- Home
- News
- State
- Karnataka News Live: ಅಸಮಾನ್ಯಳಲ್ಲಿ ಅಸಮಾನ್ಯ ಈ ಪುಟಾಣಿ - Naa Ninna Bidalaare ಹಿತಾ ನಿಬ್ಬೆರಗಾಗುವ ಫೋಟೋಶೂಟ್!
Karnataka News Live: ಅಸಮಾನ್ಯಳಲ್ಲಿ ಅಸಮಾನ್ಯ ಈ ಪುಟಾಣಿ - Naa Ninna Bidalaare ಹಿತಾ ನಿಬ್ಬೆರಗಾಗುವ ಫೋಟೋಶೂಟ್!

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಅವಿಶ್ವಾಸ ನಿರ್ಣಯ ಮಂಡನೆಗೂ ಪ್ರತಿಪಕ್ಷಗಳು ಅಣಿಯಾಗಿದ್ದವು, ಇದರ ಸೂಚನೆ ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಬ್ರೇಕ್ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಜತೆಗೆ ಬಿಜೆಪಿ ಒಡಕು, ಬಿಜೆಪಿ-ಜೆಡಿಎಸ್ ನಡುವಿನ ಸಾಮರಸ್ಯ ಕೊರತೆ, ಜೆಡಿಎಸ್ನಲ್ಲಿ ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರು ಪಕ್ಷದ ವಿರುದ್ಧವೇ ಧ್ವನಿ ಎತ್ತಿರುವುದನ್ನೂ ಕಾಂಗ್ರೆಸ್ ದಾಳವಾಗಿ ಬಳಸುವ ಸಾಧ್ಯತೆಯಿದೆ. ಮತ್ತೊಂದೆಡೆ ಕಬ್ಬು ಬೆಂಬಲ ಬೆಲೆ ಹೆಚ್ಚಳ ಮಾಡದಿರುವ ಕೇಂದ್ರದ ನಿರ್ಲಕ್ಷ್ಯ, ಸಕ್ಕರೆ ಎಂಎಸ್ಪಿ ದರ ಹೆಚ್ಚಿಸದ, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸದ ಕೇಂದ್ರ ಸರ್ಕಾರದಿಂದಲೇ ಕಬ್ಬು ಬೆಲೆ ಕುಸಿದಿದೆ ಎಂದು ಬೊಟ್ಟು ಮಾಡಿ ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜಾಗಿದೆ.
Karnataka News Live 9 December 2025ಅಸಮಾನ್ಯಳಲ್ಲಿ ಅಸಮಾನ್ಯ ಈ ಪುಟಾಣಿ - Naa Ninna Bidalaare ಹಿತಾ ನಿಬ್ಬೆರಗಾಗುವ ಫೋಟೋಶೂಟ್!
Karnataka News Live 9 December 2025Bigg Boss ಅಭಿಷೇಕ್ಗೆ ದೊಡ್ಮನೆಯಿಂದ ಸಿಕ್ಕಿರೋ ಸಂಭಾವನೆ ಎಷ್ಟು? ಫ್ಯಾನ್ಸ್ ನಿರೀಕ್ಷೆ ಸುಳ್ಳಾಗೋಯ್ತು!
ಕಲರ್ಸ್ ಕನ್ನಡದ ಬಿಗ್ ಬಾಸ್ 12 ರಿಂದ ಹೊರಬಂದಿರುವ ನಟ ಅಭಿಷೇಕ್ ಶ್ರೀಕಾಂತ್, ತಮಗೆ ಸಿಕ್ಕ ಸಂಭಾವನೆಯ ಬಗ್ಗೆ ಮಾತನಾಡಿದ್ದಾರೆ. ಹಲವು ಸಂದರ್ಶನಗಳಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗಿದ್ದು, ಅದರ ಬಗ್ಗೆ ನಟ ಹೇಳಿದ್ದೇನು? ಅಭಿಮಾನಿಗಳ ನಿರೀಕ್ಷೆ ಸುಳ್ಳಾಗಿದ್ದೇಕೆ?
Karnataka News Live 9 December 2025ಕರ್ಮ ಯಾರನ್ನೂ ಬಿಡಲ್ಲ, ಆ ತಾಯಿ ನೋಡ್ತಾ ಇರ್ತಾಳೆ - Bigg Boss ಈ ಸ್ಪರ್ಧಿ ಬಗ್ಗೆ ಉಗ್ರಂ ಮಂಜು ಗರಂ
Karnataka News Live 9 December 2025ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ ನಡೆದಿದೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಈ ದುರಂತ ನಡೆದಿದೆ. ಗೀಸರ್ ಅನಿಲ ಸೋರಿಕೆಯಾಗಿ ತಾಯಿ ಹಾಗೂ ಮಗೂ ಇಬ್ಬರು ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Karnataka News Live 9 December 2025ಗಿಲ್ಲಿಯಲ್ಲ, Bigg Boss ವಿನ್ನರೇ ಬೇರೆ - ಅಭಿಷೇಕ್ ಹೇಳಿದ ಆ ಹೆಸರು ಯಾರದ್ದು, ಇಲ್ಲಿದೆ ಕುತೂಹಲ
ಪ್ರಬಲ ಸ್ಪರ್ಧಿ ಎನಿಸಿದ್ದ ಅಭಿಷೇಕ್ ಅವರು ಕ್ಯಾಪ್ಟನ್ ಆಗಿದ್ದಾಗಲೇ ಬಿಗ್ ಬಾಸ್ ಮನೆಯಿಂದ ಅಚ್ಚರಿಯ ರೀತಿಯಲ್ಲಿ ಎಲಿಮಿನೇಟ್ ಆಗಿದ್ದಾರೆ. ಮನೆಯಿಂದ ಹೊರಬಂದ ಅವರು, ವಿನ್ನರ್ ಹಾಗೂ ಟಾಪ್ 5 ಸ್ಪರ್ಧಿಗಳು ಯಾರು ಎಂಬುದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Karnataka News Live 9 December 2025Bigg Boss ಭವ್ಯಾ ಗೌಡ ಮದ್ವೆ ಅವಿನಾಶ್ ಶೆಟ್ಟಿ ಜೊತೆನಾ? Karna ನಿಧಿಯ ಅಸಲಿ ಗುಟ್ಟೇನು? ನಟ ಹೇಳಿದ್ದೇನು?
Karnataka News Live 9 December 2025ನನ್ನ ಶಿಷ್ಯನೆಂದು ಬಿಗ್ ಬಾಸ್ ಮನೆಯೊಳಗೆ ಯಾರನ್ನೂ ಕಳಿಸಿಲ್ಲ! ಕಿಚ್ಚ ಸುದೀಪ್ ಈ ಮಾತು ಹೇಳಿದ್ಯಾರಿಗೆ ಗೊತ್ತಾಯ್ತ?
ಬಿಗ್ ಬಾಸ್ ಮನೆಗೆ ತಮ್ಮ ಶಿಷ್ಯಂದಿರನ್ನು ಕಳುಹಿಸುತ್ತಾರೆ ಎಂಬ ಆರೋಪಕ್ಕೆ ಕಿಚ್ಚ ಸುದೀಪ್ ಖಡಕ್ ಉತ್ತರ ನೀಡಿದ್ದಾರೆ. ಆದರೆ, ಕಿಚ್ಚನ ಬಗ್ಗೆ ಆರೋಪ ಮಾಡಿದ ವ್ಯಕ್ತಿ ಬೇರಾರೂ ಅಲ್ಲ, ಸ್ವತಃ ಬಿಗ್ ಬಾಸ್ ಮನೆಯೊಳಗೆ ಅನ್ನ ತಿಂದು ಹೋದ ಮಾಜಿ ಸ್ಪರ್ಧಿಯೇ ಆಗಿದ್ದು, ಇದೀಗ ಸಿಕ್ಕಿಬಿದ್ದಿದ್ದಾರೆ.
Karnataka News Live 9 December 2025'ಕುಡುಕರ ಲಿವರ್ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್ ಐಡಿಯಾ ಕೊಟ್ಟ ಬಿಜೆಪಿ MLC
ರಾಜ್ಯದಲ್ಲಿ ಕುಸಿದಿರುವ ಅಬಕಾರಿ ಆದಾಯವನ್ನು ಹೆಚ್ಚಿಸಲು, ಕುಡುಕರ ಲಿವರ್ಗೆ ಸರ್ಕಾರ ಗ್ಯಾರಂಟಿ ನೀಡಬೇಕೆಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಮದ್ಯಪಾನದಿಂದ ಬರುವ ಆದಾಯದ 20% ಅನ್ನು ಅವರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ಸಲಹೆ ನೀಡಿದ್ದಾರೆ.
