- Home
- News
- State
- Karnataka News Live: ಗಜೇಂದ್ರಗಡದಲ್ಲಿ ಯುರೋಪ್, ಮಧ್ಯ ಏಷ್ಯಾದ ವಲಸೆ ಹಕ್ಕಿ 'ಸಣ್ಣ ಕೊಂಬಿನ ಗೂಬೆ' ಗೋಚರ!
Karnataka News Live: ಗಜೇಂದ್ರಗಡದಲ್ಲಿ ಯುರೋಪ್, ಮಧ್ಯ ಏಷ್ಯಾದ ವಲಸೆ ಹಕ್ಕಿ 'ಸಣ್ಣ ಕೊಂಬಿನ ಗೂಬೆ' ಗೋಚರ!

ವಿಜಯಪುರ: ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಸೇರಿ ಬಿಜೆಪಿ ಸರ್ಕಾರ ರಚನೆ ಮಾಡಿದರೆ ಆತ್ಮಹತ್ಯೆ ಮಾಡಿಕೊಂಡಂತೆ, ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಒಪ್ಪಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಡಿಕೆಶಿಯೊಂದಿಗೆ ಸೇರಿ ಬಿಜೆಪಿ ಸರ್ಕಾರ ಮಾಡುತ್ತೆ ಅನ್ನೋ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಸದನದಲ್ಲಿ ಅಬಕಾರಿ ಸಚಿವರ ವಿರುದ್ಧ ಹೋರಾಟ ಮಾಡುತ್ತಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರು ಎಲ್ಲಿಯೂ ಕೂಡ ಕಾಣಿಸಿಕೊಳ್ಳಲಿಲ್ಲ. ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಕೇಳಿ ಬಂದಾಗ ಇವರ್ಯಾರು ಹೋರಾಟ ಮಾಡಲಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ಕೇಳಿ ಬಂದಾಗ ಗಂಭೀರ ಹೋರಾಟ ಮಾಡಲಿಲ್ಲ. ಈಗ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು.
Karnataka News Live 8 February 2026ಗಜೇಂದ್ರಗಡದಲ್ಲಿ ಯುರೋಪ್, ಮಧ್ಯ ಏಷ್ಯಾದ ವಲಸೆ ಹಕ್ಕಿ 'ಸಣ್ಣ ಕೊಂಬಿನ ಗೂಬೆ' ಗೋಚರ!
Karnataka News Live 8 February 2026ಎಪ್ಸ್ಟೀನ್ನ ಸ್ವೀಡಿಷ್ ಯುವತಿ ಆಫರ್ಗೆ ಅನಿಲ್ ಅಂಬಾನಿ ಓಕೆ
ಅಮೆರಿಕದ ಲೈಂಗಿಕ ಹಗರಣಗಳ ಆರೋಪಿ ಜೆಫ್ರಿ ಎಪ್ಸ್ಟೀನ್ ಕೇಸಲ್ಲಿ ಇದೀಗ ಉದ್ಯಮಿ ಅನಿಲ್ ಅಂಬಾನಿ ಹೆಸರು ದೊಡ್ಡಮಟ್ಟದಲ್ಲಿ ಕೇಳಿಬಂದಿದೆ. 2017ರ ಮಾರ್ಚ್ 9ರಂದು ಅನಿಲ್ ಅಂಬಾನಿ, ಎಪ್ಸ್ಟೀನ್ಗೆ ‘ಯಾರನ್ನು ಶಿಫಾರಸು ಮಾಡುವೆ?’ ಎಂದು ಸಂದೇಶ
Karnataka News Live 8 February 2026ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಸಲ್ಲು - ಭಾಗ್ವತ್ ಭಾಷಣ ಕಿವಿಗೊಟ್ಟು ಆಲಿಕೆ
ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ 100 ವರ್ಷ ಪೂರ್ಣವಾದ ಹಿನ್ನೆಲೆ ಇಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗಿಯಾಗಿದ್ದರು. ಈ ವೇಳೆ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗ್ವತ್ ಅವರ ಭಾಷಣವನ್ನು ನಟ ಸಲ್ಮಾನ್ ಖಾನ್ ತೀವ್ರ ಗಮನವಿಟ್ಟು ಕೇಳಿಸಿಕೊಂಡಿದ್ದು ಗಮನ ಸೆಳೆಯಿತು.
Karnataka News Live 8 February 2026ಕನ್ನಡದಲ್ಲಿ ಪರೀಕ್ಷೆ ಇಲ್ಲದಿದ್ದರೆ ರೈಲ್ವೆಗೆ ಬಹಿಷ್ಕಾರ - ಹೊರಟ್ಟಿ ಎಚ್ಚರಿಕೆ
ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುತ್ತಿರುವುದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ರೈಲ್ವೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದರು.
Karnataka News Live 8 February 2026ಗಲ್ವಾನ್ ಸಂಘರ್ಷ ಬಳಿಕ ಚೀನಾ ರಹಸ್ಯ ಅಣು ಪರೀಕ್ಷೆ - ಅಮೆರಿಕ!
2020ರಲ್ಲಿ ಭಾರತ ಮತ್ತು ಚೀನಾ ಸೈನಿಕರು ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಮುಖಾಮುಖಿಯಾಗಿ ಬಡಿದಾಡಿದ ವಾರದ ಬಳಿಕ ಚೀನಾ ರಹಸ್ಯವಾಗಿ ಅಣು ಪರೀಕ್ಷೆ ನಡೆಸಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
Karnataka News Live 8 February 2026ಆಪರೇಷನ್ ಸಿಂದೂರ ‘ಜಿಹಾದ್’ ಎಂದಿದ್ದ ಮುನೀರ್ - ಜೈಷ್ ಉಗ್ರ
ಆಪರೇಷನ್ ಸಿಂದೂರವನ್ನು ಪಾಕ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಆಸೀಂ ಮುನೀರ್, ಘಜ್ವಾ-ಎ-ಹಿಂದ್ ಎಂದು ಕರೆದಿದ್ದರು. ಷರಿಯಾ ಕಾನೂನಿನ ಅನ್ವಯ ಇದರ ಅರ್ಥ ಇಸ್ಲಾಮಿಕ್ ಕಾನೂನನ್ನು ಜಾರಿಗೊಳಿಸಲು ನಡೆಸುವ ಸಶಸ್ತ್ರ ಹೋರಾಟ ಅಥವಾ ಜಿಹಾದ್ ಎಂದು
Karnataka News Live 8 February 2026ವಿಜಯನಗರ 3ನೇ ಹಂತದಲ್ಲಿ ಒತ್ತುವರಿಯಾಗಿದ್ದ 140 ಕೋಟಿ ಮೌಲ್ಯದ 7 ಎಕರೆ ಜಾಗ ಎಂಡಿಎ ವಶಕ್ಕೆ
Karnataka News Live 8 February 2026ಬಾಂಗ್ಲಾ ಜೈಲಲ್ಲಿ ಹಿಂದೂ ಸಂಸದ ಸೇನ್ ನಿಗೂಢ ಸಾವು - ಅನುಮಾನ
ಬಾಂಗ್ಲಾದಲ್ಲಿ ಹಿಂದೂ ಸಂಸದ ರಮೇಶ್ ಚಂದ್ರ ಸೇನ್ ಜೈಲಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅಧಿಕಾರಿ ಇದು ಅನಾರೋಗ್ಯದಿಂದ ಸಂಭವಿಸಿದ ಸಾವು ಎಂದರೆ, ಇದು ಉದ್ದೇಶಪೂರ್ವಕ ಕೊಲೆ. ಹತ್ಯಾಕಾಂಡದ ಭಾಗ ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ಆರೋಪಿಸಿದೆ.
Karnataka News Live 8 February 2026ಪೊಲೀಸರು ಕೇಸ್ ಹಾಕದಿದ್ರೆ ನಮಗೆ ಅರ್ಜಿ ಸಲ್ಲಿಸಿ - ಹೈಕೋರ್ಟ್ | ಏನಿದು ಪ್ರಕರಣ?
Police Not Registering Your FIR? ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದರೆ, ದೂರುದಾರರು ಬಿಎನ್ಎಸ್ ಕಾಯಿದೆಯಡಿ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
Karnataka News Live 8 February 2026ಬಿಜೆಪಿಯ ರಿತು ಮುಂಬೈಗೆ ಮೊದಲ ಬಿಜೆಪಿ ಮೇಯರ್
ದೇಶದ ಶ್ರೀಮಂತ ನಗರಪಾಲಿಕೆ ಖ್ಯಾತಿಯ ಬೃಹನ್ಮುಂಬೈ ಪಾಲಿಕೆ ಮೇಯರ್ ಆಗಿ ಬಿಜೆಪಿಯ ರಿತು ತಾವ್ಡೆ ಮತ್ತು ಉಪಮಯೇರ್ ಆಗಿ ಶಿವಸೇನೆ (ಶಿಂಧೆ ಬಣ)ಯ ಸಂಜಯ್ ಶಂಕರ್ ಘಡಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಸ್ಥಾನ ಸಿಕ್ಕಿದ ದಾಖಲೆ
Karnataka News Live 8 February 2026ಮಂಗನ ಕಾಯಿಲೆಗೆ ಲಸಿಕೆ ರೆಡಿ - ಮಾನವ ಪ್ರಯೋಗ ಆರಂಭ
ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಲ್ಲಿ ತೀವ್ರ ಆತಂಕ ಮೂಡಿಸಿರುವ ಮಂಗನ ಕಾಯಿಲೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Karnataka News Live 8 February 2026ಸಿಎಂ ಗಾದಿ ಸಂಚಲನ - ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
‘5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ. ಬದಲಾವಣೆ ಬೇಡಿಕೆಗೆ ಹೈಕಮಾಂಡ್ ಸೊಪ್ಪು ಹಾಕಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ನೀಡಿದ ಹೇಳಿಕೆ ಸತತ 2ನೇ ದಿನವೂ ಬಿರುಸಿನ ಪ್ರತಿಕ್ರಿಯೆಗೆ ಕಾರಣವಾಗಿದೆ
Karnataka News Live 8 February 2026india US Deal - ಭಾರತ-ಅಮೆರಿಕ ಒಪ್ಪಂದಯಾರಿಗೂ ಲಾಭವಲ್ಲ - ಸಂತೋಷ್ ಲಾಡ್
india us deal dಭಾರತ ಹಾಗೂ ಅಮೆರಿಕ ಒಪ್ಪಂದದಿಂದ ಯಾರಿಗೂ ಲಾಭವಿಲ್ಲ. ಈ ಮಧ್ಯೆಯೂ ಅಮೆರಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಒಪ್ಪುತ್ತಿದ್ದಾರೆ. ಆ ಮೂಲಕ ಅಮೆರಿಕ ಹೇಳಿದಂತೆ ನಾವು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಿಡಿಕಾರಿದರು.