ಬೆಸ್ಕಾಂ ಆನ್ಲೈನ್ ಸೇವೆಗಳು 21 ದಿನಗಳ ಕಾಲ ಅಲಭ್ಯವಾಗಿದೆ. ಹೊಸ ಸಂಪರ್ಕ, ಬಿಲ್ ಪಾವತಿ, ಲೋಡ್ ಹೆಚ್ಚಳ ಸೇರಿದಂತೆ ಹಲವು ಆನ್ಲೈನ್ ಸೇವೆಗಳಲ್ಲಿ ವ್ಯತ್ಯಯವಾಗುತ್ತಿದೆ. ಈ ಕುರಿತು ಬೆಸ್ಕಾಂ ಮಹತ್ವದ ಪ್ರಕಟಣೆ ಹೊರಡಿಸಿದೆ.
- Home
- News
- State
- Karnataka News Live: ಬಿಲ್ ಪಾವತಿ, ಹೊಸ ಸಂಪರ್ಕ, ವರ್ಗಾವಣೆ ಸೇರಿ ಬೆಸ್ಕಾಂ ಆನ್ಲೈನ್ ಸೇವೆಗಳು ಇನ್ನು 21 ದಿನ ಸಿಗಲ್ಲ
Karnataka News Live: ಬಿಲ್ ಪಾವತಿ, ಹೊಸ ಸಂಪರ್ಕ, ವರ್ಗಾವಣೆ ಸೇರಿ ಬೆಸ್ಕಾಂ ಆನ್ಲೈನ್ ಸೇವೆಗಳು ಇನ್ನು 21 ದಿನ ಸಿಗಲ್ಲ

ಬೆಂಗಳೂರು: ‘ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರಾದರೂ ಹೇಳುತ್ತಾರೆಯೇ? ಯಾರೂ ಕೂಡ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್ನ 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ ಎಂದಷ್ಟೇ ಹೇಳಿದರು.
ಜೆಡಿಎಸ್ ಬಗ್ಗೆ ಮಾತನಾಡಲ್ಲ:
ಎಚ್.ಡಿ.ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಸುರ್ಜೇವಾಲ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ‘ನಾನು ಸದ್ಯಕ್ಕೆ ಆ ವಿಚಾರವಾಗಿ ಏನೂ ಮಾತನಾಡುವುದಿಲ್ಲ. ಸುರ್ಜೇವಾಲ ಅವರು ಮಾತಾಡಿದ್ದಾರೆ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ ಅಷ್ಟೇ’ ಎಂದರು.
Karnataka News Live 9 June 2026ಬಿಲ್ ಪಾವತಿ, ಹೊಸ ಸಂಪರ್ಕ, ವರ್ಗಾವಣೆ ಸೇರಿ ಬೆಸ್ಕಾಂ ಆನ್ಲೈನ್ ಸೇವೆಗಳು ಇನ್ನು 21 ದಿನ ಸಿಗಲ್ಲ
Karnataka News Live 9 June 2026ಸಾರಿಗೆ ಬಸ್ನಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರಿಗೂ ಸ್ಮಾರ್ಟ್ ಕಾರ್ಡ್ ಭಾಗ್ಯ!
ಸಾರಿಗೆ ಸಚಿವ ಬೈರತಿ ಸುರೇಶ್ ಅವರು ರಾಜ್ಯದ ಮೂರು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಸ್ಮಾರ್ಟ್ ಕಾರ್ಡ್ ಮತ್ತು ಪುರುಷರಿಗೆ ಕಾರ್ಡ್ಗಳನ್ನು ನೀಡಲಾಗುವುದು.
Karnataka News Live 9 June 2026ರಾಜ್ಯಾದ್ಯಂತ ಜೂನ್ 11ರ ವರೆಗೆ ಭಾರಿ ಮಳೆ ಮುನ್ಸೂಚನೆ, ಐದು ಜೆಲ್ಲೆಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮಳೆ ಆರಂಭಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಜೂನ್ 11ರ ವರೆಗೆ ಭಾರಿ ಮಳೆಯಾಗಲಿದೆ ಎಂದಿದೆ.
Karnataka News Live 9 June 2026ಕಾರವಾರ-ಹಳಗಾ ಸಾರಿಗೆ ಬಸ್ ಉಳಗಾ ವರೆಗೆ ವಿಸ್ತರಿಸಲು ಆಗ್ರಹ - ಡಿಪೋ ಮ್ಯಾನೇಜರ್ಗೆ ಮನವಿ
Karnataka News Live 9 June 2026ಕೊಡಗು, ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ; ಯಾರೆಲ್ಲಾ ಬರಬಹುದು? ಇಲ್ಲಿದೆ ಮಾಹಿತಿ
ಕೊಡಗು ಗೌಡ ನಿವೃತ್ತ ನೌಕರರ ಸಂಘವು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯಕ್ಕಾಗಿ ವಧು-ವರರ ಸಮಾವೇಶವನ್ನು ಆಯೋಜಿಸಿದೆ. ರೈತಾಪಿ ಯುವಕರು ಸೇರಿದಂತೆ ಮರುವಿವಾಹ ಬಯಸುವವರು, ವಿಚ್ಛೇದಿತರು ಕೂಡ ಈ ಸಮಾವೇಶದಲ್ಲಿ ಭಾಗವಹಿಸಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು.
Karnataka News Live 9 June 2026No ID no Entry - ಬಾರ್, ಪಬ್ಗಳಿಗೆ ಗುರುತಿನ ಚೀಟಿ ಇಲ್ಲದಿದ್ರೆ ಪ್ರವೇಶವಿಲ್ಲ
ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯವ್ಯಸನವನ್ನು ತಡೆಯಲು, ರಾಜ್ಯ ಸರ್ಕಾರವು ಬಾರ್, ಕ್ಲಬ್ಗಳು ಮತ್ತು ಮದ್ಯದ ಮಳಿಗೆಗಳಲ್ಲಿ 'ನೋ ಐಡಿ, ನೋ ಎಂಟ್ರಿ' ನಿಯಮವನ್ನು ಕಡ್ಡಾಯಗೊಳಿಸಿದೆ.
Karnataka News Live 9 June 2026ಘಟಪ್ರಭಾ ಕುಷ್ಟಗಿ ರೈಲ್ವೆ ಮಾರ್ಗ ಆರಂಭಿಸಲು ಆಗ್ರಹ - ಸಚಿವ ಜೋಶಿ ನೀಡಿದ ಭರವಸೆ ಏನು?
ಹೋರಾಟದ ನಾಡು ನರಗುಂದಕ್ಕೆ ಘಟಪ್ರಭಾದಿಂದ ಕುಷ್ಟಗಿಯವರೆಗೆ ಹೊಸ ರೈಲ್ವೆ ಮಾರ್ಗವನ್ನು ಪ್ರಾರಂಭಿಸಬೇಕೆಂದು ರೈಲ್ವೆ ಹೋರಾಟ ಸಮಿತಿಯು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿತು.