2025ರಲ್ಲಿ ತಮಿಳುನಾಡಿನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಟಾಪ್ 5 ತಮಿಳು ಸಿನಿಮಾಗಳ ಪಟ್ಟಿ ಬಿಡುಗಡೆಯಾಗಿದೆ. ಯಾವ್ಯಾವ ಸಿನಿಮಾಗಳು ಈ ಪಟ್ಟಿಯಲ್ಲಿವೆ ಅಂತ ನೋಡೋಣ.
- Home
- News
- State
- Karnataka News Live: 2025ರಲ್ಲಿ ಅತಿಹೆಚ್ಚು ಆದಾಯ ಗಳಿಸಿದ ಟಾಪ್ 5 ಸಿನಿಮಾಗಳ ಲಿಸ್ಟ್ ನೋಡಿ! ಕಮಾಲ್ ಮಾಡಿದ ಉಪ್ಪಿ!
Karnataka News Live: 2025ರಲ್ಲಿ ಅತಿಹೆಚ್ಚು ಆದಾಯ ಗಳಿಸಿದ ಟಾಪ್ 5 ಸಿನಿಮಾಗಳ ಲಿಸ್ಟ್ ನೋಡಿ! ಕಮಾಲ್ ಮಾಡಿದ ಉಪ್ಪಿ!

ಮಂಡ್ಯ/ಮದ್ದೂರು: ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯ ಕೋಮಿನ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಘಟನೆ ಖಂಡಿಸಿ ಬಿಜೆಪಿ-ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆಗಳು ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಮೆರವಣಿಗೆ ಮೇಲೆ ಎರಡು ಬಾರಿ ಕಲ್ಲು ತೂರಾಟ, ಮಾರಕಾಸ್ತ್ರ ಝಳಪಿಸಿದ ಘಟನೆಗಳು ನಡೆದಿವೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಮಹಿಳೆಯರು ಸೇರಿ 6 ಮಂದಿ ಗಾಯಗೊಂಡಿದ್ದಾರೆ. ಘಟನೆ ಖಂಡಿಸಿ ಇಂದು ಹಿಂದೂಪರ ಸಂಘಟನೆಗಳು ಇಂದು ಮದ್ದೂರು ಬಂದ್ಗೆ ಕರೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಭದ್ರತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ. ಇದೇ ವೇಳೆ, ಬುಧವಾರ ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಆಯೋಜಿಸಲಾಗಿದ್ದು, ರಾಜ್ಯ ಬಿಜೆಪಿ ನಾಯಕರ ನಿಯೋಗ ಇದರಲ್ಲಿ ಪಾಲ್ಗೊಳ್ಳಲಿದೆ.
Karnataka News Live:2025ರಲ್ಲಿ ಅತಿಹೆಚ್ಚು ಆದಾಯ ಗಳಿಸಿದ ಟಾಪ್ 5 ಸಿನಿಮಾಗಳ ಲಿಸ್ಟ್ ನೋಡಿ! ಕಮಾಲ್ ಮಾಡಿದ ಉಪ್ಪಿ!
Karnataka News Live:ನೇಪಾಳ ಪ್ರಧಾನಿ ರಾಜೀನಾಮೆ ಬಳಿಕ ಮಹತ್ವದ ಬೆಳವಣಿಗೆ, ಹಿಂದೂ ರಾಜ್ಯ ಮರುಸ್ಥಾಪಿಸಿ ರಾಜರ ಆಡಳಿತ?
ನೇಪಾಳದ ಪರಿಸ್ಥಿತಿ ಕೈಮೀರಿದೆ. ಪ್ರಧಾನಿ ರಾಜೀನಾಮೆ ನೀಡಿದ್ದರೆ, ಹಲವು ಮಾಜಿ ಪ್ರಧಾನಿಗಳು ಮೇಲೆ ದಾಳಿಯಾಗಿದೆ. ನೇಪಾಳ ಸೇನೆ ರಂಗ ಪ್ರವೇಶ ಮಾಡಿದ್ದು, ಶಾಂತಿ ಕಾಪಾಡಲು ಮನವಿ ಮಾಡಿದೆ. ಇದರ ನಡುವೆ ಮಹತ್ವದ ಬೆಳವಣಿಗೆ ಆಗಿದೆ. ನೇಪಾಳದಲ್ಲಿ ಮತ್ತೆ ರಾಜ ಆಡಳಿತ ಬರುತ್ತಾ?
