08:38 AM (IST) Sep 09

Karnataka news liveಕಾವೇರಿ ನೀರು ಮತ್ತೆ ಬಿಡುಗಡೆ ಆದೇಶ ಬೆನ್ನಲ್ಲೇ ಮಹತ್ವದ ಬೆಳವಣಿಗೆ; ಸುಪ್ರೀಂಗೆ ಹೋಗಲು ರಾಜ್ಯ ನಿರ್ಧಾರ?

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್‌ ಕಾವೇರಿ ನೀರು ಹರಿಸುವ ಸಿಡಬ್ಲ್ಯುಆರ್‌ಸಿ ಆದೇಶವನ್ನು ಅಸಂಬದ್ಧ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ. ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

Read Full Story
08:22 AM (IST) Sep 09

Karnataka news liveಬೆಂಗಳೂರು ಬೈಕ್, ಆಟೋ ಸವಾರರಿಗೆ ಗುಡ್ ನ್ಯೂಸ್; ಏರ್‌ಪೋರ್ಟ್, ಎಲೆಕ್ಟ್ರಾನಿಕ್-ಸಿಟಿ ಮೇಲ್ಸೇತುವೆ ಸಂಚಾರಕ್ಕೆ ಅನುಮತಿ!

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ, ಬೆಂಗಳೂರು ಸಂಚಾರ ಪೊಲೀಸರು ಪ್ರಮುಖ ಮೇಲ್ಸೇತುವೆಗಳ ಮೇಲಿನ ವಾಹನ ಸಂಚಾರ ನಿರ್ಬಂಧವನ್ನು ಮಾರ್ಪಡಿಸಿದ್ದಾರೆ. ಈ ಬದಲಾವಣೆಯ ಅನ್ವಯ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಗಳ ಮೇಲೆ ಬೈಕ್‌ ಸಂಚಾರಕ್ಕೆ ಹಂತ ಹಂತವಾಗಿ ಅವಕಾಶ ಕಲ್ಪಿಸಲಾಗಿದೆ.

Read Full Story
08:09 AM (IST) Sep 09

Karnataka news liveಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್ - ಬೆಳ್ಳಂಬೆಳಗ್ಗೆ ಮನೆ, ಕಚೇರಿ ಸೇರಿದಂತೆ 17 ಕಡೆಗಳಲ್ಲಿ ದಾಳಿ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಬಾಮೈದನಿಗೆ ಸಂಬಂಧಿಸಿದ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅನಧಿಕೃತ ಅಬಕಾರಿ ಲೈಸೆನ್ಸ್ ಹಂಚಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಈ ಶೋಧ ಕಾರ್ಯ ನಡೆಯುತ್ತಿದೆ.

Read Full Story
08:06 AM (IST) Sep 09

Karnataka news liveಶಿವಮೊಗ್ಗ - ಕನ್ನಡ ಶಾಲೆಗಳಿಗೆ ಅನುದಾನ ಕೇಳಿ ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ!

1995ರ ನಂತರದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಶಿಕಾರಿಪುರದ ಶಿಕ್ಷಕ ಪ್ರಶಾಂತ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಬೇಡಿಕೆ ಈಡೇರದಿದ್ದರೆ, ನವೆಂಬರ್ 1 ರಂದು ಇತರ ಶಿಕ್ಷಕರೂ ರಕ್ತದಲ್ಲಿ ಪತ್ರ ಬರೆಯುವುದಾಗಿ ಎಚ್ಚರಿಸಿದ್ದಾರೆ.
Read Full Story
07:50 AM (IST) Sep 09

Karnataka news liveಡಾ.ರಾಜ್ ಕುಮಾರ್-ಲೀಲಾವತಿ ಸಂಬಂಧ - ತಿಂಗಳಲ್ಲಿ 10 ಮುದ್ರಣ ಕಂಡ 'ಲೀಲಮ್ಮ ನಿನ್ನ ಗಂಡ ಯಾರಮ್ಮ?' ಕೃತಿ!

ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್ ರಚಿಸಿದ ‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಯು ಕೇವಲ 28 ದಿನಗಳಲ್ಲಿ 10ನೇ ಮುದ್ರಣ ದಾಖಲೆ ಸೃಷ್ಟಿಸಿದೆ. ಡಾ.ರಾಜ್ ಕುಮಾರ್ ಚಾರಿತ್ರ್ಯವಧೆ ಮಾಡುವ ವಿವಾದಗಳಿಗೆ, ಲೀಲಾವತಿ ಮತ್ತು ವಿನೋದ್ ರಾಜ್ ಸ್ವತ್ತುಗಳಿಗೆ ಸರ್ಕಾರಿ ದಾಖಲೆಗಳ ಸಹಿತ ಪುಸ್ತಕ ತೆರೆ ಎಳೆಯುತ್ತದೆ.

Read Full Story
07:23 AM (IST) Sep 09

Karnataka news liveಡಿಕೆಶಿ ಸರ್ಕಾರಕ್ಕೆ ನಾಳೆ 100 ದಿನದ ಸಂಭ್ರಮ: ಈ ಹೊಸ ಯೋಜನೆಗಳ ಭರ್ಜರಿ ಘೋಷಣೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಸೆಪ್ಟೆಂಬರ್‌ 10ರ ಗುರುವಾರ ಯಶಸ್ವಿ ಶತದಿನಗಳನ್ನು ಪೂರೈಸುತ್ತಿದೆ. ಈ ಸೆಂಚುರಿ ಸಂಭ್ರಮದ ದಿನದಂದು ರೈತರು, ಯುವಜನರು ಸೇರಿದಂತೆ ವಿವಿಧ ವರ್ಗದವರಿಗೆ ಕೆಲವು ಭರ್ಜರಿ ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ. ಈ ಹೊಸ ಘೋಷಣೆಗಳೇನು ಎನ್ನುವುದನ್ನು ಸರ್ಕಾರದ ಶತದಿನಗಳ ಸಂಭ್ರಮದ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪ್ರಕಟಿಸಲಿದ್ದಾರೆ.

ಇದೇ ಸೆ.10ರಂದು ನನ್ನ ಸರ್ಕಾರ 100 ದಿನಗಳನ್ನು ಪೂರೈಸುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂಬುದರ ಬಗ್ಗೆ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಘೋಷಿಸಿದ್ದೇನೆ. ಇವುಗಳ ಜೊತೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಘೋಷಿಸಲು ಸಿದ್ಧತೆ ಮಾಡಿಕೊಂಡಿದ್ದೇನೆ.

-ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ

Read Full Story