'ಭಾರತದ ತೂಗು ಸೇತುವೆ ಮನುಷ್ಯ' ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಅವರು ದೇಶಾದ್ಯಂತ 160ಕ್ಕೂ ಹೆಚ್ಚು ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದರು. ಅವರ ನಿಸ್ವಾರ್ಥ ಸೇವೆ ಮತ್ತು ತಾಂತ್ರಿಕ ಕೊಡುಗೆಯಿಂದಾಗಿ ನೂರಾರು ಹಳ್ಳಿಗಳು ಮುಖ್ಯವಾಹಿನಿಗೆ ಬಂದವು.
- Home
- News
- State
- Karnataka News Live: ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ
Karnataka News Live: ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ. ಅಲ್ಲದೆ, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು, ಪರಿಶೀಲನೆ ನಡೆಸಿದ ಬಳಿಕ ‘ಬರಗಾಲ ಘೋಷಣೆ’ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯದ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಿ, ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿ ಆಧರಿಸಿ ಬರ ಘೋಷಣೆ ಮಾಡಬೇಕಾಗುತ್ತದೆ. ಅದಕ್ಕೆ ಕಾಲಾವಕಾಶ ಬೇಕು. ಉತ್ತರ ಕರ್ನಾಟಕ ಭಾಗದ ಬರ ಕುರಿತಂತೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
Karnataka News Live 7 July 2026ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ
Karnataka News Live 7 July 202633 ದಿನ ಯೋಗಸಮಾಧಿಗೆ ಹೋಗಿದ್ದ ರಾಚೋಟೇಶ್ವರ ಶ್ರೀಗಳ ಆರೋಗ್ಯ ಹೇಗಿದೆ? ವೈದ್ಯರಿಂದ ಮಾಹಿತಿ
ಗದಗ ಜಿಲ್ಲೆಯ ಡಾ.ರಾಚೋಟೇಶ್ವರ ಸ್ವಾಮೀಜಿ ಅವರು 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
Karnataka News Live 7 July 2026ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು? ಅರವತ್ತರ ಹರೆಯದಲ್ಲಿ ಅಪಾಯದ ಮುನ್ಸೂಚನೆ?
Karnataka News Live 7 July 2026ವರುಣ ಆರ್ಭಟಕ್ಕೆ ಒಂದೇ ತಾಲೂಕಿನ 7 ಸೇತುವೆಗಳು ಜಲಾವೃತ; ಪ್ರವಾಹ ಭೀತಿಯಲ್ಲಿರೋ ಜನರು
Karnataka News Live 7 July 2026ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್ ರೈಲು ಆರಂಭಿಸಲು ಸ್ಪಂದನೆ
ಬಾಗಲಕೋಟೆಯ ರೈಲ್ವೆ ಹೋರಾಟ ಸಮಿತಿಯು ಲೋಕಾಪುರದವರೆಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ಸಂಸದ ಗದ್ದಿಗೌಡರ ಅವರನ್ನು ಒತ್ತಾಯಿಸಿದೆ. ಬಳಕೆಯಾಗದ ನಿಲ್ದಾಣಗಳು ಹಾಳಾಗುತ್ತಿದ್ದು, ಶೀಘ್ರ ರೈಲು ಆರಂಭಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.
Karnataka News Live 7 July 2026ಸ್ಲಂಗೆ ಬಿಎಲ್ಒಗಳು ಹೋಗದ ಕಾರಣ SIRಗೆ ಕಾಂಗ್ರೆಸ್ ನೆರವು - ಬಿಕೆ ಹರಿಪ್ರಸಾದ್ ಸಮರ್ಥನೆ
‘ಬಿಎಲ್ಒಗಳು ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ ಗಣತಿ ನಮೂನೆ ಭರ್ತಿ ಮಾಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ, ನಮ್ಮವರು ಕಾನೂನು ಬದ್ಧವಾಗಿ ಅಂಥವ ನಮೂನೆ ಸಮುದಾಯ ಭವನ, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಕುಳಿತು ಭರ್ತಿ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
Karnataka News Live 7 July 202646 ಸೆಕೆಂಡಲ್ಲಿ ಮಾನವನಲ್ಲಿನ 206 ಮೂಳೆ ಹೆಸರೇಳಿ ಮಾಚೇನಹಳ್ಳಿಯ 5 ವರ್ಷದ ಚಾರ್ವಿಕ್
ಚಾರ್ವಿಕ್, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.