Karnataka News Live:ಬ್ರಿಟೀಷರ ಕಾಲದಲ್ಲಿ ಸತ್ತ ಅಜ್ಜಿಯ ಸಮಾಧಿ ಹುಡುಕಿಕೊಂಡು ನಂದಿ ಬೆಟ್ಟಕ್ಕೆ ಇಂಗ್ಲೆಂಡಿಗ! ಸಾಥ್ ಕೊಟ್ಟ ನಳಿನಿ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಬ್ರಿಟಿಷ್ ಕಾಲದ ಸಾಹಿತಿ ಜಾನ್ ಗ್ಯಾರೆಟ್ ಪತ್ನಿ ಸೋಫಿಯಾ ಗ್ಯಾರೆಟ್ ಸಮಾಧಿಯನ್ನು ಇಂಗ್ಲೆಂಡಿನಿಂದ ಬಂದ ಅವರ ವಂಶಸ್ಥರು ಪತ್ತೆ ಮಾಡಿದ್ದಾರೆ. ದೇಶ, ಕುಟುಂಬ ಬಿಟ್ಟು ಭಾರತಕ್ಕೆ ಬಂದ ಪೊರ್ವಜರ ಸಮಾಧಿ ನೋಡಿ ಭಾವುಕರಾಗಿದ್ದು, ಅವರಿಗೆ ಗೌರವ ಸಲ್ಲಿಸಿದ್ದಾರೆ.
Karnataka News Live:ಕೈಗೆ ಸಿಕ್ಕ ನೇಪಾಳ ವಿದೇಶಾಂಗ ಸಚಿವೆಗೆ ಮುಖ ಮೂತಿ ನೋಡದೇ ಥಳಿಸಿದ ಜೆನ್ ಜೆಡ್ ಪ್ರತಿಭಟನಾಕಾರರು
ನೇಪಾಳದಲ್ಲಿ ಜೆನ್ ಜೆಡ್ ಸಮುದಾಯದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಆಕ್ರೋಶವೆಲ್ಲಾ ಅಲ್ಲಿನ ರಾಜಕಾರಣಿಗಳತ್ತ ತಿರುಗಿದೆ. ಕೈಗೆ ಸಿಕ್ಕ ತಮ್ಮ ದೇಶದ ವಿದೇಶಾಂಗ ಸಚಿವೆಗೆ ಮುಖ ಮೂತಿ ನೋಡದೇ ಪ್ರತಿಭಟನಾಕಾರರು ಥಳಿಸಿದ್ದಾರೆ.
Karnataka News Live:3 ದಿನ 3 ಪ್ರಧಾನಿಗಳು ಔಟ್! ಜಾಗತಿಕ ರಾಜಕಾರಣದಲ್ಲಿ ತಲ್ಲಣ!
ನೇಪಾಳ ಪರಧಾನಿ ರಾಜೀನಾಮೆ ಸೇರಿದಂತೆ ಕಳೆದ ಮೂರೇ ದಿನದಲ್ಲಿ ಮೂವರು ಪ್ರಧಾನಿಗಳು ಸ್ಥಾನ ಕಳದೆುಕೊಂಡಿದ್ದಾರೆ. ಹ್ಯಾಟ್ರಿಕ್ ಪ್ರಧಾನಿಗಳ ರಾಜೀನಾಮೆ ಹಿಂದಿನ ಕಾರಣವೇನು?
Karnataka News Live:ಅಂಕೋಲಾ ಶಾಸಕ ಸತೀಶ್ ಸೈಲ್ ಬಂಧನ - ₹1.41 ಕೋಟಿ ನಗದು, 6.75 ಕೆ.ಜಿ. ಚಿನ್ನ ಜಪ್ತಿ!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಬಂಧನ ಮಾಡಲಾಗಿದೆ. 250 ಕೋಟಿ ರೂ. ಬೆಲೆಬಾಳುವ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ದಾಳಿ ನಡೆಸಿತ್ತು. ಈ ವೇಲೆ ಸತೀಶ್ ಸೈಲ್ ಮನೆಯಲ್ಲಿ 1.41 ಕೋಟಿ ರೂ. ನಗದು ಮತ್ತು 6.75 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು.
Karnataka News Live:ಶಾಸಕ ವೀರೇಂದ್ರ ಪಪ್ಪಿ ₹100 ಕೋಟಿ ಅಕ್ರಮ ಸಂಪತ್ತು ಜಪ್ತಿ ಮಾಡಿದ ಇಡಿ; 21 ಕೆಜಿ ಬಂಗಾರ ವಶ!
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಅವರ ಅಕ್ರಮ ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಇಡಿ ದಾಳಿ ಚಳ್ಳಕೆರೆಯಲ್ಲಿ ದಾಳಿ ನಡೆಸಿ ₹24 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ ಮಾಡಿಕೊಳ್ಳಲಾಗಿದೆ. ಇದೀಗ, ಒಟ್ಟು ವಶಪಡಿಸಿಕೊಂಡ ಆಸ್ತಿ ₹100 ಕೋಟಿ ದಾಟಿದೆ. ವೀರೇಂದ್ರ ಇ.ಡಿ. ಕಸ್ಟಡಿಯಲ್ಲಿದ್ದಾರೆ.
Karnataka News Live:RSS ಕಟ್ಟಾಳು, ಬಿಜೆಪಿ ಕಟ್ಟಿಬೆಳಿಸಿದ ಸಿಪಿ ರಾಧಾಕೃಷ್ಣನ್ ಭಾರತದ 15ನೇ ಉಪ ರಾಷ್ಟ್ರಪತಿ
ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಭರ್ಜರಿ ಬಹುಮತಗಳೊಂದಿಗೆ ಆಯ್ಕೆಯಾಗಿರುವ ಸಿಪಿ ರಾಧಾಕೃಷ್ಣನ್ ಯಾರು? ಇವರ ರಾಜಕೀಯ ಜೀವನ, ಸಾಮಾಜಿಕ ಸೇವೆ ಕುರಿತು ರೋಚಕ ಮಾಹಿತಿ ಇಲ್ಲಿದೆ.
Karnataka News Live:ಕಾರ್ಮಿಕ ಕಾಯ್ದೆಗೆ ತಿದ್ದುಪಡಿ, ದಿನಕ್ಕೆ 12 ಗಂಟೆ ಕೆಲಸ!
Karnataka News Live:ಗಂಡ, ಹೆಂಡತಿ ಮಕ್ಕಳು ಸೇರಿ ಕಾಲುವೆಗೆ ಹಾರಿದ ಒಂದೇ ಕುಟುಂಬದ 6 ಜನ; ಇಬ್ಬರು ಸೇಫ್, ನಾಲ್ವರು ಸಾವು
ಬೀದರ್ನಲ್ಲಿ ಸಾಲಬಾಧೆ ಹಾಗೂ ಆಸ್ತಿ ವಿವಾದದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ತಂದೆ ಮತ್ತು ಮೂರು ಮಕ್ಕಳು ಮೃತಪಟ್ಟರೆ, ತಾಯಿ ಮತ್ತು ಒಂದು ಮಗುವನ್ನು ರಕ್ಷಿಸಲಾಗಿದೆ. ಘಟನೆ ಭಾಲ್ಕಿ ತಾಲೂಕಿನ ಮರೂರಿನಲ್ಲಿ ನಡೆದಿದೆ.
Karnataka News Live:ರಾಜ್ಯ ರಾಜಕಾರಣದಲ್ಲಿ ಬೆಚ್ಚಿಬೀಳಿಸೋ ಹಗರಣ; ಮಾಜಿ ಸಚಿವರ ಬಾಲಂಗೋಚಿಗಳಿಂದ ₹360 ಕೋಟಿ ಲೂಟಿ!
Karnataka News Live:ಉಪ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಆಯ್ಕೆ, 532 ಮತಗಳ ಭರ್ಜರಿ ಗೆಲುವು
ಉಪರಾಷ್ಟ್ರಪತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಸಂಜೆ 6 ಗಂಟೆಯಿಂದ ಮತ ಎಣಿಕೆ ಆರಂಭಗೊಂಡಿದೆ.ಇದೀಗ ಫಲಿತಾಂಶ ಘೋಷಣೆಯಾಗಿದೆ. ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು ಕಂಡಿದ್ದಾರೆ.
Karnataka News Live:ನೇಪಾಳ ಮಾಜಿ ಪ್ರಧಾನಿ ಪತ್ನಿಯನ್ನೇ ಜೀವಂತ ಸುಟ್ಟ ಪ್ರತಿಭಟನಕಾರರು; ವರದಿ
ನೇಪಾಳದ ಪ್ರತಿಭಟನೆ ಹಾಗೂ ಹಿಂಸಾಚಾರ ಕೈಮೀರಿದೆ. ಪ್ರತಿಭಟನಕಾರರು ಸಿಕ್ಕ ಸಿಕ್ಕ ಕಡೆ ಬೆಂಕಿ ಹಚುತ್ತಿದ್ದಾರೆ. ನೇಪಾಳ ಮಾಜಿ ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಮಾಜಿ ಪ್ರಧಾನಿ ಪತ್ನಿ ಜೀವಂತ ದಹನವಾದ ದಾರುಣ ಘಟನೆ ನಡೆದಿದೆ.
Karnataka News Live:ಬೆಂಗಳೂರಿನಲ್ಲಿ 3 ದಿನ ನೀರಿಲ್ಲ - ತುರ್ತು ಸಿದ್ಧತೆ ಮಾಡಿಕೊಳ್ಳಿ ಎಂದ ಜಲಮಂಡಳಿ!
ಬೆಂಗಳೂರಿನಲ್ಲಿ ಸೆಪ್ಟೆಂಬರ್ 15 ರಿಂದ 17ರವರೆಗೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಒಟ್ಟು 3 ದಿನಗಳ ಕಾಲ ಪಂಪಿಂಗ್ ಸ್ಟೇಷನ್ಗಳ ನಿರ್ವಹಣಾ ಕಾರ್ಯಗಳಿಂದಾಗಿ ಈ ಅವಧಿಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರು ಸಂಗ್ರಹಿಸಿಡಲು ಬೆಂಗಳೂರು ಜಲಮಂಡಳಿ ಸೂಚಿಸಿದೆ.
Karnataka News Live:ಕಾಂಗ್ರೆಸ್ ಸರ್ಕಾರಕ್ಕೆ ಧಾರ್ಮಿಕ ರಾಜಕೀಯ ಸಂಕಷ್ಟ, ಹಿಂದೂ ವಿರೋಧಿ ಎಂಬ ಪಟ್ಟಕಟ್ಟಲು ಈ ಸರಣಿ ಘಟನೆಗಳೇ ಕಾರಣ!
ರಾಜ್ಯದಲ್ಲಿ ನಡೆದ ಉದಯಗಿರಿ ಗಲಭೆ, ನಾಗಮಂಗಲ ಕೋಮುಗಲಭೆ, ಮದ್ದೂರು ಗಣೇಶ ಮೆರವಣಿಗೆ ಗಲಾಟೆ ಸೇರಿದಂತೆ ಹಲವು ಘಟನೆಗಳು ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂಬ ಆರೋಪಕ್ಕೆ ಗುರಿಮಾಡಿವೆ. ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ನಿರ್ಧಾರಗಳು ಮತ್ತು ಕ್ರಮಗಳು ಹಿಂದೂ ಭಾವನೆಗಳಿಗೆ ಧಕ್ಕೆ ತರುತ್ತಿವೆ.
Karnataka News Live:ಹಳದಿ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; 25ರ ಬದಲು 19 ನಿಮಿಷಕ್ಕೊಂದು ರೈಲು ಸಂಚಾರ!
Karnataka News Live:ಪಾಕಿಸ್ತಾನದಲ್ಲಿ ವಾಯುಭಾರ ಕುಸಿತ ಪರಿಣಾಮ; ಕರ್ನಾಟಕದಲ್ಲಿ 7 ದಿನ ಭಾರೀ ಮಳೆ!
Karnataka News Live:ಸದ್ದಿಲ್ಲದೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯ ರೈ ಬಚ್ಚನ್, ದಿಢೀರ್ ಬೆಳವಣಿಗೆ ಏನು?
ನಟಿ ಐಶ್ವರ್ಯ ರೈ ದಿಢೀರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ಕೂಡ ಐಶ್ವರ್ಯ ರೈ ಅರ್ಜಿ ವಿಚಾರಣೆ ನಡೆಸಿದೆ. ಅಷ್ಟಕ್ಕೂ ಐಶ್ವರ್ಯ ರೈ ಕೋರ್ಟ್ ಮೆಟ್ಟಿಲು ಹತ್ತಿದ್ದು ಯಾಕೆ?