ತೈವಾನ್ನಲ್ಲಿ ಪತ್ನಿಯ ಅಫೇರ್ ಬಗ್ಗೆ ಅನುಮಾನಗೊಂಡ ವ್ಯಕ್ತಿಯೊಬ್ಬ ರೋಬೋಟ್ ವ್ಯಾಕ್ಯೂಮ್ನ ಲೈವ್ ಕ್ಯಾಮೆರಾ ಬಳಸಿ ಆಕೆಯ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ. ಆ ದೃಶ್ಯಗಳಿಂದ ಸಿವಿಲ್ ಪ್ರಕರಣದಲ್ಲಿ ಪರಿಹಾರ ಪಡೆದರೂ, ಅನುಮತಿಯಿಲ್ಲದೆ ರೆಕಾರ್ಡ್ ಮಾಡಿದ ಆರೋಪದಲ್ಲಿ ಆತನಿಗೆ 5 ತಿಂಗಳ ಜೈಲು ಮತ್ತು ದಂಡ ವಿಧಿಸಲಾಗಿದೆ.
- Home
- News
- State
- State News Live: ರೋಬೋಟ್ ವ್ಯಾಕ್ಯೂಮ್ನಿಂದ ಹೆಂಡತಿಯ ಅಕ್ರಮ ಸಂಬಂಧ ಬಯಲು! ₹15 ಲಕ್ಷ ಪರಿಹಾರ ಸಿಕ್ಕಿದ್ರೂ ಗಂಡ ಜೈಲಿಗೆ ಹೋಗಿದ್ದೇಕೆ?
State News Live: ರೋಬೋಟ್ ವ್ಯಾಕ್ಯೂಮ್ನಿಂದ ಹೆಂಡತಿಯ ಅಕ್ರಮ ಸಂಬಂಧ ಬಯಲು! ₹15 ಲಕ್ಷ ಪರಿಹಾರ ಸಿಕ್ಕಿದ್ರೂ ಗಂಡ ಜೈಲಿಗೆ ಹೋಗಿದ್ದೇಕೆ?

ಬೆಂಗಳೂರು (ಆ.28): ಮಂಗಳೂರನ್ನು ಕರ್ನಾಟಕದ ರೈಲ್ವೆ ವಲಯಕ್ಕೆ ಸೇರ್ಪಡೆ ಮಾಡಬೇಕೆಂಬುದು 30 ವರ್ಷಗಳ ಕನ್ನಡಿಗರ ಹೋರಾಟ. ಅದರಂತೆ ಇದೀಗ ರೈಲ್ವೆ ಮಂಡಳಿಯು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆಮಂಗಳೂರನ್ನು ವರ್ಗಾವಣೆ ಅಧಿಸೂಚನೆ ಮಾಡುವ ಹೊರಡಿ ಸಿದ್ದು, ಕೇರಳದ ಒತ್ತಡಕ್ಕೆ ಮಣಿದು ಯಾವ ಬದಲಾ ವಣೆ ಮಾಡಿದರೂ ಹೋರಾಟ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಸಿವೆ.ಕೇರಳಂನಲ್ಲಿ ಕರ್ನಾಟಕದ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯದ ಯಾವ ರಾಜಕಾರಣಿಯೂ ಒಂದೇ ಒಂದು ಮಾತನ್ನೂ ಹೇಳದಿರುವುದು ಖಂಡನೀಯ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 28th August: ರೋಬೋಟ್ ವ್ಯಾಕ್ಯೂಮ್ನಿಂದ ಹೆಂಡತಿಯ ಅಕ್ರಮ ಸಂಬಂಧ ಬಯಲು! ₹15 ಲಕ್ಷ ಪರಿಹಾರ ಸಿಕ್ಕಿದ್ರೂ ಗಂಡ ಜೈಲಿಗೆ ಹೋಗಿದ್ದೇಕೆ?
Karnataka News Live 28th August: ಎಲ್ಲಾ ತ್ಯಾಗಕ್ಕೆ ನಾಗೇಂದ್ರ ಸಿದ್ಧ, ಆತ ಪಕ್ಷನಿಷ್ಠ ನಾಯಕ: ಡಿಕೆಶಿ
ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
Karnataka News Live 28th August: 65 ತೆರಿಗೆ ಸಂಗ್ರಾಹಕರು, ಗುಮಾಸ್ತರು, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ
ರಾಯಚೂರು ಜಿಲ್ಲಾ ಪಂಚಾಯತ್, ತೆರಿಗೆ ಸಂಗ್ರಾಹಕ ಮತ್ತು ಕ್ಲರ್ಕ್-ಕಮ್-ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 65 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಪಾಸಾದ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Karnataka News Live 28th August: ಇಂದು ಅರ್ಧ ಬೆಂಗಳೂರಿಗೆ ನೀರಿನ ಪೂರೈಕೆ ಸ್ಥಗಿತ
ಕಾವೇರಿ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದ ದುರಸ್ತಿ ಕಾಮಗಾರಿಯಿಂದಾಗಿ ಆ.28ರಂದು ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಜಲಮಂಡಳಿಯು ಸುಮಾರು 8 ಗಂಟೆಗಳ ಕಾಲ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಿದ್ದು, ಸಾರ್ವಜನಿಕರು ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಿದೆ.
Karnataka News Live 28th August: ತರಬೇತಿ ವಿಮಾನ ಪತನ : ಕನ್ನಡಿಗ ಸೇರಿ ಇಬ್ಬರು ಪೈಲಟ್ಗಳು ಸಾವು
ಕಾನ್ಪುರದ ಬಳಿ ತರಬೇತಿ ವಿಮಾನವೊಂದು ಪತನಗೊಂಡು ಕನ್ನಡಿಗ ಪೈಲಟ್ ಅಭಿಷೇಕ್ ಪೂಜಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಗಾರ್ಗ್ ಏವಿಯೇಷನ್ಗೆ ಸೇರಿದ ಟೆಕ್ನಾಮ್ ಪಿ2006ಟಿ ವಿಮಾನವು ಟೇಕ್ ಆಫ್ ಆದ 20 ನಿಮಿಷಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
Karnataka News Live 28th August: ಮೈಸೂರು ರೈಲ್ವೆ ವಿಭಾಗಕ್ಕೆ ಅ.1ಕ್ಕೆ ಮಂಗ್ಳೂರು ಸೇರ್ಪಡೆ; ರೈಲ್ವೆ ಮಂಡಳಿ ನಿರ್ಧಾರದಲ್ಲಿಲ್ಲ ಬದಲಾವಣೆ
ಕೇರಳದ ತೀವ್ರ ವಿರೋಧದ ನಡುವೆಯೂ, ರೈಲ್ವೆ ಮಂಡಳಿಯು ಮಂಗಳೂರನ್ನು ಮೈಸೂರು ನೈಋತ್ಯ ರೈಲ್ವೆ ವಿಭಾಗಕ್ಕೆ ಸೇರ್ಪಡೆಗೊಳಿಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 1 ರಿಂದ ಜಾರಿಗೆ ಬರುವ ಈ ನಿರ್ಧಾರವು ಆಡಳಿತಾತ್ಮಕ ಸುಧಾರಣೆಯಾಗಿದ್ದು, ಕರ್ನಾಟಕಕ್ಕೆ ಅನುಕೂಲಕರವಾಗಿದೆ ಎಂದು ಮಂಡಳಿ ಹೇಳಿದೆ.