06:05 PM (IST) Mar 09

ಕೇಸರಿ ಕೇಸರಿ ಎಂದು ತಗ್ಲಾಕ್ಕೊಂಡ ಸ್ಟಾರ್​ ನಟರು! ಶಾರುಖ್​, ಅಜೆಯ್​, ಟೈಗರ್​ಗೆ ಕಾನೂನು ಸಂಕಷ್ಟ...

ಕಣಕಣದಲ್ಲಿಯೂ ಕೇಸರಿ ಇದೆ ಎನ್ನುವ ಮೂಲಕ ಗುಟ್ಕಾ ತಿನ್ನುವಂತೆ ಜನರ ಹಾದಿ ತಪ್ಪಿಸುತ್ತಿರುವ ನಟರಾದ ಶಾರುಖ್​ ಖಾನ್​, ಅಜೆಯ್​ ದೇವಗನ್​ ಮತ್ತು ಟೈಗರ್ ಶ್ರಾಫ್​ ಅವರಿಗೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ. 

ಪೂರ್ತಿ ಓದಿ
03:30 PM (IST) Mar 09

ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿಲ್ಲವೆಂದು ಜೀವ ಬಿಡೋದಾ? ಸಹಸ್ರಾರು ಮಂದಿ ಪ್ರಾಣ ಉಳಿಸಿದ ವೈದ್ಯನಿಗೆ ಇದೆಂಥ ಸಾವು?

ವೈದ್ಯ ವೃತ್ತಿಯನ್ನೇ ಉಸಿರಾಗಿಸಿಕೊಂಡಿದ್ದ ಮೂತ್ರಪಿಂಡ ಕಸಿ ತಜ್ಞ ತಮ್ಮ ಬದುಕನ್ನು ಕೊನೆಗೊಳಿಸಿಕೊಳ್ಳುವಂಥ ಕೃತ್ಯಕ್ಕೆ ಕೈಹಾಕಿದ್ದು ಏಕೆ? ಸಾವಿರಾರು ಜನರ ಪ್ರಾಣ ಉಳಿಸಿದ ವೈದ್ಯರಿಗೆ ಆಗಿದ್ದೇನು? 

ಪೂರ್ತಿ ಓದಿ
02:27 PM (IST) Mar 09

ತೇಜಸ್ವಿ ಸೂರ್ಯ & ಶಿವಶ್ರೀ ಆರತಕ್ಷತೆ: ನವಜೋಡಿಯ ಸಿಂಪ್ಲಿಸಿಟಿಗೆ ಫಿದಾ ಆದ ಜನರು!

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಆರತಕ್ಷತೆಯು ಅರಮನೆ ಮೈದಾನದಲ್ಲಿ ನಡೆಯಿತು. ಈ ಆರತಕ್ಷತೆಯಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರ ಸರಳತೆಗೆ ಜನರು ಫಿದಾ ಆದರು. ರಾಜಕೀಯ ವೈರಿಗಳಾದ ಸಿದ್ದರಾಮಯ್ಯ ಮತ್ತು ತೇಜಸ್ವಿ ಸೂರ್ಯ ನಗುತ್ತಾ ಮಾತನಾಡುತ್ತಿದ್ದುದು ವಿಶೇಷವಾಗಿತ್ತು.

ಪೂರ್ತಿ ಓದಿ
12:00 PM (IST) Mar 09

ಚಲಿಸುತ್ತಿದ್ದ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್‌: ವೈರಲ್ ವೀಡಿಯೋ

ಮಹಾರಾಷ್ಟ್ರದ ಬೊರಿವಾಲಿ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಅಪಾಯಕ್ಕೆ ಸಿಲುಕಿದ್ದರು. ರೈಲ್ವೆ ಪೊಲೀಸರ ಸಮಯಪ್ರಜ್ಞೆಯಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೂರ್ತಿ ಓದಿ
11:44 AM (IST) Mar 09

ಪ್ರಜ್ವಲ್ ಜೈಲಿನಿಂದ ಬರೋದು ಯಾವಾಗ ಅನ್ನೋದನ್ನ ಹೇಳಿ ಒಟ್ಟಿಗೆ ಸೇರಿ ಸ್ವಾಗತಿಸೋಣ ಎಂದ ಸೂರಜ್ ರೇವಣ್ಣ!

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲುಪಾಲಾಗಿರೋ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಡುಗಡೆಯ ಬಗ್ಗೆ ಎಂಎಲ್‌ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಸರ್ಕಾರ ಬದಲಾವಣೆಯ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. 

ಪೂರ್ತಿ ಓದಿ
09:42 AM (IST) Mar 09

ಕೆಲವು ಕಾಂಗ್ರೆಸಿಗರಿಂದ ಬಿಜೆಪಿ ಪರ ಕೆಲಸ, ಪಕ್ಷದ್ರೋಹಿಗಳಿಗೆ ರಾಹುಲ್ ಗಾಂಧಿ ಎಚ್ಚರಿಕೆ!

ಕಾಂಗ್ರೆಸ್‌ನಲ್ಲಿ ಬಿಜೆಪಿ ಪರ ಕೆಲಸ ಮಾಡುವವರನ್ನು ಗುರುತಿಸಿ ಉಚ್ಚಾಟಿಸಲು ಸಿದ್ಧ ಎಂದು ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಗುಜರಾತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿರದವರನ್ನು ಹೊರಹಾಕಲು ಸೂಚಿಸಿದ್ದಾರೆ.

ಪೂರ್ತಿ ಓದಿ
08:22 AM (IST) Mar 09

ಬಿಸಿಲಿಗೆ ಬಳಲಿದ್ದ ಜನತೆಗೆ ಗುಡ್‌ನ್ಯೂಸ್; ಮಾರ್ಚ್ 11ರಿಂದ ರಾಜ್ಯದ ಈ ಭಾಗದಲ್ಲಿ ಮಳೆ ಶುರು!

Karnataka Rain Alert: ಬಿಸಿಲಿನಿಂದ ಬಳಲುತ್ತಿರುವ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮಾರ್ಚ್ 11 ರಿಂದ ರಾಜ್ಯದ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪೂರ್ತಿ ಓದಿ
07:41 AM (IST) Mar 09

ಬಜೆಟ್‌ನಲ್ಲಿ ಮುಸ್ಲಿಂರಿಗೆ ಆದ್ಯತೆ ನೀಡಿದರೆ ನಾನು ವಿರೋಧಿಸುವುದಿಲ್ಲ: ಶ್ರೀರಾಮುಲು

ಬಿಜೆಪಿ ಮುಖಂಡ ಬಿ.ಶ್ರೀರಾಮುಲು, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ವಿರೋಧಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರವು ಎಸ್ಸಿ, ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

ಪೂರ್ತಿ ಓದಿ
07:17 AM (IST) Mar 09

ಚಪಾತಿಗಾಗಿ ಕೇಂದ್ರ ವಿವಿಯಲ್ಲಿ ಉತ್ತರ-ದಕ್ಷಿಣ ಭಾರತ ಮಾರಾಮಾರಿ! ಏನಿದು ಘಟನೆ?

ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್‌ನಲ್ಲಿ ಚಪಾತಿ ವಿಚಾರಕ್ಕೆ ವಿದ್ಯಾರ್ಥಿಗಳ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಉತ್ತರ ಮತ್ತು ದಕ್ಷಿಣ ಭಾರತದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪೂರ್ತಿ ಓದಿ