11:16 PM (IST) May 09

Karnataka News Live 9 May 2026ಪ್ರತಿ ದಿನ ಲೈಬ್ರರಿಯಲ್ಲಿ ಅಧ್ಯಯನ, IFS ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದ ರೈತನ ಮಗ

ಕರ್ನಾಟಕದ ಸವದಿ ಗ್ರಾಮದ ಯುವಕನ ಸಾಧನೆಗೆ ದೇಶವೆ ಸಲಾಂ ಹೇಳಿದೆ. ಪ್ರತಿ ದಿನ ಲೈಬ್ರರಿಗೆ ತೆರಳಿ ಅಧ್ಯಯನ ಮಾಡುತ್ತಾ ಐಎಫ್ ಪರೀಕ್ಷೆ ಬರೆದ ರೈತನ ಮಗ, ಇದೀಗ ಅಖಿಲ ಭಾರತ ಮಟ್ಟದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದಾರೆ.

Read Full Story
10:27 PM (IST) May 09

Karnataka News Live 9 May 2026ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ನಾಳೆ 2 ಗಂಟೆ ಸಂಚಾರ ಸ್ಥಗಿತ ಕುರಿತು ಮಹತ್ವದ ಪ್ರಕಟಣೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಸಂಚಾರ ಸ್ಥಗಿತ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದೆ. ಬಿಎಂಆರ್‌ಸಿಎಲ್ ಪ್ರಯಾಣಿಕರಿಗಾಗಿ ಹೊರಡಿಸಿದ ಹೊಸ ಆದೇಶ ಏನು?

Read Full Story
07:38 PM (IST) May 09

Karnataka News Live 9 May 2026ಮಾರುಕಟ್ಟೆಗೆ ಲಗ್ಗೆ ಇಟ್ಟ ಅಂಕೋಲಾದ ವಿಶೇಷ ಕರಿ ಇಶಾಡ್ ಮಾವು, ರುಚಿಗೆ ಸಾಟಿಯೇ ಇಲ್ಲ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಮಾತ್ರ ಬೆಳೆಯುವ ಕರಿ ಇಶಾಡ್ ವಿಶೇಷ ಮಾವಿನ ಹಣ್ಣು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಯಾವುದೇ ರಾಸಾಯನಿಕ ಬಳಸದ ಈ ಮಾವು ಕೈಗೆಟುಕುವ ದರದಲ್ಲಿ ಲಭ್ಯವಿದೆ. ಹೀಗಾಗಿ ಭಾರಿ ಬೇಡಿಕೆ ಇದೆ.

Read Full Story
07:38 PM (IST) May 09

Karnataka News Live 9 May 2026ಉತ್ತರ ಕನ್ನಡದ ಆಗಸದಲ್ಲಿ ನಿಗೂಢ ವಿಮಾನ ಹಾರಾಟ, ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಡಳಿತ ಸ್ಪಷ್ಟನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಂಡುಬರುತ್ತಿರುವ ಕಡಿಮೆ ಎತ್ತರದ ವಿಮಾನ ಹಾರಾಟವು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಇದು ಖನಿಜ ಅನ್ವೇಷಣೆಗಾಗಿ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ನಡೆಸುತ್ತಿರುವ ವೈಜ್ಞಾನಿಕ ಸಮೀಕ್ಷೆಯಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
Read Full Story
07:15 PM (IST) May 09

Karnataka News Live 9 May 2026ದೊಡ್ಮನೆ ಕುಡಿ ವಿನಯ್ ಮಾಚಿಸ್‌ನಿಂದ ಹಿಡಿದು ಪೃಥ್ವಿ‌ಅಂಬಾರ್ ಬುಲ್ ಡಾಗ್ ನಂದಗೋಕುಲದವರೆಗೆ - ಸ್ಯಾಂಡಲ್‌ವುಡ್‌ ಧಮಾಕಾ!

ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಅವರ ಹೊಸ ಚಿತ್ರ 'ಮಾಚಿಸ್' ಘೋಷಣೆಯಾಗಿದ್ದು, ಪೃಥ್ವಿ ಅಂಬಾರ್ ನಿರ್ದೇಶನದ 'ಬುಲ್‌ಡಾಗ್' ಚಿತ್ರೀಕರಣ ಪೂರ್ಣಗೊಳಿಸಿದೆ. ಇದರೊಂದಿಗೆ 'ಚಿಕ್ಕವರು ಕೋಣರಲ್ಲ' ಎಂಬ ಮಕ್ಕಳ ಚಿತ್ರ ಹಾಗೂ 'ನಂದಗೋಕುಲ' ಧಾರಾವಾಹಿಯ ಹೊಸ ಪ್ರಸಂಗಗಳು ಕನ್ನಡ ಮನರಂಜನಾ ಲೋಕದಲ್ಲಿ ಸದ್ದು ಮಾಡುತ್ತಿವೆ.
Read Full Story
06:28 PM (IST) May 09

Karnataka News Live 9 May 2026ಶಾರದಾಂಬೆ To ಧರ್ಮಸ್ಥಳಕ್ಕೆ ಶಿಫ್ಟ್ - ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಯ್ತು ಆಣೆ-ಪ್ರಮಾಣ!

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಬಳಿಕ ಶಾರದಾಂಬೆ ನೆಲದಲ್ಲಿ ಆಣೆ-ಪ್ರಮಾಣದ ರಾಜಕೀಯ ಜೋರಾಗಿದೆ. ಇತ್ತ ಮತಚೋರಿ ಆಗಿದ್ರೆ ನೀನೇ ಶಿಕ್ಷೆ ಕೊಡು ಅಂತ ಮಾಜಿ ಶಾಸಕ ರಾಜೇಗೌಡ ದೇವಾಲಯ ಸುತ್ತುತ್ತಾ..

Read Full Story
06:14 PM (IST) May 09

Karnataka News Live 9 May 2026ಶೂಟಿಂಗ್ ಮೊದಲು ರಂಜನಿ 'ಡಿ ಡಿ ಢಿಕ್ಕಿ' ಅಂತ ಪರ್ಸನಲ್ ವಿಚಾರ ಕೇಳಿದ್ದರು - ನಟಿ ಮೇಘನಾ ಗಾಂವ್ಕರ್‌

ಈ ಪಾತ್ರವನ್ನು ನಾನು ಒಪ್ಪಿಕೊಂಡ ಮೇಲೆ ಶೂಟಿಂಗ್‌ಗೂ ಮೊದಲು ರಂಜನಿ ಅವರು ಖುಷಿಯಲ್ಲಿದ್ದಾಗ ಹೇಗಿರ್ತೀನಿ, ನನ್ನ ಹತ್ರ ತುಂಬ ಪರ್ಸನಲ್‌ ವಿಚಾರಗಳನ್ನು ಕೇಳಿದ್ರು ಎಂದರು ಮೇಘನಾ ಗಾಂವ್ಕರ್‌.

Read Full Story
05:30 PM (IST) May 09

Karnataka News Live 9 May 2026ದೊಡ್ಮನೆ ಕುಡಿಗೆ ದುನಿಯಾ ವಿಜಯ್ ಕೊಟ್ರು ಮಾಸ್ ಸಿನಿಮಾ - ಸಿಟಿಲೈಟ್ಸ್ ಬ್ಯಾಡ್ ಗರ್ಲ್ಸ್!

ದುನಿಯಾ ವಿಜಯ್ ಎರಡನೇ ಮಗಳು ಮೋನಿಷಾ ವಿಜಯ್ ಕುಮಾರ್​ ಚೊಚ್ಚಲ ಸಿನಿಮಾ ಇದು. ಹಾಗೇ ವಿಜಯ್ ನಿರ್ದೇಶನದಲ್ಲಿ ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿರೋ ಚಿತ್ರವೂ ಹೌದು.

Read Full Story
02:04 PM (IST) May 09

Karnataka News Live 9 May 2026ಮೂಡಿಗೆರೆಯಲ್ಲಿ ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಬೇಸಾಯದ ಎತ್ತುಗಳನ್ನು ಹುಡುಕಿಕೊಡಿ, ಪೊಲೀಸರ ಮೊರೆ ಹೋದ ರೈತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಂಪ್ಲಿ ಗ್ರಾಮದಲ್ಲಿ ರೈತರೊಬ್ಬರು ಸಾಕಿದ್ದ ಜೋಡೆತ್ತುಗಳನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ. 15 ವರ್ಷಗಳಿಂದ ಬೇಸಾಯಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಕಳೆದುಕೊಂಡು ರೈತ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಗೋಹತ್ಯೆಗಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
Read Full Story
12:59 PM (IST) May 09

Karnataka News Live 9 May 2026Sirsi - ಯಕ್ಷಗಾನ ನಡೆಸುವ ಜಾಗದ ವಿಚಾರ; ಚಪ್ಪಲಿ, ಪೊರಕೆಯಲ್ಲಿ ಹೊಡೆದಾಡಿಕೊಂಡ ಶಿರಸಿಯ ದಾಯಾದಿಗಳು!

Sirsi Family Dispute: ಖಾಸಗಿ ಜಮೀನಿನಲ್ಲಿ ಯಕ್ಷಗಾನ ಮಾಡುವ ಬಗ್ಗೆ ದಾಯಾದಿಗಳು ಜಗಳ ಆಡಿಕೊಂಡಿದ್ದಾರೆ. ಚಪ್ಪಲಿಯಲ್ಲಿ, ಕೋಲಿನಲ್ಲಿ ಹೊಡೆದುಕೊಳ್ಳುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

Read Full Story
12:54 PM (IST) May 09

Karnataka News Live 9 May 2026ಚಿಕ್ಕಮಗಳೂರು - ಮುತ್ತೋಡಿ ಅರಣ್ಯದಲ್ಲಿ ಹುಲಿ ಗಣನೆಗೆ ಅಳವಡಿಸಿದ್ದ ಕ್ಯಾಮೆರಾ ಕಳ್ಳತನ, ಅರಣ್ಯ ಇಲಾಖೆಗೆ ಹೊಡೆತ

ಚಿಕ್ಕಮಗಳೂರಿನ ಮುತ್ತೋಡಿ ಅಭಯಾರಣ್ಯದಲ್ಲಿ ಹುಲಿ ಗಣನೆಗೆ ಅಳವಡಿಸಿದ್ದ ಕ್ಯಾಮೆರಾಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಘಟನೆಯು ಅರಣ್ಯ ಇಲಾಖೆಯ ಕಾರ್ಯವೈಖರಿ ಮತ್ತು ಕಾಡುಪ್ರಾಣಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. 

Read Full Story
12:34 PM (IST) May 09

Karnataka News Live 9 May 2026ಬೆಂಗಳೂರು - ಸಂಸಾರ ತ್ಯಜಿಸಿದ ಮಹಿಳೆ ಜತೆ ಚಿತ್ರದುರ್ಗ ಯುವಕನ ಲಿವ್-ಇನ್, ಪ್ರೇಮಕಥೆಯಲ್ಲಿ ಅನುಮಾನದ ಸಾವು!

ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಚಿತ್ರದುರ್ಗ ಮೂಲದ ಯುವಕ ತಿಪ್ಪೇಸ್ವಾಮಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ವಾಸಿಸುತ್ತಿದ್ದ ಆತನ ಸಾವಿಗೆ ಆಕೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story
12:22 PM (IST) May 09

Karnataka News Live 9 May 2026Appe Midi Pickle - ಅಪ್ಪೇಮಿಡಿ ಉಪ್ಪಿನಕಾಯಿ ಹೀಗೆ ಮಾಡಿದ್ರೆ 3 ವರ್ಷವಾದ್ರೂ ಹಾಳಾಗಲ್ಲ; ರುಚಿಯೋ ರುಚಿ

Appe Midi Pickle Recipe: ಮಲೆನಾಡಿನ ಅಪ್ಪೆಮಿಡಿ ಉಪ್ಪಿನಕಾಯಿ ಎನ್ನುವುದು ಸಿಕ್ಕಾಪಟ್ಟೆ ಫೇಮಸ್. ಇನ್ನೇನು ಮಾವಿನಕಾಯಿ ಸೀಸನ್‌ ಬಂತು ಎಂದಕೂಡಲೇ ಅಪ್ಪೇಮಿಡಿ ಹುಡುಕಾಟ ಶುರು ಆಗುತ್ತದೆ. ಅಪ್ಪೇಮಿಡಿಯಿಂದ ಉಪ್ಪಿನಕಾಯಿ ಮಾಡಿಕೊಂಡು, ವರ್ಷಾನುಗಟ್ಟಲೇ ತಿನ್ನುತ್ತಾರೆ.

Read Full Story
12:10 PM (IST) May 09

Karnataka News Live 9 May 2026IPL Final match shift row - ಶಾಸಕರಿಗೆ ಕೊಡೋದೇ 2 ಫ್ರೀ ಟಿಕೆಟ್‌ ಅಷ್ಟೇ - ಲಾಭಕ್ಕಾಗಿ ಐಪಿಎಲ್ ಫೈನಲ್ ಶಿಫ್ಟ್ - ಪರಂ

ಶಾಸಕರು ಟಿಕೆಟ್‌ ಕೇಳಿದ್ದರಿಂದ ಐಪಿಎಲ್‌ ಫೈನಲ್‌ ಪಂದ್ಯವನ್ನು ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನಿರಾಕರಿಸಿದ್ದಾರೆ. ಹೆಚ್ಚಿನ ಲಾಭಕ್ಕಾಗಿ ಅಹಮದಾಬಾದ್‌ಗೆ ಪಂದ್ಯ ಸ್ಥಳಾಂತರಿಸಲಾಗಿದೆ ಎಂದರು.

Read Full Story
11:58 AM (IST) May 09

Karnataka News Live 9 May 2026BSY ಅಭಿಮಾನೋತ್ಸವಕ್ಕೆ 112 ಅಡಿ ಉದ್ದ, 40 ಅಡಿ ಅಗಲದ ವೇದಿಕೆ! ಚಿತ್ರದುರ್ಗದಲ್ಲಿ ನಡೆಯುತ್ತಿರೋದೇನು?

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ 50 ವರ್ಷದ ರಾಜಕೀಯ ಬದುಕಿನ ನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಜನರಿಗೆ ಆಸನದ ವ್ಯವಸ್ಥೆ, ಬೃಹತ್ ವೇದಿಕೆ, ಸಾವಿರಾರು ಜನರಿಂದ ಅಡುಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.

Read Full Story
11:38 AM (IST) May 09

Karnataka News Live 9 May 2026ಪುದುಚೇರಿ ಪ್ರವಾಸ ಹೊರಟ ಡಿಸಿಎಂ ಶನೇಶ್ವರನ ದರ್ಶನ, ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ, ಏನಂದ್ರು ಡಿಕೆಶಿ?

ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುದುಚೇರಿಯ ತಿರುನಲ್ಲಾರ್ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಧಾರ್ಮಿಕ ಪ್ರವಾಸದ ನಡುವೆಯೇ, ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ಗೆ ಬಂದಿದ್ದಾರೆ ಎಂಬ ರಾಜಕೀಯ ವದಂತಿಗಳನ್ನು ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
Read Full Story
11:33 AM (IST) May 09

Karnataka News Live 9 May 2026BSY old Ambassador car - ಬಿಎಸ್‌ವೈ ಅಭಿಮಾನೋತ್ಸವ, ಪ್ರಮುಖ ಆಕರ್ಷಣೆ ಆಗಿರುವ ಅಂಬಾಸಿಡರ್ ಕಾರಿನ ಹಿಂದಿನ ಕಥೆಯೇನು?

ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ, ಅವರ ರಾಜಕೀಯ ಜೀವನದ ಆರಂಭದಲ್ಲಿ ಬಳಸಿದ CKR 45 ನಂಬರಿನ ಅಂಬಾಸಿಡರ್ ಕಾರು ಪ್ರಮುಖ ಆಕರ್ಷಣೆಯಾಗಿದೆ. ಈ ಕಾರು ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪನವರಷ್ಟೇ ಪ್ರಮುಖ ಪಾತ್ರ ವಹಿಸಿದೆ ಎಂದು ಬಿ.ವೈ. ವಿಜಯೇಂದ್ರ ಸ್ಮರಿಸಿಕೊಂಡರು.
Read Full Story
11:13 AM (IST) May 09

Karnataka News Live 9 May 2026ಬೆಂಗಳೂರಿನ ಘನತೆಗೆ 'ವರದಕ್ಷಿಣೆ' ಕಪ್ಪುಚುಕ್ಕೆ - ಮೆಟ್ರೋ ನಗರಗಳ ಒಟ್ಟು ಕೇಸ್‌ಗಳಲ್ಲಿ ಶೇ. 87ರಷ್ಟು ಪಾಲು ಸಿಲಿಕಾನ್ ಸಿಟಿಯದ್ದೇ!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2024ರ ವರದಿಯ ಪ್ರಕಾರ, ದೇಶದ ಮೆಟ್ರೋ ನಗರಗಳ ಪೈಕಿ ಬೆಂಗಳೂರು ಅತಿ ಹೆಚ್ಚು ವರದಕ್ಷಿಣೆ ಪ್ರಕರಣಗಳನ್ನು ಹೊಂದಿದೆ. ಕೇವಲ ವರದಕ್ಷಿಣೆ ಮಾತ್ರವಲ್ಲದೆ, ಮಹಿಳೆಯರ ಮೇಲಿನ ದೌರ್ಜನ್ಯ ಕೇಸ್‌ಗಳಲ್ಲೂ ಬೆಂಗಳೂರು ಮುಂದಿದೆ.

Read Full Story
11:09 AM (IST) May 09

Karnataka News Live 9 May 2026ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ಬಸ್; ಒಂದು ದಿನದ ಟ್ರಿಪ್‌ಗೆ ಬೆಸ್ಟ್ ಆಯ್ಕೆ

ಬೆಂಗಳೂರಿನಿಂದ ಹಂಪಿಗೆ ಪ್ರವಾಸ ಯೋಜಿಸುತ್ತಿರುವವರಿಗೆ ಕೆಎಸ್‌ಆರ್‌ಟಿಸಿ ನೇರ ಬಸ್ ಸೌಲಭ್ಯವನ್ನು ಒದಗಿಸಿದೆ. ರಾತ್ರಿ ಬೆಂಗಳೂರಿನಿಂದ ಹೊರಡುವ ಈ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್, ಮರುದಿನ ಬೆಳಗ್ಗೆ ಹಂಪಿ ತಲುಪಲಿದ್ದು, ಅದರ ಸಮಯ, ದರ ಮತ್ತು ಬುಕ್ಕಿಂಗ್ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.

Read Full Story
11:03 AM (IST) May 09

Karnataka News Live 9 May 2026ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವ - ಕಾರ್ಯಕ್ರಮ ಬರುವ ವಾಹನ ಪಾರ್ಕಿಂಗ್ ಸ್ಥಳಗಳಿಗೆ ನಾಡಿನ ನದಿಗಳ ಹೆಸರು!

ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ 'ಅಭಿಮಾನೋತ್ಸವ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವಿಶೇಷತೆಯೆಂದರೆ, ವಾಹನ ನಿಲುಗಡೆ ಸ್ಥಳಗಳಿಗೆ ಕಾವೇರಿ, ವೇದಾವತಿ, ಭದ್ರಾ, ತುಂಗಾ ಎಂಬ ನದಿಗಳ ಹೆಸರಿಡಲಾಗಿದೆ.

Read Full Story