Karnataka News Live 9 December 2025ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದೆ. ಇದರೊಂದಿಗೆ ಕಾನೂನು ಹೋರಾಟ ಆರಂಭಿಸಿದ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.
Karnataka News Live 9 December 2025ಮೋದಿ-ಪುಟಿನ್ ಒಪ್ಪಂದ - 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ವೇಳೆ, ಚೆನ್ನೈ-ವ್ಲಾಡಿವೋಸ್ಟಾಕ್ ಪೂರ್ವ ಕಾರಿಡಾರ್ಗೆ ಚಾಲನೆ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಹೊಸ ಸಮುದ್ರ ಮಾರ್ಗವು ಪ್ರಯಾಣದ ಸಮಯವನ್ನು 40 ದಿನಗಳಿಂದ 24 ದಿನಗಳಿಗೆ ಇಳಿಸಲಿದೆ.
Karnataka News Live 9 December 2025ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು
ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಲಕ್ಷಾಂತರ ಮೌಲ್ಯದ ಗಿರ್ ಹಸುಗಳ ಕಳ್ಳತನ! ಕಳ್ಳರು ಒಂದು ಹಸುವಿನ ಕತ್ತು ಕೊಯ್ದು ಕ್ರೌರ್ಯ ಮೆರೆದಿದ್ದಾರೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ವಿವರ ತಿಳಿಯಿರಿ.
Karnataka News Live 9 December 2025ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
Karnataka News Live 9 December 2025ಟಿಪ್ಸ್ ಹಣದಿಂದಲೇ 10 ಲಕ್ಷದ ಕಾರ್ ಖರೀದಿ ಮಾಡಿದ ವ್ಯಕ್ತಿ!
ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಕಾರ್ಅನ್ನು ಬರೀ ಟಿಪ್ಸ್ಗಳಿಂದ ಬಂದ ಹಣದಲ್ಲೇ ಖರೀದಿ ಮಾಡಿದ್ದಾನೆ. ಆತ ಕ್ರೂಸ್ ಹಡಗಿನಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ರೀಲ್ಸ್, ಕಂಟೆಂಟ್ ಮೂಲಕ ಇತರರರಿಗೆ ಕ್ರೂಸ್ ಶಿಪ್ನಲ್ಲಿ ಕೆಲಸ ಮಾಡಲು ಪ್ರೇರೇಪಿಸುತ್ತಿದ್ದಾರೆ.
Karnataka News Live 9 December 2025ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವ್ಯಾಪಾರದ ನಷ್ಟ ಮತ್ತು ಸಾಲದ ಸುಳಿಗೆ ಸಿಲುಕಿ ತಾಯಿ ಮತ್ತು ಮಗ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ವಿಷ ಸೇವಿಸದ ಅಜ್ಜಿಯೂ ಹೇಗೆ ಸತ್ತರು ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಇದು ಕೇಸಿಗೆ ಟ್ವಿಸ್ಟ್ ನೀಡಿದೆ.
Karnataka News Live 9 December 2025Mark Movie - ಡಿಸೆಂಬರ್ನಲ್ಲಿ ಏಕಕಾಲಕ್ಕೆ ಸ್ಟಾರ್ಗಳ ಸಿನಿಮಾ ರಿಲೀಸ್; ಕಿಚ್ಚ ಸುದೀಪ್ ಏನಂದ್ರು?
Kiccha Sudeep Mark Movie: ನಟ ಕಿಚ್ಚ ಸುದೀಪ್ ಅವರು ನಟಿಸಿರುವ ಮಾರ್ಕ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಸಿನಿಮಾ ಕುರಿತಂತೆ ಪ್ರಶ್ನೆಗಳನ್ನು ಕೇಳಲಾಯ್ತು. ಆಗ ಸಿನಿಮಾ ತಂಡವು ಏನು ಹೇಳಿದೆ?
Karnataka News Live 9 December 2025ಚೈತ್ರಾ ಕುಂದಾಪುರ, ಸ್ಪಂದನಾ ಸೋಮಣ್ಣ ನಡುವೆ ತಂದಿಟ್ಟು ನಕ್ಕ ವಿಲನ್ Bigg Boss; ಯಾಕ್ರೀ ಹೀಗ್ ಮಾಡ್ತೀರಾ?
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸ್ಪಂದನಾ ಸೋಮಣ್ಣ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರ ವೈಯಕ್ತಿಕ ಕೆಲಸಗಳನ್ನು ಮಾಡೋದು ಕೂಡ ಕಷ್ಟ ಆಗಿತ್ತು. ಇವ ಬದಲು ಚೈತ್ರಾ ಆಟ ಆಡಿ ಕ್ಯಾಪ್ಟನ್ ಆದರು.
Karnataka News Live 9 December 2025'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು' - ಆರ್. ಅಶೋಕ್ಗೆ ಸಿದ್ದರಾಮಯ್ಯ ಕಿವಿಮಾತು!
ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರನ್ನು ನೋಡಿ, 'ಏನು ಅಶೋಕ್, ಸಣ್ಣಗಾಗಿದ್ಯಾ?' ಎಂದು ತಕ್ಷಣ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, 'ನಾಟಿ ಕೋಳಿ ತಿನ್ನುವುದು ಬಿಟ್ಟುಬಿಟ್ಟಿದ್ದೀನಿ ಸಾರ್' ಎಂದು ಹೇಳಿದ್ದಾರೆ.
Karnataka News Live 9 December 2025ದ್ವೇಷ ಭಾಷಣ ತಡೆಗೆ ಹೊಸ ಕಾನೂನು - ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
Basangowda patil on hate speech bill: ದ್ವೇಷ ಭಾಷಣ ನಿಯಂತ್ರಣಕ್ಕೆ ಹೊಸ ಕಾನೂನು ತರುವ ಸರ್ಕಾರದ ಚಿಂತನೆಯು ತನ್ನನ್ನೇ ಗುರಿಯಾಗಿಸಿಕೊಂಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂಗಳ ಪರ ಮಾತನಾಡುವವರನ್ನು ಹತ್ತಿಕ್ಕಲು ಈ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದರು.
Karnataka News Live 9 December 2025BBK 12 - ಗಿಲ್ಲಿ ನಟನ ಜೊತೆ ಅಮಾನವೀಯವಾಗಿ ನಡ್ಕೊಂಡ ರಘು; ಪ್ರತ್ಯಕ್ಷಸಾಕ್ಷಿ ಅಭಿಷೇಕ್ ಶ್ರೀಕಾಂತ್ ಏನಂದ್ರು?
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ 11ನೇ ವಾರ ಹೊರಗಡೆ ಬಂದಿರುವ ಅಭಿಷೇಕ್ ಶ್ರೀಕಾಂತ್ ಅವರು ಗಿಲ್ಲಿ ನಟ ಹಾಗೂ ರಘು ನಡುವಿನ ಬಾಂಧವ್ಯದ ಜೊತೆಗೆ ರಘು ಬಳಿ ಮನವಿ ಮಾಡಿದ್ರೂ ಚಪಾತಿ ಕೊಟ್ಟಿಲ್ಲ ಎನ್ನುವ ವಿಚಾರ ಚರ್ಚೆಯಾಗಿದೆ.
Karnataka News Live 9 December 2025'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎದುರು ಗಳಗಳನೇ ಅತ್ತ ಕೊಪ್ಪಳದ ಯುವತಿ
ಧಾರವಾಡದಲ್ಲಿ ನಿಗದಿಯಾಗಿದ್ದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಮುಂದೆ ಕೊಪ್ಪಳ ಮೂಲದ ಯುವತಿಯೊಬ್ಬಳು, ವಯಸ್ಸು ಮೀರುತ್ತಿದೆ, ಬೇಗ ಉದ್ಯೋಗ ಕರೆಯಿರಿ ಎಂದು ಕಣ್ಣೀರು ಹಾಕಿದ ಘಟನೆ ನಡೆಯಿತು.