- Home
- News
- State
- Karnataka News Live: ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
Karnataka News Live: ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ

ಮಂಡ್ಯ: ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. 3 ವರ್ಷಗಳ ಹಿಂದೆ ಜೂನ್ನಲ್ಲಿ ಅಣೆಕಟ್ಟೆಯೊಳಗೆ ಈ ಪ್ರಮಾಣದ ನೀರಿನ ಮಟ್ಟ ದಾಖಲಾಗಿತ್ತು. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 107.68 ಅಡಿ ನೀರು ಸಂಗ್ರಹವಾಗಿತ್ತು. ಆ ವೇಳೆ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿ ಸುರಿದಿತ್ತು. ಜೊತೆಗೆ ಮುಂಗಾರು ಮಳೆಯೂ ನಿರೀಕ್ಷೆಯಂತೆ ಆಗಮನವಾಗಿದ್ದರಿಂದ ಅಂದು ಜಲಾಶಯಕ್ಕೆ ೬೫೧೩ ಕ್ಯುಸೆಕ್ ನೀರು ಹರಿದುಬರುತ್ತಿತ್ತು. ಅಂದು ಜಲಾಶಯದಲ್ಲಿ 29.543 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.
ಪ್ರಸ್ತುತ ಜಲಾಶಯದಲ್ಲಿ 81.36 ಅಡಿ ನೀರಿದ್ದು, ಅಣೆಕಟ್ಟೆಗೆ 528 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯದಿಂದ ನದಿ ಮತ್ತು ನಾಲೆ ಸೇರಿ 852 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ 11.399 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ಬಾರಿ ಮುಂಗಾರು ಪೂರ್ವ ಮಳೆ ಕೈಕೊಟ್ಟ ಪರಿಣಾಮ ಜಲಾಶಯದಿಂದ ಬೇಸಿಗೆ ಬೆಳೆಗಳಿಗೆ ನೀರು ಹರಿಸಲಾಯಿತು.
ಹಲವು ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲಾಯಿತು. ಇದರಿಂದ ಅಣೆಕಟ್ಟೆಯಲ್ಲಿ ನೀರನ್ನು ಕಾಯ್ದಿರಿಸಲು ಸಾಧ್ಯವಾಗಲಿಲ್ಲ. ಮಳೆ ಬಾರದಿದ್ದರೆ ಕುಡಿಯುವ ನೀರಿಗೂ ತತ್ವಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಜಲಾಶಯದಲ್ಲಿ ನೀರು ಕಡಿಮೆ ಆಗುತ್ತಿರುವುದರಿಂದ ನೀರೊಳಗೆ ಮುಳುಗಿದ್ದ ದೇಗುಲಗಳು ಗೋಚರಿಸಲಾರಂಭಿಸಿವೆ.
Karnataka News Live 7 June 2026ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
Karnataka News Live 7 June 2026ಮಂಡ್ಯದಲ್ಲಿ ಶುಂಠಿ ಬೆಳೆಯಲು ಹೊರರಾಜ್ಯದವರಿಗೆ ಭೂಮಿ ಗುತ್ತಿಗೆ; ಉದ್ಯಮಿಗಳಿಂದ ಹಣದ ಆಮಿಷ
ಹೊರ ರಾಜ್ಯದ ಉದ್ಯಮಿಗಳು ಹಣದ ಆಮಿಷವೊಡ್ಡಿ ರೈತರಿಂದ ಭೂಮಿಯನ್ನು ಗುತ್ತಿಗೆ ಪಡೆದು ಶುಂಠಿ ಬೆಳೆಯುತ್ತಿದ್ದಾರೆ. ಈ ವಾಣಿಜ್ಯ ಬೆಳೆಯು ಮಣ್ಣಿನ ಫಲವತ್ತತೆಯನ್ನು ತೀವ್ರವಾಗಿ ಕಡಿಮೆ ಮಾಡುವುದಲ್ಲದೆ, ಅತಿಯಾದ ಕೀಟನಾಶಕ ಬಳಕೆಯಿಂದ ದೀರ್ಘಕಾಲಿಕ ಹಾನಿಯನ್ನುಂಟುಮಾಡುತ್ತಿದೆ.
