ತೆಲಂಗಾಣದ ಸಂಗಾರೆಡ್ಡಿಯಲ್ಲಿ ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಬೀದರ್ನ 6 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಒಂದೇ ಆಟೋದಲ್ಲಿ 14 ಜನ ಪ್ರಯಾಣಿಸುತ್ತಿದ್ದ ವೇಳೆ ಸಂಭವಿಸಿದ ಈ ದುರಂತಕ್ಕೆ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
Karnataka News Live: ಟ್ಯಾಂಕರ್-ಆಟೋ ಮಧ್ಯೆ ಭೀಕರ ಅಪಘಾತ.. ಬೀದರ್ ಮೂಲದ ಆರು ಮಂದಿ ದಾರುಣ ಸಾವು

ಕರ್ನಾಟಕ ರಾಜ್ಯ ಸಚಿವ ಸಂಪುಟದ ಕುರಿತಾಗಿ ಆಕ್ರೋಶ ಭುಗಿಲೆದ್ದ ಬೆನ್ನಲ್ಲಿಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಕೆಲವೊಂದು ಬದಲಾವಣೆಗೆ ಕೇಂದ್ರ, ರಾಜ್ಯ ನಾಯಕರ ಒಲವು ತೋರಿಸಲಾಗಿದೆ. ಎಐಸಿಸಿ ಅಧ್ಯಕ್ಷ ಖರ್ಗೆ, ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಜೊತೆ ಸಿಎಂ ಚರ್ಚೆ ಮಾಡಿದ್ದು, ಬಂಡಾಯ, ಬದಲಾವಣೆ, ಖಾತೆ ಹಂಚಿಕೆ, ಬಾಕಿ ಸ್ಥಾನ ತುಂಬುವ ಬಗ್ಗೆ ಮಾಹಿತಿ ಪಡೆದು ಅಂತಿಮ ನಿರ್ಧಾರವನ್ನು ದಿಲ್ಲಿ ನಾಯಕರು ಬಾಕಿ ಉಳಿಸಿಕೊಂಡಿದ್ದಾರೆ.
ಬಿಡದಿ ಟೌನ್ ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ರಾಜ್ಯ ಸರ್ಕಾರ ಬೆಂಗಳೂರು ಪ್ರವೇಶ ಮಾಡದಂತೆ ತಡೆದಿದೆ. ಈಹಿನ್ನೆಲೆಯಲ್ಲಿ 2ನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಿ ಆ.18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
Karnataka News Liveಟ್ಯಾಂಕರ್-ಆಟೋ ಮಧ್ಯೆ ಭೀಕರ ಅಪಘಾತ.. ಬೀದರ್ ಮೂಲದ ಆರು ಮಂದಿ ದಾರುಣ ಸಾವು
Karnataka News Liveಪೋಸ್ಟ್ ಆಫೀಸ್ನ ಈ ಪ್ಲಾನ್ನಲ್ಲಿದೆ ಬಂಪರ್ ಲಾಭ! ತಿಂಗಳಿಗೆ ಸಣ್ಣ ಉಳಿತಾಯ ಮಾಡಿ, ₹10 ಲಕ್ಷದೊಂದಿಗೆ 7 ತೊಲ ಚಿನ್ನ ನಿಮ್ಮದಾಗಿಸಿ!
ಅಂಚೆ ಕಚೇರಿಯ ಮರುಕಳಿಸುವ ಠೇವಣಿ (RD) ಯೋಜನೆಯು ಸಣ್ಣ ಮಾಸಿಕ ಹೂಡಿಕೆಯ ಮೂಲಕ ದೊಡ್ಡ ಮೊತ್ತವನ್ನು ಗಳಿಸಲು ಉತ್ತಮ ಅವಕಾಶ ನೀಡುತ್ತದೆ. ದಿನಕ್ಕೆ ₹100 ಉಳಿಸುವ ಮೂಲಕ 5 ವರ್ಷಗಳಲ್ಲಿ ₹2 ಲಕ್ಷಕ್ಕೂ ಹೆಚ್ಚು ಗಳಿಸಬಹುದು, ಮತ್ತು ದಿನಕ್ಕೆ ₹500 ಉಳಿಸಿದರೆ ₹10 ಲಕ್ಷಕ್ಕೂ ಅಧಿಕ ನಿಧಿ ಸಂಗ್ರಹಿಸಬಹುದು.
Karnataka News Liveಒಂದೇ ಜಾಗ.. ಒಂದೇ ವಾರದಲ್ಲಿ ಕೃಷ್ಣ ನದಿಗೆ ಬಿದ್ದ ಮೂರು ಕಾರುಗಳು.. ಬಾಗಲಕೋಟೆಯ ಈ ಜಾಗದಲ್ಲಿ ಏನೋ ಸಮಸ್ಯೆ..
