08:03 AM (IST) May 07

Karnataka News Live 7 May 2026Interview | ತಾಪಮಾನ ಹೆಚ್ಚಳಕ್ಕೆ ಎಲ್‌ನಿನೋ ಅಷ್ಟೇ ಹೊಣೆ ಅಲ್ಲ; ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಹೇಳಿದ್ದೇನು?

ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ ಅವರು, ರಾಜ್ಯದಲ್ಲಿನ ತೀವ್ರ ತಾಪಮಾನ ಏರಿಕೆಗೆ ಹವಾಮಾನ ವೈಪರೀತ್ಯ, ಜಲಮೂಲಗಳ ನಾಶ ಹಾಗೂ ಎಲ್‌ನಿನೋ ದುಷ್ಪರಿಣಾಮವೇ ಕಾರಣ ಎಂದು ವಿಶ್ಲೇಷಿಸಿದ್ದಾರೆ. ಕೆರೆಗಳ ಪುನಶ್ಚೇತನ, ಹಸಿರು ಹೊದಿಕೆ ಹೆಚ್ಚಳದಂತಹ ಕ್ರಮಗಳನ್ನು ಕೈಗೊಳ್ಳುಂತೆ ತಿಳಿಸಿದ್ದಾರೆ.

Read Full Story
08:02 AM (IST) May 07

Karnataka News Live 7 May 2026ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಯಾವಾಗ? ಸಂಸದರ ಉತ್ತರ ಏನು?

ಬೆಂಗಳೂರಿನಿಂದ ವಿಜಯಪುರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ವಿಳಂಬವಾಗಲು ಕಾರಣವನ್ನು ಸಂಸದ ರಮೇಶ್ ಜಿಗಜಿಣಗಿ ವಿವರಿಸಿದ್ದಾರೆ. . ಯಾವುದೇ ರೀತಿಯ ತಪ್ಪು ಗ್ರಹಿಕೆಗೆ ಅಂಟಿಕೊಳ್ಳದೇ ರೈಲಿನ ಕುರಿತ ಅಪಪ್ರಚಾರ ಮಾಡಬಾರದು ಎಂದು ಸಂಸದ ರಮೇಶ ಜಿಗಜಿಣಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read Full Story
07:49 AM (IST) May 07

Karnataka News Live 7 May 2026ಹೊಸಪೇಟೆ ಮಾರ್ಗವಾಗಿ ಚಲಿಸುವ ಯಶವಂತಪುರ-ವಿಜಯಪುರ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

ಯಶವಂತಪುರ-ವಿಜಯಪುರ ಮತ್ತು ಯಶವಂತಪುರ-ಸಿಂಧನೂರು ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಲಾಗುತ್ತಿದೆ. ಮೇ 8 ರಿಂದ ಜಾರಿಗೆ ಬರುವ ಈ ಸೌಲಭ್ಯದಲ್ಲಿ ಮೂರನೇ ದರ್ಜೆ ಎ.ಸಿ, ಸ್ಲೀಪರ್ ಹಾಗೂ ಸಾಮಾನ್ಯ ದರ್ಜೆಯ ಬೋಗಿಗಳು ಸೇರಲಿವೆ.
Read Full Story
07:39 AM (IST) May 07

Karnataka News Live 7 May 2026IPL Final match - ಶಾಸಕರ ಟಿಕೆಟ್‌ಗೂ ಐಪಿಎಲ್‌ ಸ್ಥಳಾಂತರಕ್ಕೂ ನಂಟಿಲ್ಲ; ದೊಡ್ಡ ಸ್ಟೇಡಿಯಂ ಇದೆ ಅಂತ ಗುಜರಾತಿಗೆ ಶಿಫ್ಟ್‌ - ಡಿಕೆಶಿ

ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ, ಐಪಿಎಲ್‌ ಅಂತಿಮ ಪಂದ್ಯ ಬೆಂಗಳೂರಿನಿಂದ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಕಾರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟನೆ.

Read Full Story
07:24 AM (IST) May 07

Karnataka News Live 7 May 2026ಗ್ರಾಮದೇವಿ ಜಾತ್ರಾ ಉತ್ಸವಕ್ಕೆ 2 ದಿನದಲ್ಲಿ 50 ಟನ್ ಭಂಡಾರ ಪೂರೈಕೆ; ಇಡೀ ಊರು ಭಂಡಾರಮಯ

ಸವದತ್ತಿ ಪಟ್ಟಣದಲ್ಲಿ ಗ್ರಾಮದೇವಿ ಜಾತ್ರೆಯ ಸಂಭ್ರಮ ಹೆಚ್ಚಾಗಿದ್ದು, ದೇವಿಯರನ್ನು ಕಟ್ಟೆಯ ಮೇಲೆ ಪ್ರತಿಷ್ಠಾಪಿಸಿದ ನಂತರ ಸಾಂಪ್ರದಾಯಿಕ ಪೂಜೆಗಳು ಆರಂಭವಾಗಿವೆ. ಮಂಗಳವಾರ, ದೇವಿಯರು ಗೌಡರು, ಕುಲಕರ್ಣಿಗಳು ಸೇರಿದಂತೆ 16 ಮನೆತನಗಳಿಂದ ಉಡಿ ತುಂಬಿಸಿಕೊಂಡಿದ್ದು, ಊರೆಲ್ಲಾ 50 ಟನ್‌ಗೂ ಅಧಿಕ ಭಂಡಾರದಿಂದ ಹಳದಿಮಯವಾಗಿದೆ.

Read Full Story
07:23 AM (IST) May 07

Karnataka News Live 7 May 2026ಪಿಯು ಪರೀಕ್ಷಾ ವೆಚ್ಚ ಪಾವತಿಗೆ ಸರ್ಕಾರ 81.20 ಕೋಟಿ ರು. ಬಿಡುಗಡೆ | ಪ್ರೌಢಶಾಲಾ ಶಿಕ್ಷಕರ ಬಡ್ತಿಗಾಗಿ ಅರ್ಹತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Karnataka 2nd PUC exam funds ದ್ವಿತೀಯ ಪಿಯುಸಿ ಪರೀಕ್ಷಾ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 81.20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅಲ್ಲದೆ, ಪ್ರೌಢಶಾಲಾ ಶಿಕ್ಷಕರನ್ನು ಪಿಯು ಕಾಲೇಜು ಉಪನ್ಯಾಸಕರನ್ನಾಗಿ ಬಡ್ತಿ ನೀಡುವ ಅರ್ಹತಾ ಪರೀಕ್ಷೆಯನ್ನು ಮೇ 26 ರಿಂದ ನಡೆಸಲು ತೀರ್ಮಾನಿಸಲಾಗಿದೆ.

Read Full Story