇತ್ರಗಳಲ್ಲಿ ಸಹಯೋಗವನ್ನು ಒಳಗೊಂಡಿದೆ.
Read Full Story
10:57 PM (IST) Aug 06

Karnataka News Live 6th August 2025ದೇವ್ರೇ, ಇಂತಹ ಸಾವು ಯಾರಿಗೂ ಬೇಡ! ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ದಾರುಣ ಸಾವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾಯಲು ಮಾಡಿಕೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

Read Full Story
10:32 PM (IST) Aug 06

Karnataka News Live 6th August 2025ಕಲಬುರಗಿ - ಕುಡಿತದ ಚಟ ಬಿಡಿಸಲು ನೀಡಿದ ನಾಟಿ ಔಷಧ ಸೇವಿಸಿ ಮೂವರು ಮೃತ್ಯು; ಓರ್ವನ ಸ್ಥಿತಿ ಗಂಭೀರ

ಕಲಬುರಗಿಯ ಸೇಡಂ ತಾಲೂಕಿನಲ್ಲಿ ನಾಟಿ ಔಷಧ ಸೇವಿಸಿ ಮೂವರು ಮೃತಪಟ್ಟಿದ್ದಾರೆ. ಕುಡಿತದ ಚಟ ಬಿಡಿಸಲು ಸೇವಿಸಿದ ಔಷಧವೇ ಸಾವಿಗೆ ಕಾರಣ ಎನ್ನಲಾಗಿದೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
Read Full Story
09:22 PM (IST) Aug 06

Karnataka News Live 6th August 2025ಜನರೇ ಅರ್ಥ ಮಾಡಿಕೊಳ್ಳಿ, ನ್ಯಾಯ ಕೇಳೋದು ನಮ್ಮ ಹಕ್ಕು-ಕರ್ತವ್ಯ - ಪ್ರಕಾಶ್‌ ರಾಜ್‌

ಧರ್ಮಸ್ಥಳದಲ್ಲಿ ಸೌಜನ್ಯ ಪರ ಹೋರಾಟಗಾರರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಹೊಡೆದಾಟ ನಡೆದಿದ್ದು, ಯೂಟ್ಯೂಬರ್‌ಗಳಿಗೆ ಧರ್ಮದೇಟು ನೀಡಲಾಗಿದೆ. ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಮತ್ತೆ ಪರ-ವಿರೋಧ ಚರ್ಚೆ ಶುರುವಾಗಿದೆ.
Read Full Story
08:51 PM (IST) Aug 06

Karnataka News Live 6th August 2025ಮಡಿಕೇರಿಯ ರಾಜಾಸೀಟಿನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತೀವ್ರ ವಿರೋಧ

ಕೊಡಗಿನ ರಾಜಾಸೀಟಿನಲ್ಲಿ ಗಾಜಿನ ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಭೂಕುಸಿತದ ಭೀತಿಯಿರುವ ಪ್ರದೇಶದಲ್ಲಿ ಈ ಕಾಮಗಾರಿ ಸೂಕ್ತವೇ ಎಂಬ ಪ್ರಶ್ನೆ ಎದ್ದಿದೆ. ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದ್ದರೆ, ಕಾಂಗ್ರೆಸ್ ಅಭಿವೃದ್ಧಿಗೆ ಅಗತ್ಯ ಎಂದು ವಾದಿಸುತ್ತಿದೆ.
Read Full Story
08:34 PM (IST) Aug 06

Karnataka News Live 6th August 2025ಕ್ಷೇತ್ರದ ಅಪಪ್ರಚಾರದ ಬಗ್ಗೆ ಸಿಡಿದೆದ್ದ ಭಕ್ತರು, ಯೂಟ್ಯೂಬರ್ಸ್‌ಗಳಿಗೆ ಧರ್ಮದೇಟು ಕೊಟ್ಟು ಓಡಿಸಿದ ಸ್ಥಳೀಯರು!

ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬರ್‌ಗಳಿಗೆ ಭಕ್ತರಿಂದ ಧರ್ಮದೇಟು. ಸ್ಥಳೀಯ ಆಸ್ಪತ್ರೆಗೆ ದಾಖಲು. ಧರ್ಮಸ್ಥಳದ ಕುರಿತು ಅವಹೇಳನ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭಕ್ತರಿಂದ ಪ್ರತಿಭಟನೆ.
Read Full Story
08:10 PM (IST) Aug 06

Karnataka News Live 6th August 2025ಸುವರ್ಣ ನ್ಯೂಸ್ ವರದಿಗಾರನ ಮೇಲೆ ಹಲ್ಲೆ ಮಾಡಿದ ಗಿರೀಶ್ ಮೆಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್!

ಸೌಜನ್ಯ ಪ್ರಕರಣ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ, ಉಜಿರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ತೆರಳಿದ ಸುವರ್ಣ ನ್ಯೂಸ್ ವರದಿಗಾರ ಹರೀಶ್ ಮೇಲೆಯೂ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮೆಟ್ಟಣ್ಣನವರ್ ಗ್ಯಾಂಗ್ ಹಲ್ಲೆ ನಡೆಸಿದೆ. ತಡೆಯಲು ಯತ್ನಿಸಿದ ಪೊಲೀಸರ ಮೇಲೂ ಹಲ್ಲೆ ನಡೆದಿದೆ.

Read Full Story
07:50 PM (IST) Aug 06

Karnataka News Live 6th August 2025ಒಳಮೀಸಲಾತಿ ವರದಿಗೆ ಬೋವಿಗುರುಪೀಠದ ಸ್ವಾಮೀಜಿಯಿಂದ ತೀವ್ರ ವಿರೋಧ

ಒಳಮೀಸಲಾತಿ ವರದಿಯನ್ನು ತರಾತುರಿಯಲ್ಲಿ ಅಂಗೀಕರಿಸದಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

Read Full Story
07:39 PM (IST) Aug 06

Karnataka News Live 6th August 2025ಸೌಜನ್ಯಾಪರ ವರದಿ ಮಾಡ್ತಿದ್ದ ಯೂಟೂಬರ್‌ಗಳ ಮೇಲೆ ಹಲ್ಲೆ; ಲಾಠಿ ಚಾರ್ಜ್ ಮಾಡಿದ ಪೊಲೀಸರು!

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬ್ ವಿಡಿಯೋ ಮಾಡುತ್ತಿದ್ದವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಘಟನೆಯ ಬಳಿಕ ಪರ-ವಿರೋಧ ಗುಂಪುಗಳು ಸೇರಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
Read Full Story
06:24 PM (IST) Aug 06

Karnataka News Live 6th August 2025ಮನೆ ಮುಂದೆ ಆಟವಾಡ್ತಿದ್ದ ಬಾಲಕಿ ಮಸೀದಿಯೊಳಗೆ ಎಳೆದೊಯ್ದು, ರೇಪ್ ಮಾಡಿ ಕಳಿಸಿದ ಮೌಲ್ವಿ!

ಬೆಳಗಾವಿಯ ಮಸೀದಿಯೊಂದರಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾ*ಚಾರ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದ ಮಧ್ಯಪ್ರವೇಶದ ನಂತರ ಪೊಲೀಸರು ಆರೋಪಿ ಮೌಲ್ವಿಯನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಈ ಘಟನೆ ದೃಢಪಡಿಸಿವೆ.

Read Full Story
05:55 PM (IST) Aug 06

Karnataka News Live 6th August 2025ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಕೀರ್ತನಾ ಮಂಗಳೂರಿನಲ್ಲಿ ಆತ್ಮಹ*ತ್ಯೆ!

ಪುತ್ತೂರಿನ ಯುವ ಪಶುವೈದ್ಯೆ ಡಾ. ಕೀರ್ತನಾ ಜೋಶಿ ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಅವರ ಕುಟುಂಬ ಮತ್ತು ಸ್ನೇಹಿತರಲ್ಲಿ ಆಘಾತವನ್ನುಂಟುಮಾಡಿದೆ. ಪ್ರತಿಭಾವಂತ ವೈದ್ಯೆಯ ಈ ಅಕಾಲಿಕ ಮರಣಕ್ಕೆ ಕಾರಣ ತಿಳಿದುಬಂದಿಲ್ಲ.

Read Full Story
05:55 PM (IST) Aug 06

Karnataka News Live 6th August 2025ಟಿಕೆಟ್​ ಇಲ್ದೇ ಪ್ರಯಾಣಿಸ್ತೀರಾ, ಸಾಮಾನು ಸಾಗಿಸ್ತೀರಾ? 4 ತಿಂಗಳಲ್ಲಿ ಪಶ್ಚಿಮ ರೈಲೊಂದರಲ್ಲೇ 71 ಕೋಟಿ ದಂಡ!

ಕೇವಲ ನಾಲ್ಕು ತಿಂಗಳಿನಲ್ಲಿ ಪಶ್ಚಿಮ ರೈಲ್ವೆ ಒಂದರಲ್ಲಿಯೇ 71 ಕೋಟಿ ರೂಪಾಯಿಗಳ ದಂಡ ವಸೂಲಿ ಆಗಿದೆ. ಇದರ ಕುತೂಹಲದ ಮಾಹಿತಿ ಇಲ್ಲಿದೆ...

Read Full Story
05:44 PM (IST) Aug 06

Karnataka News Live 6th August 2025ತಂದೆಯ ಸಮಾಧಿಯ ಪಕ್ಕದಲ್ಲೇ ಕ್ರೈಸ್ತ ಸಂಪ್ರದಾಯದಂತೆ ನಟ ಸಂತೋಷ್‌ ಬಾಲರಾಜ್‌ ಅಂತ್ಯಸಂಸ್ಕಾರ

ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್, 34, ಜಾಂಡೀಸ್ ನಿಂದ ನಿಧನರಾಗಿದ್ದಾರೆ. ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಕುಟುಂಬ ಈಗ ಮಗನನ್ನೂ ಕಳೆದುಕೊಂಡಿದೆ. ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.
Read Full Story
05:32 PM (IST) Aug 06

Karnataka News Live 6th August 2025ದರ್ಶನ್ & ಗ್ಯಾಂಗ್‌ನ ಜಾಮೀನು ರದ್ದತಿ ಮಾಡಲು, ಸುಪ್ರೀಂ ಕೋರ್ಟ್‌ಗೆ ಲಿಖಿತ ವಾದ ಸಲ್ಲಿಸಿದ ಸರ್ಕಾರ!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದೆ. ಪ್ರತ್ಯಕ್ಷದರ್ಶಿಗಳು, ವಿಧಿವಿಜ್ಞಾನ ವರದಿಗಳು, ದರ್ಶನ್ ಮತ್ತು ಪವಿತ್ರಾಳ ಸಕ್ರಿಯ ಪಾತ್ರ ಬಿಚ್ಚಿಟ್ಟಿದ್ದಾರೆ.

Read Full Story
05:20 PM (IST) Aug 06

Karnataka News Live 6th August 2025ನೈಟ್‌ಶಿಫ್ಟ್ ಕೆಲಸ ಮಾಡುವ ಮಹಿಳೆಯರೇ ಎಚ್ಚರ; ವೈದ್ಯರು ಏನು ಹೇಳಿದ್ದಾರೆ ನೋಡಿ!

ರಾತ್ರಿ ಶಿಫ್ಟ್‌ನಿಂದ ಸ್ತ್ರೀಯರ ಸಂತಾನೋತ್ಪತ್ತಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ? ಗರ್ಭಧಾರಣೆಯಲ್ಲಿ ಸಮಸ್ಯೆ ಉಂಟಾಗುತ್ತದೆಯೇ? ಇಲ್ಲಿ ಸಂಪೂರ್ಣ ವಿವರಗಳನ್ನು ತಿಳಿಯಿರಿ.

Read Full Story
05:11 PM (IST) Aug 06

Karnataka News Live 6th August 2025ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ - ಎಚ್‌ಎಎಲ್ ಉದ್ಯೋಗಿ ಎಡವಟ್ಟಿಗೆ ಪೊಲೀಸರು ಕಂಗಾಲು!

ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಲ್ಲಿ ಮರೆತುಹೋದ ಟೂಲ್ ಕಿಟ್ ಬಾಕ್ಸ್ ಬಾಂಬ್ ಭೀತಿ ಸೃಷ್ಟಿಸಿತ್ತು. ಎಚ್.ಎ.ಎಲ್ ಉದ್ಯೋಗಿ ಮಂಜುನಾಥ್ ಜಾದವ್ ಅವರದ್ದಾಗಿದ್ದ ಬಾಕ್ಸ್ ಅನ್ನು ಬಾಂಬ್ ನಿಷ್ಕ್ರಿಯ ದಳ ಪರಿಶೀಲಿಸಿ ಸುರಕ್ಷಿತ ಎಂದು ಖಚಿತಪಡಿಸಿತು. ಪೊಲೀಸರು ಮಂಜುನಾಥ್‌ರಿಗೆ ಎಚ್ಚರಿಕೆ ನೀಡಿದರು.

Read Full Story
04:58 PM (IST) Aug 06

Karnataka News Live 6th August 2025ನಾನು ಸಿಂಗಲ್‌ ಪೇರೆಂಟ್‌, ಮಗಳ ಪರೀಕ್ಷೆ ಇದೆ - ಜಾಮೀನು ರದ್ದು ಮಾಡ್ಬೇಡಿ ಎಂದು ಸುಪ್ರೀಂಗೆ ಪವಿತ್ರಾ ಗೌಡ ಮನವಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಪವಿತ್ರಾ ಗೌಡ ತಮ್ಮ ಜಾಮೀನು ರದ್ದು ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿ, ಏಕೈಕ ಪೋಷಕಿ ಮತ್ತು ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದಿರುವುದನ್ನು ಪ್ರಮುಖ ವಾದವಾಗಿ ಮುಂದಿಟ್ಟಿದ್ದಾರೆ.
Read Full Story
04:14 PM (IST) Aug 06

Karnataka News Live 6th August 2025ಮಗನಿಗೆ ಕೆಲಸ ಕೊಡುವಂತೆ ಮೈಗೆ ಮಲ ಬಳಿದುಕೊಂಡು ವ್ಯಕ್ತಿಯ ವಿಚಿತ್ರ ಪ್ರತಿಭಟನೆ!

ಲಕ್ಷ್ಮೇಶ್ವರ ಪುರಸಭೆಯಲ್ಲಿ ಮಗನಿಗೆ ಕೆಲಸ ಕೊಡಿಸುವಂತೆ ವ್ಯಕ್ತಿಯೊಬ್ಬ ಮೈಗೆ ಮಲ ಬಳಿದುಕೊಂಡು ವಿಚಿತ್ರ ಪ್ರತಿಭಟನೆ ನಡೆಸಿದ್ದಾರೆ. 40 ವರ್ಷಗಳ ಕಾಲ ಪುರಸಭೆಯಲ್ಲಿ ಕಾರ್ಮಿಕನಾಗಿ ಸೇವೆ ಸಲ್ಲಿಸಿದ್ದ ಸುರೇಶ್ ಎಂಬುವವರು ಈ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸಮಾಧಾನಪಡಿಸಿ ಕಳುಹಿಸಿದ್ದಾರೆ.
Read Full Story
01:36 PM (IST) Aug 06

Karnataka News Live 6th August 2025ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರನ್ನು ಆಂಧ್ರದಲ್ಲಿ ಕೊಲೆಗೈದ ರೆಡ್ಡಿ ಗ್ಯಾಂಗ್ ಅರೆಸ್ಟ್!

ರಿಯಲ್ ಎಸ್ಟೇಟ್ ಉದ್ಯಮಿ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಹತ್ಯೆ ಪ್ರಕರಣದಲ್ಲಿ 6 ಜನರ ಬಂಧನ. 14 ಕೋಟಿ ರೂ. ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಉದ್ಯಮ ಪಾಲುದಾರನೇ ಹತ್ಯೆಗೆ ಸೂತ್ರಧಾರ.
Read Full Story