- Home
- News
- State
- ಕನ್ನಡಿಗರೇ, ಕನ್ನಡದ ಮೊದಲ ಹಲ್ಮಿಡಿ ಶಾಸನ ನೋಡಬೇಕೆ? ಕೇವಲ 5 ದಿನ ಅವಕಾಶವಿದೆ, ತಪ್ಪದೇ ಇಲ್ಲಿಗೆ ಭೇಟಿ ನೀಡಿ!
LIVE NOW
ಕನ್ನಡಿಗರೇ, ಕನ್ನಡದ ಮೊದಲ ಹಲ್ಮಿಡಿ ಶಾಸನ ನೋಡಬೇಕೆ? ಕೇವಲ 5 ದಿನ ಅವಕಾಶವಿದೆ, ತಪ್ಪದೇ ಇಲ್ಲಿಗೆ ಭೇಟಿ ನೀಡಿ!

ಸಾರಾಂಶ
ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಸಂಭ್ರಮದ ಅಂಗವಾಗಿ ತುಮಕೂರಿನಲ್ಲಿ ಬೃಹತ್ ಸಾಧನಾ ಸಮಾವೇಶ ನಡೆಯಲಿದ್ದು, ಒಂದೇ ವೇದಿಕೆಯಲ್ಲಿ 1.52 ಲಕ್ಷ ಮಂದಿಗೆ ಹಕ್ಕು ಪತ್ರ ನೀಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ. ಇನ್ನು ಸಮಾವೇಶದಲ್ಲಿ ಕಂದಾಯ ಇಲಾಖೆಯ 60 ಸಾವಿರ, ಗ್ರಾಮೀಣಾಭಿವೃದ್ಧಿ ಇಲಾಖೆಯ 80 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಒಟ್ಟಾರೆ 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ.
Add Asianetnews Kannada as a Preferred Source

08:12 AM (IST) May 19
Karnataka News Liveಕನ್ನಡಿಗರೇ, ಕನ್ನಡದ ಮೊದಲ ಹಲ್ಮಿಡಿ ಶಾಸನ ನೋಡಬೇಕೆ? ಕೇವಲ 5 ದಿನ ಅವಕಾಶವಿದೆ, ತಪ್ಪದೇ ಇಲ್ಲಿಗೆ ಭೇಟಿ ನೀಡಿ!
ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಅಂಗವಾಗಿ, ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆಯಲ್ಲಿ ಕನ್ನಡದ ಮೊಟ್ಟ ಮೊದಲ ಹಲ್ಮಿಡಿ ಶಾಸನ ಹಾಗೂ ಕರ್ನಾಟಕದ ಪ್ರಾಚೀನ ದೇವಾಲಯಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಪ್ರದರ್ಶನವು ಮೇ ೨೪ರವರೆಗೆ ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಣೆಗೆ ಲಭ್ಯವಿದೆ.
Read Full Story 07:36 AM (IST) May 19
Karnataka News Liveಸರ್ಕಾರದ ಸಾಧನಾ ರ್ಯಾಲಿಗೆ ತುಮಕೂರು ಸಜ್ಜು; 2 ಲಕ್ಷ ಜನರು ಭಾಗಿ, ರಾಜ್ಯ ಸರ್ಕಾರಕ್ಕೆ ನಾಳೆ 3: ಇಂದು ‘ಗಿನ್ನೆಸ್ ದಾಖಲೆ’ಯ ಸಮಾವೇಶ!
ಕಾಂಗ್ರೆಸ್ ಸರ್ಕಾರದ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ತುಮಕೂರಿನಲ್ಲಿ 'ಸಾಧನಾ ಸಮಾವೇಶ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ.