SSLC Exam Update: ಎಸ್ಎಸ್ಎಲ್ಸಿ(SSCL) ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ 1ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (ಎಸ್ಎ-1) ಸೆ.23 ರಿಂದ 30 ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.
- Home
- News
- State
- Karnataka News Live: SSLC ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್ಎ-1 ಪರೀಕ್ಷೆ, ಏನಿದು ಹೊಸ ಬದಲಾವಣೆ?
Karnataka News Live: SSLC ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್ಎ-1 ಪರೀಕ್ಷೆ, ಏನಿದು ಹೊಸ ಬದಲಾವಣೆ?

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 9 ಅಂಶಗಳ ಹೊಸ ಮಿಷನ್ ಆರಂಭಿಸಿದ ಸಿಎಂ ಡಿ.ಕೆ. ಶಿವಕುಮಾರ್
1. ಹೂಡಿಕೆ ಹೆಚ್ಚಳಕ್ಕೆ ಆರ್ಥಿಕ ಮಿಷನ್ 2. ಕೃಷಿ ಮೌಲ್ಯವರ್ಧನೆಗೆ ಜೈವಿಕ ಆರ್ಥಿಕ ಮಿಷನ್ 3. ರಕ್ತಹೀನತೆ ವಿರುದ್ಧ ಅಭಿಯಾನ 4. ಕಲಬುರಗಿಗೆ ಮೂಲಸೌಕರ್ಯ 5. 50000 ನಿವೇಶನ 6. ಕಲಬುರಗಿಯಲ್ಲಿ ಐಟಿ ಪಾರ್ಕ್ 7. ಪ್ರವಾಸೋದ್ಯಮ, ಪಾರಂಪರಿಕ ತಾಣಗಳ ಅಭಿವೃದ್ಧಿ 8. ಕ್ರೀಡಾಭಿವೃದ್ಧಿಗೆ ಸ್ಪೋರ್ಟ್ಸ್ ಸಿಟಿ 9. ಹಸಿರು ಹೊದಿಕೆ ಹೆಚ್ಚಳಕ್ಕೆ ಕೋಟಿ ವೃಕ್ಷ ಅಭಿಯಾನ
ಕಲ್ಯಾಣ ನಾಡಿನ ಹೆಬ್ಬಾಗಿಲು ಕಲಬುರಗಿಯಲ್ಲಿ ಗುರುವಾರ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡು, ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇದೇ ವೇಳೆ, ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಸಂಬಂಧಿಸಿದ 1,917.13 ಕೋಟಿ ರು. ಮೊತ್ತದ 940 ಕಾಮಗಾರಿಗಳಿಗೆ ಚಾಲನೆ ನೀಡಿದರು.
ಇದೇ ಮೊದಲ ಬಾರಿಗೆ ಕರಾವಳಿಯ ‘ಬಿಸಿನೆಸ್ ಹಬ್’ ಮಂಗಳೂರಿನಲ್ಲಿ ಶುಕ್ರವಾರ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದ್ದು, ಇದಕ್ಕಾಗಿ ಮಂಗಳೂರು ನಗರ ಸಕಲ ಸಜ್ಜಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂಬುದಾಗಿ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಸಿಆರ್ಝೆಡ್ ನಿಯಮ ಸಡಿಲಿಕೆ ಘೋಷಣೆ ಮಾಡುವ ನಿರೀಕ್ಷೆಯಿದೆ.
Karnataka News Live SSLC ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್ಎ-1 ಪರೀಕ್ಷೆ, ಏನಿದು ಹೊಸ ಬದಲಾವಣೆ?
Karnataka News Live ಕರಾವಳಿ, ಮಲೆನಾಡು ಅಭಿವೃದ್ಧಿಗೆ ಸರ್ಕಾರದ ಹೊಸ ಪ್ಲಾನ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಡಿಕೆಶಿ ಹೇಳಿಕೆ
Karnataka News Live ಧರ್ಮಸ್ಥಳಕ್ಕೆ ರೈಲು - ಮಂಗಳೂರು-ಉಜಿರೆ-ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಮಾರ್ಗಕ್ಕೆ ಬೇಡಿಕೆ!
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ರೈಲ್ವೆ ಜಾಲವನ್ನು ವಿಸ್ತರಿಸಬೇಕೆಂಬ ಕೂಗು ಪ್ರವಾಸಿಗರು ಹಾಗೂ ಸ್ಥಳೀಯರಿಂದ ಕೇಳಿಬರುತ್ತಿದೆ. ಮಂಗಳೂರು-ಉಜಿರೆ-ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಮಾರ್ಗ ನಿರ್ಮಾಣವಾದರೆ ಭಕ್ತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅಪಾರ ಅನುಕೂಲವಾಗಲಿದೆ.
Karnataka News Live Bengaluru Traffic Jam - 5 ಕಿಮೀಗೆ ಎರಡು ಗಂಟೆ ಪ್ರಯಾಣ! ಈ ಏರಿಯಾ ಟ್ರಾಫಿಕ್ ಕಂಡು IFS ಅಧಿಕಾರಿ ಶಾಕ್
ಬೆಂಗಳೂರಿನ ವೈಟ್ಫೀಲ್ಡ್, ಗುಂಜೂರು ಮತ್ತು ವರ್ತೂರು ಭಾಗಗಳಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು, ಶಾಲಾ ಮಕ್ಕಳು ಕೇವಲ ನಾಲ್ಕೈದು ಕಿಲೋಮೀಟರ್ ದೂರದ ಶಾಲೆ ತಲುಪಲು ಎರಡು ಗಂಟೆಗಳ ಕಾಲ ರಸ್ತೆಯಲ್ಲೇ ಕಳೆಯುವಂತಾಗಿದೆ. ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Karnataka News Live ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಡಿಸೆಂಬರ್ಗೆ ಪೂರ್ಣ, ₹485 ಕೋಟಿ ವೆಚ್ಚದಲ್ಲಿ ಮರು ಅಭಿವೃದ್ಧಿ - ಸಚಿವ ಸೋಮಣ್ಣ
Karnataka News Live ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ 9 ಯೋಜನೆಗಳೇನು? ಯಾರಿಗೆ ಲಾಭ?
ಕಲಬುರಗಿಯಲ್ಲಿ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 9 ಅಂಶಗಳ ಯೋಜನೆಯನ್ನು ಘೋಷಿಸಿದ್ದಾರೆ. ಇದರಲ್ಲಿ ಎಕಾನಮಿ ಮಿಷನ್, ಐಟಿ ಪಾರ್ಕ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು 50,000 ನಿವೇಶನಗಳ ವಿತರಣೆ ಸೇರಿವೆ. ಜೊತೆಗೆ 1,917.13 ಕೋಟಿ ರೂ. ಮೊತ್ತದ 940 ಕಾಮಗಾರಿಗಳಿಗೆ ಚಾಲನೆ ನೀಡಿದರು.
Karnataka News Live ಪ್ರಧಾನಿ ಮೋದಿ ಜನ್ಮದಿನದಂದು ದೀಪ ಹಚ್ಚಿದ ಕುರಿತು ಬಿಕೆ ಹೇಳಿದ ಆ ಮಾತಿಗೆ ಬಿಜೆಪಿ ಕಿಡಿ!
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಯುವ ಕಾಂಗ್ರೆಸ್ 'ವಿಶ್ವ ನಿರುದ್ಯೋಗ ದಿನ'ವನ್ನಾಗಿ ಆಚರಿಸಿ ಪ್ರತಿಭಟನೆ ನಡೆಸಿದೆ. ದೇಶದಲ್ಲಿ ಶೇ.72ರಷ್ಟು ಯುವಕರು ನಿರುದ್ಯೋಗದಿಂದ ಬಳಲುತ್ತಿದ್ದು, ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.
Karnataka News Live ಕರಾವಳಿಯಲ್ಲಿ ಮೊದಲ ಕ್ಯಾಬಿನೆಟ್ - ದ.ಕ.ಬದಲು ಮಂಗಳೂರು, ತುಳುಗೆ 2ನೇ ರಾಜ್ಯ ಭಾಷೆ, ಟೂರಿಸಂಗಾಗಿ CRZ ನೀತಿ ಪರಿಷ್ಕಾರ?
ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಕರಾವಳಿ ಅಭಿವೃದ್ಧಿಗೆ 5000 ಕೋಟಿ ರೂ. ಪ್ಯಾಕೇಜ್ ಸೇರಿದಂತೆ ಹಲವು ಮಹತ್ವದ ಘೋಷಣೆಗಳ ನಿರೀಕ್ಷೆಯಿದೆ. ತುಳು ಭಾಷೆಗೆ 2ನೇ ರಾಜ್ಯ ಭಾಷೆ ಸ್ಥಾನಮಾನ, ಜಿಲ್ಲೆಯ ಹೆಸರು ಬದಲಾವಣೆ ಸಾಧ್ಯತೆಯಿದೆ. ಸಭೆಗೂ ಮುನ್ನ ಮುಖ್ಯಮಂತ್ರಿ ಹಾಗೂ ಸಚಿವರು ತೆರೆದ ಬಸ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ.