ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಬೆಂಗಳೂರಿನ ಯಲಹಂಕದಲ್ಲಿರುವ ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ರಾತ್ರೋರಾತ್ರಿ ಭೇಟಿ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಜಮಾಯಿಸಿದ್ದರು.
- Home
- News
- State
- Karnataka News Live: ಮತ್ತೆ ಅಪ್ಪನಾಗ್ತಿದ್ದಾರಾ ಹಾರ್ದಿಕ್? ರಾತ್ರೋರಾತ್ರಿ ಗೆಳತಿಯನ್ನು ಕರ್ಕೊಂಡು ಬೆಂಗಳೂರಿನ ಪ್ರೈಮಾ ಡಯಾಗ್ನೋಸ್ಟಿಕ್ಸ್ಗೆ ಬಂದ ಪಾಂಡ್ಯ!
Karnataka News Live: ಮತ್ತೆ ಅಪ್ಪನಾಗ್ತಿದ್ದಾರಾ ಹಾರ್ದಿಕ್? ರಾತ್ರೋರಾತ್ರಿ ಗೆಳತಿಯನ್ನು ಕರ್ಕೊಂಡು ಬೆಂಗಳೂರಿನ ಪ್ರೈಮಾ ಡಯಾಗ್ನೋಸ್ಟಿಕ್ಸ್ಗೆ ಬಂದ ಪಾಂಡ್ಯ!

ಬೆಂಗಳೂರು: ‘ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರಾದರೂ ಹೇಳುತ್ತಾರೆಯೇ? ಯಾರೂ ಕೂಡ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್ನ 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ ಎಂದಷ್ಟೇ ಹೇಳಿದರು.
ಜೆಡಿಎಸ್ ಬಗ್ಗೆ ಮಾತನಾಡಲ್ಲ:
ಎಚ್.ಡಿ.ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಸುರ್ಜೇವಾಲ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ‘ನಾನು ಸದ್ಯಕ್ಕೆ ಆ ವಿಚಾರವಾಗಿ ಏನೂ ಮಾತನಾಡುವುದಿಲ್ಲ. ಸುರ್ಜೇವಾಲ ಅವರು ಮಾತಾಡಿದ್ದಾರೆ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ ಅಷ್ಟೇ’ ಎಂದರು.
Karnataka News Live 9 June 2026ಮತ್ತೆ ಅಪ್ಪನಾಗ್ತಿದ್ದಾರಾ ಹಾರ್ದಿಕ್? ರಾತ್ರೋರಾತ್ರಿ ಗೆಳತಿಯನ್ನು ಕರ್ಕೊಂಡು ಬೆಂಗಳೂರಿನ ಪ್ರೈಮಾ ಡಯಾಗ್ನೋಸ್ಟಿಕ್ಸ್ಗೆ ಬಂದ ಪಾಂಡ್ಯ!
Karnataka News Live 9 June 2026ವಾಟ್ಸಾಪ್ ಯುನಿವರ್ಸಿಟಿ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ - ಸಂಸದ ಬೊಮ್ಮಾಯಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ಹರಿದಾಡುತ್ತಿರುವ ಸುದ್ದಿಗಳು 'ವಾಟ್ಸಾಪ್ ಯುನಿವರ್ಸಿಟಿ'ಯ ಸೃಷ್ಟಿಯಾಗಿದ್ದು, ಅಂತಹ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Karnataka News Live 9 June 2026ಪಕ್ಷದಲ್ಲಿ ಅನ್ಯಾಯವಾಗಿಲ್ಲ, ಸಿಗಬೇಕಾದ ಪ್ರಾಮುಖ್ಯತೆ ಸಿಕ್ಕಿದೆ - ಸಚಿವ ಸತೀಶ್ ಜಾರಕಿಹೊಳಿ
ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರಿಗೂ ಒಂದೇ ವೇಳೆ ಎಲ್ಲವೂ ಸಿಗಲು ಸಾಧ್ಯವಿಲ್ಲ. ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ಕೆಲಸ ಮಾಡುವುದು ಮುಖ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
Karnataka News Live 9 June 2026ಕನಕಗಿರಿಯಲ್ಲಿ ಬೆಚ್ಚಿಬೀಳಿಸುವ ಘಟನೆ - ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರ ಶಂಕೆ, ಬೆಂಕಿ ಹಚ್ಚಿ ಹ*ತ್ಯೆ?
ಸಮೀಪದ ಕನಕಗಿರಿ ಪಟ್ಟಣದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ (40) ಮೇಲೆ ಸಾಮೂಹಿಕ ಅತ್ಯಾ*ಚಾರ ನಡೆಸಿ ನಂತರ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.
Karnataka News Live 9 June 2026ಕಾಡುಗೋಡಿ ಮಗು ಹತ್ಯೆ ಪ್ರಕರಣ - ಐಸ್ಕ್ರೀಂ ಕೇಳಿದ್ದಕ್ಕೆ ಕಾರಲ್ಲೇ ಒದ್ದು ಕೊಂದೆ, ಪೊಲೀಸರೆದುರು ಬಾಯಿಬಿಟ್ಟ ಪ್ರಿಯಕರ!
ಬೆಂಗಳೂರಿನ ಕಾಡುಗೋಡಿಯಲ್ಲಿ, ಪ್ರಿಯಕರನೊಂದಿಗೆ ಸೇರಿ ಮಗಳನ್ನು ಕೊಂದ ಆರೋಪದ ಮೇಲೆ ತಾಯಿ ಪ್ರಿಯಾಂಕಾ ಮತ್ತು ಮೋಹನ್ ಸಿಕ್ಕಿಬಿದ್ದಿದ್ದಾನೆ. ಐಸ್ಕ್ರೀಂಗಾಗಿ ಹಠ ಹಿಡಿದ ಮಗುವನ್ನು ಮೋಹನ್ ಕಾರಿನಲ್ಲೇ ಒದ್ದು ಕೊಂದಿದ್ದು, ನಂತರ ಇಬ್ಬರೂ ಸೇರಿ ಕೊಲೆಯನ್ನು ಮುಚ್ಚಿಹಾಕಲು ನಾಟಕವಾಡಿದ್ದರು.
Karnataka News Live 9 June 2026ಗದಗದಲ್ಲಿ ರಾಷ್ಟ್ರಕೂಟ ಕಾಲದ ವಿಶಿಷ್ಟ ವೀರಗಲ್ಲು ಪತ್ತೆ, ರಾಜನ ಮೇಲಿನ ಪ್ರೀತಿಗೆ ಪ್ರಾಣತ್ಯಾಗದ 'ಕೀಲುಗುಂಟೆ' ಪದ್ಧತಿ!
Karnataka News Live 9 June 2026ದುನಿಯಾ ವಿಜಯ್ಗೆ ನಡುಕ ಹುಟ್ಟಿಸಿದ ವಿಜಯ್ ಸೇತುಪತಿ - 'ಸ್ಲಮ್ಡಾಗ್' ಟೀಸರ್ನಲ್ಲಿ ಬಿಗ್ ಸಸ್ಪೆನ್ಸ್
ನಿರ್ದೇಶಕ ಪೂರಿ ಜಗನ್ನಾಥ್ ತಮ್ಮ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆಕ್ಷನ್ ಸಿನಿಮಾ 'ಸ್ಲಮ್ಡಾಗ್: 33 ಟೆಂಪಲ್ ರೋಡ್' ಚಿತ್ರದ ಟೀಸರ್ ಅನ್ನು ಅನಾವರಣಗೊಳಿಸಿದ್ದಾರೆ. ಈ ಟೀಸರ್ನಲ್ಲಿ ರಾಷ್ಟ್ರ ಪ್ರಶಸ್ತಿ..
Karnataka News Live 9 June 2026ರೆಸಾರ್ಟ್ ರಾಜಕೀಯ - ಅಡ್ಡ ಮತದಾನದ ಭೀತಿ, ಬೆಂಗಳೂರಿನ ರೆಸಾರ್ಟ್ಗೆ ಶಿಫ್ಟ್ ಆದ ಮಧ್ಯಪ್ರದೇಶದ 63 ಕಾಂಗ್ರೆಸ್ ಶಾಸಕರು!
Karnataka News Live 9 June 2026ಬೆಂಗಳೂರಿಗೆ ಬಿಗ್ ಗಿಫ್ಟ್ - ಈ ರಸ್ತೆಲಿ 10.3 ಕಿ.ಮೀ ಉದ್ದದ ಬೃಹತ್ ಸೈಕ್ಲಿಂಗ್ ಕಾರಿಡಾರ್ ಜೂ.27ಕ್ಕೆ ಲೋಕಾರ್ಪಣೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದ ಟ್ರಾಫಿಕ್ ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು 10.3 ಕಿ.ಮೀ ಉದ್ದದ ವಿಶೇಷ ಸೈಕ್ಲಿಂಗ್ ಕಾರಿಡಾರ್ ನಿರ್ಮಿಸುತ್ತಿದೆ. ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ ಈ ಪರಿಸರ ಸ್ನೇಹಿ ಮಾರ್ಗವು ಸೈಕಲ್ ಸವಾರರಿಗೆ ಸುರಕ್ಷಿತ ಸಂಚಾರವನ್ನು ಒದಗಿಸಲಿದೆ.
Karnataka News Live 9 June 2026ಶಿವಮೊಗ್ಗಕ್ಕೆ ವಿಮಾನ ಹಾರಾಟ ಸ್ಥಗಿತ, ಮರು ಚಾಲನೆಗೆ ಪ್ರಯತ್ನಿಸುವೆ ಎಂದ ಸಂಸದ ರಾಘವೇಂದ್ರ, ಸರ್ಕಾರದ ವಿರುದ್ಧ ಕಿಡಿ!
Karnataka News Live 9 June 2026ಉತ್ತರ ಕರ್ನಾಟಕ ಪ್ರವಾಸೋದ್ಯಮ - ಹಿಡಕಲ್ ಡ್ಯಾಂ ಇನ್ನು ಮುಂದೆ ಪ್ರವಾಸಿ ತಾಣ, ಉದ್ಯಾನ, ಮಕ್ಕಳ ರೈಲು, ಬೋಟಿಂಗ್, ತಾರಾಲಯ
ಹಿಡಕಲ್ ಡ್ಯಾಂ ಅನ್ನು ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ಬೃಂದಾವನ ಮಾದರಿಯ 'ರಾಜಾ ಲಖಮಗೌಡ ಉದ್ಯಾನಕಾಶಿ'ಯ ಎರಡನೇ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದಿ, ಮಕ್ಕಳ ರೈಲು, ಬೋಟಿಂಗ್, ತಾರಾಲಯ ಸೇರಿದಂತೆ ಹಲವು ಆಕರ್ಷಣೆಗಳು ತಲೆ ಎತ್ತಲಿವೆ.
Karnataka News Live 9 June 2026ಬಿಟ್ಕಾಯಿನ್ ಹಗರಣ - ನೆಪ ಹೇಳಿ ತಪ್ಪಿಸಿಕೊಂಡ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಗೆ ಇಡಿ 3ನೇ ಸಮನ್ಸ್!
ಬಹುಕೋಟಿ ಬಿಟ್ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಮೊಹಮ್ಮದ್ ನಲಪಾಡ್ಗೆ ಇಡಿ ಮೂರನೇ ಸಮನ್ಸ್ ಜಾರಿ ಮಾಡಿದೆ. ಎಸ್ಐಟಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿಯೂ ನಲಪಾಡ್ ಹೆಸರು ಉಲ್ಲೇಖವಾಗಿದ್ದು, ಹ್ಯಾಕರ್ ಶ್ರೀಕಿಯಿಂದ ಬಿಟ್ಕಾಯಿನ್ಗಳನ್ನು ಹವಾಲಾ ಮೂಲಕ ನಗದೀಕರಣ ಮಾಡಿಕೊಟ್ಟ ಆರೋಪವಿದೆ
Karnataka News Live 9 June 2026ತೀರ್ಥಹಳ್ಳಿಯಲ್ಲಿ ಅಡಿಕೆ ಕಳ್ಳರು ಅರೆಸ್ಟ್, ಹಾವೇರಿಯ ಇಬ್ಬರಿಂದ 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ!
Karnataka News Live 9 June 2026ಡಿಕೆಶಿ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ; ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು!
ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ಮತ್ತು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಆಗ್ರಹಿಸಿ ಹೊಸಪೇಟೆ ಹಾಗೂ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ನಡೆದಿವೆ. ತಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಜಮೀರ್ ಅವರ ಅಭಿಮಾನಿಗಳು ಮತ್ತು ರೈತ ಸಂಘಟನೆಗಳು ಎಚ್ಚರಿಕೆ.
Karnataka News Live 9 June 2026ಗಾಂಧೀಜಿ ಹತ್ಯೆ ಪ್ರಕರಣ - ವಿಚಾರಣಾ ಆಯೋಗ ರಚನೆ ವಿಳಂಬ ಪ್ರಶ್ನಿಸಿದ್ದ ಅರ್ಜಿ ವಜಾ, ಅರ್ಜಿದಾರನಿಗೆ 10,000 ದಂಡ ವಿಧಿಸಿದ ಹೈಕೋರ್ಟ್!
Karnataka News Live 9 June 2026ಬೆಲೆ ಏರಿಕೆ ನಡುವೆ ಬೆಂಗಳೂರಿಗರಿಗೆ ಬಿಗ್ ರಿಲೀಫ್, ಕೆಲ ವಲಯದಲ್ಲಿ ದರ ಹೆಚ್ಚಳ ಇಲ್ಲ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಕೆಲ ರಿಲೀಫ್ ಸಿಕ್ಕಿದೆ. ಯಾವೆಲ್ಲಾ ವಲಯದಲ್ಲಿ ಬೆಲೆ ಹೆಚ್ಚಳಕ್ಕೆ ಬ್ರೇಕ್ ಹಾಕಲಾಗಿದೆ?