Karnataka News Live 7 June 2026ಪಟ್ಟಣದಲ್ಲಿನ ಲೋಕಲ್ ಬಸ್ ಸಂಚಾರ ರದ್ದುಗೊಳಿಸುವಂತೆ ಶಾಸಕರಿಗೆ ಆಟೋ ಚಾಲಕರ ಮನವಿ
ರಸ್ತೆ ಅಗಲೀಕರಣದಿಂದ ಬಸ್ ಸಂಚಾರ ಮಾರ್ಗ ಬದಲಾಗಿದ್ದು ಮತ್ತು ಲೋಕಲ್ ಬಸ್ ಸೇವೆ ಆರಂಭವಾಗಿರುವುದರಿಂದ ತಮ್ಮ ಜೀವನೋಪಾಯಕ್ಕೆ ತೊಂದರೆಯಾಗಿದೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಲೋಕಲ್ ಬಸ್ ಸಂಚಾರವನ್ನು ರದ್ದುಗೊಳಿಸಿ, ಎಲ್ಲಾ ಬಸ್ಗಳನ್ನು ಬಸ್ ನಿಲ್ದಾಣದ ಮೂಲಕವೇ ಓಡಾಟ ನಡೆಸುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.
Karnataka News Live 7 June 2026ಇನ್ಮುಂದೆ ಮದುವೆ ದಿಬ್ಬಣಗಳ ಫೋಟೋ, ವಿಡಿಯೋ ಚಿತ್ರೀಕರಣ ಮಾಡಲ್ಲ - ಫೋಟೋಗ್ರಾಫರ್ಸ್ ನಿರ್ಧಾರ
ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇನ್ನು ಮುಂದೆ ಮದುವೆ ದಿಬ್ಬಣದ (ಬಾರಾತ್) ಚಿತ್ರೀಕರಣ ಮಾಡದಿರಲು ನಿರ್ಧರಿಸಿದೆ. ತಡರಾತ್ರಿ, ಭದ್ರತಾ ಸಮಸ್ಯೆಗಳು ಮತ್ತು ಅನುಚಿತ ವರ್ತನೆಯ ಕಾರಣಗಳಿಂದ ಈ ತೀರ್ಮಾನ ಕೈಗೊಂಡಿದ್ದು, ಕೇವಲ ಮದುವೆ ಹಾಲ್ನಲ್ಲಿ ಮಾತ್ರ ಚಿತ್ರೀಕರಣ ನಡೆಸುವುದಾಗಿ ಸ್ಪಷ್ಟಪಡಿಸಿದೆ.
Karnataka News Live 7 June 2026Belagavi - ಅನಾಥ ಶಿಶುವಿಗೆ ‘ಯತೀನ್’ ನಾಮಕರಣ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
Karnataka News Live 7 June 2026ಬರ ಜಿಲ್ಲೆ ಹಣೆಪಟ್ಟಿ ಹೊಂದಿದ್ದ ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿ; ಕೋಟಿ ಸಸಿಗಳನ್ನು ನೆಟ್ಟ ಕನಸುಗಾರ
Karnataka News Live 7 June 2026ಪ್ರಧಾನಿ ಮೋದಿ ಭೇಟಿ ವೇಳೆ ಜಿಲೆಟಿನ್ ಕಡ್ಡಿಪತ್ತೆ - ಆರೋಪಿ ಲೋಹಿತ್ಗೆ ಮಂಪರು ಪರೀಕ್ಷೆ
ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಲೋಹಿತ್ನನ್ನು ಬಂಧಿಸಲಾಗಿತ್ತು. ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ಆರೋಪಿ ಹೇಳಿದ್ದಾನೆ.