ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
Karnataka News Live: ಬಿಹಾರದಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರ ಸಾವು

ಹುಬ್ಬಳ್ಳಿ: ಮೊಬೈಲ್ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತಾಂಧನನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದವು. ಇಲ್ಲಿನ ನೇಕಾರ ನಗರದ ದಾದಾಪೀರ ಹೆಬ್ಬಳ್ಳಿ ಎಂಬಾತ ದೇವಸ್ಥಾನವೊಂದರ ಬಳಿ ನಿಂತು ಹಿಂದೂ ದೇವರಿಗೆ ಅವಮಾನ ಮಾಡಿದ್ದ ವಿಡಿಯೋವನ್ನು ತನ್ನ ಮೊಬೈಲ್ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದನು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಗುರುವಾರ ಹಳೇ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ದಾದಾಪೀರನನ್ನು ಬಂಧಿಸಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮತಾಂಧನನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈಗಾಗಲೇ ಆರೋಪಿಯ ಮೇಲೆ ದೂರು ದಾಖಲಿಸಿ ಬಂಧಿಸಲಾಗಿದೆ. ಅವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದರು.
Karnataka News Live 7 February 2026ಬಿಹಾರದಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರ ಸಾವು
Karnataka News Live 7 February 2026Bengaluru ಬೀದಿ ಸ್ವಚ್ಛತೆಗೆ ಬಂತು ಯಾಂತ್ರಿಕ ಸ್ಪರ್ಶ; ₹10 ಲಕ್ಷ ವೆಚ್ಚದಲ್ಲಿ ವಿವಿಧ ವಸ್ತುಗಳ ಖರೀದಿ
ನಗರದ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಛತೆಯನ್ನು ಉನ್ನತೀಕರಿಸಲು ಮತ್ತು ಪೌರಕಾರ್ಮಿಕರ ಕೆಲಸವನ್ನು ಸರಳಗೊಳಿಸಲು ಯಾಂತ್ರಿಕೃತ ಯಂತ್ರಗಳ ಪ್ರಾಯೋಗಿಕ ಬಳಕೆಗೆ ಚಾಲನೆ ನೀಡಲಾಗಿದೆ.
Karnataka News Live 7 February 2026ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ - ಸಿಎಂ ಸಿದ್ದರಾಮಯ್ಯ
ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ ಸ್ಥಾಪಿಸಿರುವ ದರ ನಿಗದಿ ಸಮಿತಿ. ಇದನ್ನು ಮರೆಮಾಚಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಬಿಜೆಪಿ ನಾಯಕರು ಇನ್ನಾದರೂ ಸ್ವಾರ್ಥ ರಾಜಕೀಯ ನಾಟಕ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Karnataka News Live 7 February 2026Bengaluru - ಬಯಸಿದಂತೆ ಬಯಲು - ಬೆಂಗಳೂರಿನ ಬರೋಬ್ಬರಿ 194 ಸ್ಥಳಗಳ ಅಭಿವೃದ್ಧಿಗೆ ಮುಂದಾದ GBA
Karnataka News Live 7 February 2026Bengaluru Karaga fund misuse ಮಾಜಿ ಅಧ್ಯಕ್ಷನಿಂದಲೇ ಕರಗದ ಹಣ ದುರ್ಬಳಕೆ?!
ಬೆಂಗಳೂರು ಕರಗ ಮಹೋತ್ಸವಕ್ಕಾಗಿ ಸರ್ಕಾರದಿಂದ ನೀಡಿದ ಅನುದಾನವನ್ನು ಧರ್ಮರಾಯಸ್ವಾಮಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಮಾಜಿ ಅಧ್ಯಕ್ಷರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ಸಮಿತಿಯು ಸಲ್ಲಿಸಿದ ವರದಿಯಲ್ಲಿ, ನಿಯಮಗಳನ್ನು ಉಲ್ಲಂಘಿಸಿ ಹಣಕಾಸು ವಹಿವಾಟು ಬಯಲು.
Karnataka News Live 7 February 2026ರೈಲ್ವೆಯಿಂದ ಮತ್ತೆ ಕನ್ನಡಕ್ಕೆ ಅನ್ಯಾಯ
ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕೊಡಬೇಕೆಂಬ ನೀತಿ ಇದ್ದರೂ, ಸ್ಟೇಷನ್ ಮಾಸ್ಟರ್ ಹುದ್ದೆಗಳ ಮುಂಬಡ್ತಿ ಪರೀಕ್ಷೆಯಿಂದ ಕನ್ನಡವನ್ನು ಕೈಬಿಟ್ಟು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ರೈಲ್ವೆ ಇಲಾಖೆ ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದೆ.
Karnataka News Live 7 February 2026ಶಬರಿಮಲೆ ಚಿನ್ನಕನ್ನ - ಕಾಂತಾರ ನಟಗೆ ಇ.ಡಿ. ಸಮನ್ಸ್
ಶಬರಿಮಲೆ ದ್ವಾರಪಾಲಕ ಮೂರ್ತಿ ಮತ್ತು ಗರ್ಭಗುಡಿ ದ್ವಾರದ ಚಿನ್ನ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದ ಖ್ಯಾತಿಯ ಜಯರಾಂ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ನೀಡಿದೆ.