08:31 AM (IST) Apr 07

Karnataka News Live 7 April 2026ರಾತ್ರಿ ಗಸ್ತಿನಲ್ಲಿದ್ದ PSI ನಾಗಮ್ಮ, ಚಾಲಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ, ಧಮ್ಕಿ

ಚಿಂತಾಮಣಿ ತಾಲೂಕಿನ ಚಿನ್ನಸಂದ್ರದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಮಹಿಳಾ ಪಿಎಸ್‌ಐ ನಾಗಮ್ಮ ಮತ್ತು ಚಾಲಕ ವೇಣುಗೋಪಾಲ್ ಮೇಲೆ ಪುಂಡರ ಗುಂಪೊಂದು ಧಮ್ಕಿ ಹಾಕಿದೆ. ಹೋಟೆಲ್ ಮುಚ್ಚುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ದುಷ್ಕರ್ಮಿಗಳು, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ.

Read Full Story
08:13 AM (IST) Apr 07

Karnataka News Live 7 April 2026ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ ₹32,218 ತಲುಪಿ ಐತಿಹಾಸಿಕ ದಾಖಲೆ; ಮತ್ತಷ್ಟು ಏರಿಕೆ ನಿರೀಕ್ಷೆ

ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಒಣ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ ₹32,218 ತಲುಪಿ ಐತಿಹಾಸಿಕ ದಾಖಲೆ ಬರೆದಿದೆ. ತೆಂಗಿನ ಇಳುವರಿ ಕುಸಿತ, ಹೆಚ್ಚಿದ ಬೇಡಿಕೆ ಮತ್ತು ಕೊಬ್ಬರಿ ದಾಸ್ತಾನು ಕೊರತೆಯಿಂದಾಗಿ ಬೆಲೆಯಲ್ಲಿ ಈ ಏರಿಕೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
Read Full Story
07:48 AM (IST) Apr 07

Karnataka News Live 7 April 2026ನಾನು ಯಾರಿಗಾದ್ರೂ ದ್ರೋಹ ಮಾಡಿದ್ರೆ ಹೇಳಲಿ; ವಿಶ್ವಾಸ ದ್ರೋಹಿ ಎಂದ ಬಿಎಸ್‌ವೈಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

'ನಂಬಿಕೆ ದ್ರೋಹಿ' ಎಂಬ ಯಡಿಯೂರಪ್ಪನವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆಧಾರವಿದ್ದರೆ ಮಾತನಾಡಲಿ ಎಂದು ಸವಾಲು ಹಾಕಿರುವ ಅವರು, ಯಡಿಯೂರಪ್ಪನವರ ಮೇಲೆಯೇ ಅವರ ಪಕ್ಷದವರಿಂದ ಬಂದಿದ್ದ ಭ್ರಷ್ಟಾಚಾರ ಆರೋಪಗಳನ್ನು ನೆನಪಿಸಿದ್ದಾರೆ.
Read Full Story
07:38 AM (IST) Apr 07

Karnataka News Live 7 April 2026'ನಮ್ಮ ಊರಿಗೆ ಬಂದು ವೇಶ್ಯಾವಾಟಿಕೆ ನಡೆಸುತ್ತೀರಾ?..' ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಿಡಿಗೇಡಿಗಳು ಅರೆಸ್ಟ್

ಬೆಂಗಳೂರಿನ ವರ್ತೂರಿನಲ್ಲಿ ಯುವತಿಯೊಬ್ಬಳ ಮೇಲೆ ಅನುಮಾನಗೊಂಡು ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಯುವತಿ ನೀಡಿದ ದೂರಿನ ಮೇರೆಗೆ ಐವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
Read Full Story
07:19 AM (IST) Apr 07

Karnataka News Live 7 April 2026ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಕಿರುಕುಳ; ತಪಾಸಣೆ ನೆಪದಲ್ಲಿ ಅಂಗಾಂಗ ಮುಟ್ಟಿದ ಅಧಿಕಾರಿಗೆ ಹೈಕೋರ್ಟ್ ತರಾಟೆ,

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪಾಸಣೆ ನೆಪದಲ್ಲಿ ದಕ್ಷಿಣ ಕೊರಿಯಾದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ವಲಸೆ ಅಧಿಕಾರಿಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಪುರುಷರ ಶೌಚಾಲಯಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ ಅಧಿಕಾರಿಯ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
Read Full Story