08:26 AM (IST) Jul 07

Karnataka News Live 7 July 2026ದೇಶದ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ, ಕಳಚಿತು ಹಳ್ಳಿಗಳ ಸಂಪರ್ಕದ ಕೊಂಡಿ

'ಭಾರತದ ತೂಗು ಸೇತುವೆ ಮನುಷ್ಯ' ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಅವರು ದೇಶಾದ್ಯಂತ 160ಕ್ಕೂ ಹೆಚ್ಚು ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದರು. ಅವರ ನಿಸ್ವಾರ್ಥ ಸೇವೆ ಮತ್ತು ತಾಂತ್ರಿಕ ಕೊಡುಗೆಯಿಂದಾಗಿ ನೂರಾರು ಹಳ್ಳಿಗಳು ಮುಖ್ಯವಾಹಿನಿಗೆ ಬಂದವು.

Read Full Story
08:10 AM (IST) Jul 07

Karnataka News Live 7 July 202633 ದಿನ ಯೋಗಸಮಾಧಿಗೆ ಹೋಗಿದ್ದ ರಾಚೋಟೇಶ್ವರ ಶ್ರೀಗಳ ಆರೋಗ್ಯ ಹೇಗಿದೆ? ವೈದ್ಯರಿಂದ ಮಾಹಿತಿ

ಗದಗ ಜಿಲ್ಲೆಯ ಡಾ.ರಾಚೋಟೇಶ್ವರ ಸ್ವಾಮೀಜಿ ಅವರು 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

Read Full Story
07:55 AM (IST) Jul 07

Karnataka News Live 7 July 2026ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು? ಅರವತ್ತರ ಹರೆಯದಲ್ಲಿ ಅಪಾಯದ ಮುನ್ಸೂಚನೆ?

ಪುತ್ತೂರು-ಬೆಳ್ತಂಗಡಿ ಸಂಪರ್ಕ ಕೊಂಡಿಯಾಗಿರುವ 60 ವರ್ಷ ಹಳೆಯ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಮಿತಿಮೀರಿದ ಘನ ವಾಹನ ಸಂಚಾರ ಮತ್ತು ನಿರ್ವಹಣೆ ಕೊರತೆಯಿಂದ ಸೇತುವೆ ದುರ್ಬಲಗೊಂಡಿದ್ದು, ತಕ್ಷಣವೇ ಅಧಿಕಾರಿಗಳು ಪರಿಶೀಲಿಸಿ ದುರಸ್ತಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Read Full Story
07:45 AM (IST) Jul 07

Karnataka News Live 7 July 2026ವರುಣ ಆರ್ಭಟಕ್ಕೆ ಒಂದೇ ತಾಲೂಕಿನ 7 ಸೇತುವೆಗಳು ಜಲಾವೃತ; ಪ್ರವಾಹ ಭೀತಿಯಲ್ಲಿರೋ ಜನರು

ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಏಳು ಕೆಳಹಂತದ ಸೇತುವೆಗಳು ಜಲಾವೃತವಾಗಿದ್ದು, ಮರಗಳು ಉರುಳಿಬಿದ್ದ ಘಟನೆಗಳು ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಲಪ್ರಭಾ ನದಿಗೆ ಮತ್ತೆ ಜೀವಕಳೆ ಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದೆ.
Read Full Story
07:34 AM (IST) Jul 07

Karnataka News Live 7 July 2026ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್‌ ರೈಲು ಆರಂಭಿಸಲು ಸ್ಪಂದನೆ

ಬಾಗಲಕೋಟೆಯ ರೈಲ್ವೆ ಹೋರಾಟ ಸಮಿತಿಯು ಲೋಕಾಪುರದವರೆಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ಸಂಸದ ಗದ್ದಿಗೌಡರ ಅವರನ್ನು ಒತ್ತಾಯಿಸಿದೆ. ಬಳಕೆಯಾಗದ ನಿಲ್ದಾಣಗಳು ಹಾಳಾಗುತ್ತಿದ್ದು, ಶೀಘ್ರ ರೈಲು ಆರಂಭಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.

Read Full Story
07:25 AM (IST) Jul 07

Karnataka News Live 7 July 2026ಸ್ಲಂಗೆ ಬಿಎಲ್‌ಒಗಳು ಹೋಗದ ಕಾರಣ SIRಗೆ ಕಾಂಗ್ರೆಸ್ ನೆರವು - ಬಿಕೆ ಹರಿಪ್ರಸಾದ್ ಸಮರ್ಥನೆ

‘ಬಿಎಲ್‌ಒಗಳು ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ ಗಣತಿ ನಮೂನೆ ಭರ್ತಿ ಮಾಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ, ನಮ್ಮವರು ಕಾನೂನು ಬದ್ಧವಾಗಿ ಅಂಥವ ನಮೂನೆ ಸಮುದಾಯ ಭವನ, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಕುಳಿತು ಭರ್ತಿ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ 

Read Full Story
07:19 AM (IST) Jul 07

Karnataka News Live 7 July 202646 ಸೆಕೆಂಡಲ್ಲಿ ಮಾನವನಲ್ಲಿನ 206 ಮೂಳೆ ಹೆಸರೇಳಿ ಮಾಚೇನಹಳ್ಳಿಯ 5 ವರ್ಷದ ಚಾರ್ವಿಕ್

ಚಾರ್ವಿಕ್‌, ಇತ್ತೀಚೆಗೆ ತನ್ನ ದೇಹವನ್ನೇ ತೋರಿಸಿಕೊಂಡು ದೇಹದಲ್ಲಿರುವ ಮೂಳೆಯ ಹೆಸರು ಮತ್ತು ಅಲ್ಲಿರುವ ಮೂಳೆಗಳ ಸಂಖ್ಯೆಯನ್ನು ಕೇವಲ 46 ಸೆಕೆಂಡ್‌ನಲ್ಲಿ ಹೇಳುವ ಮೂಲಕ ಈ ಸಾಧನೆ ಮಾಡಿದ್ದಾನೆ.

Read Full Story