ಬಾಗಲಕೋಟೆಯ ಗಲಗಲಿ-ರಬಕವಿ ರಸ್ತೆಯಲ್ಲಿ ನಿರ್ಲಕ್ಷ್ಯದ ಕಾಮಗಾರಿಯಿಂದಾಗಿ ಒಂದೇ ವಾರದಲ್ಲಿ ಮೂರು ಕಾರುಗಳು ಕೃಷ್ಣಾ ನದಿಗೆ ಬಿದ್ದಿವೆ. ಅಧಿಕಾರಿಗಳ ವಿರುದ್ಧ ದೂರು ನೀಡಲು ಹೋದರೂ ಪೊಲೀಸರು ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ
Karnataka News Liveಯಶ್ ‘ಟಾಕ್ಸಿಕ್’ ಸಿನಿಮಾ ರಿಜೆಕ್ಟ್ ಮಾಡಿದ ಆ ಸ್ಟಾರ್ ಹೀರೋ ಯಾರು? ಗೋಲ್ಡನ್ ಚಾನ್ಸ್ ಮಿಸ್ ಮಾಡ್ಕೊಂಡ್ರಾ..?
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾವನ್ನು ಮೊದಲು ಕಾಲಿವುಡ್ ನಟ ಸೂರ್ಯ ಅವರು ರಿಜೆಕ್ಟ್ ಮಾಡಿದ್ದರು ಎಂಬ ಸುದ್ದಿ ವೈರಲ್ ಆಗಿದೆ. ಸೂರ್ಯ ಅವರು ಚಿತ್ರವನ್ನು ನಿರಾಕರಿಸಲು ಬಲವಾದ ಕಾರಣ ಕೂಡ ಇದೆ.
Karnataka News Liveಬಿಗ್ಬಾಸ್ ಎಂಟ್ರಿಗಾಗಿ ನೆಲದ ಮೇಲೆ ಬಿದ್ದು ಹೊರಳಾಡಿದ ಗಂಗಾ, ನಿಮಗೆ ಅರ್ಹತೆಯೇ ಇಲ್ಲ ಎಂದ ಸಂಗೀತಾ ಶೃಂಗೇರಿ!
Karnataka News Liveಜೂನಿಯರ್ NTRಗೆ ಮೇಜರ್ ಸರ್ಜರಿ.. ಸ್ಟಾರ್ ನಟನ ಆರೋಗ್ಯದಲ್ಲಿ ಹಠಾತ್ ಏನಾಯ್ತು..?
ಸಿನಿಮಾ ಶೂಟಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಜೂನಿಯರ್ ಎನ್ಟಿಆರ್, ವೈದ್ಯರ ಸಲಹೆಯಂತೆ ಹೈದರಾಬಾದ್ನಲ್ಲಿ ಮೇಜರ್ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ನಟ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
Karnataka News Liveಆಪ್ತ ಸ್ನೇಹಿತರ ಜೊತೆ ವಿಶೇಷವಾಗಿ ʻಬ್ರೈಡ್ ಟು ಬಿʼ ಪಾರ್ಟಿ ಆಚರಿಸಿಕೊಂಡ ಚಿಕ್ಕಣ್ಣ ಭಾವಿ ಪತ್ನಿ ಪಾವನಾ!
Karnataka News LiveViral - ಇದು ಸಾಮನ್ಯ ಅಲ್ಲ! ಭಯಾನಕ ಅಘೋರಿಯನ್ನೇ ಮಂಡಿಯೂರಿ ಕೂರುವಂತೆ ಮಾಡಿದ ಮಗು; ದಂಗಾದ ಜನ! ಅಷ್ಟಕ್ಕೂ ಆಗಿದ್ದೇನು?
Karnataka News LiveApp ki adalat - ಮೋದಿ, ಶಾರುಖ್, ವಾಜಪೇಯಿ ಕೂತ ಹಾಟ್ಸೀಟ್ನಲ್ಲಿ ಯಶ್; ಈ ಶೋನಲ್ಲಿ ಕಾಣಿಸಿಕೊಂಡ ಮೊದಲ ಕನ್ನಡಿಗ!
Karnataka News LiveBGC Hospitals Kannada YouTube ಚಾನೆಲ್ಗೆ 1 ಲಕ್ಷ ಸಬ್ಸ್ಕ್ರೈಬರ್ಸ್; ಜೀರ್ಣಾಂಗ ಆರೋಗ್ಯ ಶಿಕ್ಷಣದಲ್ಲಿ ಐತಿಹಾಸಿಕ ಸಾಧನೆ
ಬೆಂಗಳೂರು ಗ್ಯಾಸ್ಟ್ರೋ ಸೆಂಟರ್ (BGC Hospitals) ನ ಕನ್ನಡ ಯೂಟ್ಯೂಬ್ ಚಾನೆಲ್ 1 ಲಕ್ಷಕ್ಕೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ತಲುಪಿದೆ. ಈ ಚಾನೆಲ್ ಹೊಟ್ಟೆ, ಯಕೃತ್ತು, ಮತ್ತು ಇತರ ಜೀರ್ಣಾಂಗ ಸಮಸ್ಯೆಗಳ ಬಗ್ಗೆ ವೈಜ್ಞಾನಿಕ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುತ್ತಿದೆ.
Karnataka News Liveಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮತ್ತೊಮ್ಮೆ ಅವಳಿಗಳ ದರ್ಬಾರ್.. ದಕ್ಷಿಣ ಆಫ್ರಿಕಾದಲ್ಲಿ ಸಹೋದರರ ಸವಾಲ್..!
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅವಳಿ ಸೋದರರ ಹವಾ ಮತ್ತೊಮ್ಮೆ ಶುರುವಾಗಿದೆ. ಆಸ್ಟ್ರೇಲಿಯಾದ ಸ್ಟೀವ್ ವಾ - ಮಾರ್ಕ್ ವಾ, ನ್ಯೂಜಿಲೆಂಡ್ನ ಹ್ಯಾಮಿಶ್ ಮಾರ್ಷಲ್ - ಜೇಮ್ಸ್ ಮಾರ್ಷಲ್ ನಂತರ ಈಗ ದಕ್ಷಿಣ ಆಫ್ರಿಕಾದ ಜಾನ್ಸೆನ್ ಸೋದರರು ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗಿದ್ದಾರೆ.
Karnataka News Live'ಅನ್ನ ವಿಷ ಮಾಡಿದರೆ ಅವರ ವಂಶವೇ ಸರ್ವನಾಶ..' ಹೋಟೆಲ್ ಮಾಫಿಯಾ ವಿರುದ್ಧ ಸಿಡಿದೆದ್ದ ಜಗ್ಗೇಶ್
ಬೆಂಗಳೂರಿನ ಐಷಾರಾಮಿ ಹೋಟೆಲ್ಗಳಲ್ಲಿ ಕೊಳೆತ ಮಾಂಸ, ಫಂಗಸ್ಯುಕ್ತ ಆಹಾರ ಪತ್ತೆಯಾದ ಪ್ರಕರಣಕ್ಕೆ ನಟ ಜಗ್ಗೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ರೋಗಗ್ರಸ್ತ ಊಟದಿಂದ ಕ್ಯಾನ್ಸರ್ನಂತಹ ಕಾಯಿಲೆಗಳು ಬರುತ್ತವೆ ಎಂದು ಎಚ್ಚರಿಸಿದ್ದಾರೆ.
Karnataka News Liveನೀಟ್ ವಿದ್ಯಾರ್ಥಿನಿಯಾಗಿದ್ದ ತಂಗಿ ಸಾವು, ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣ ಮಂಗಳೂರಿಗೆ ಬಂದು ಜೀವ ಮುಗಿಸಿದ!
ನೀಟ್ ಪರೀಕ್ಷೆಯ ಅಕ್ರಮದಿಂದಾಗಿ ಜೂನ್ನಲ್ಲಿ ಸಾವು ಕಂಡ ಕೇರಳದ ಯುವತಿಯ ಅಣ್ಣ, ತಂಗಿಯ ಅಗಲಿಕೆಯ ನೋವಿನಿಂದ ಮಂಗಳೂರಿನ ಹೋಟೆಲ್ನಲ್ಲಿ ಸಾವಿಗೆ ಶರಣಾಗಿದ್ದಾರೆ. 24 ವರ್ಷದ ಅರ್ಜುನ್, ತೀವ್ರ ಖಿನ್ನತೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದೆ.
Karnataka News LiveViral News - ಹಣದಿಂದ ಸೌಕರ್ಯ ಕೊಳ್ಳಬಹುದು, ನೆನಪುಗಳನ್ನಲ್ಲ! 12 ರೂ., ಬಸ್ ಪಯಣದಲ್ಲಿ ದೊರೆತ, ಬೆಲೆ ಕಟ್ಟಲಾಗದ ಆ ದಿನಗಳು!
ಬೆಂಗಳೂರಿನಲ್ಲಿ ರ್ಯಾಪಿಡೋ ಬುಕ್ ಮಾಡಲು ವಿಫಲರಾದ ವ್ಯಕ್ತಿಯೊಬ್ಬರು, ಅನಿವಾರ್ಯವಾಗಿ ಬಿಎಂಟಿಸಿ ಬಸ್ ಹತ್ತುತ್ತಾರೆ. ಕೇವಲ 12 ರೂಪಾಯಿಯ ಈ ಪ್ರಯಾಣವು ಅವರನ್ನು ತಮ್ಮ ಶಾಲಾ-ಕಾಲೇಜು ದಿನಗಳ ನೆನಪಿನ ಲೋಕಕ್ಕೆ ಕರೆದೊಯ್ದ ಟ್ರಾವೆಲ್!
Karnataka News LiveKalaburagi - ಕೋಪದ ಕೈಗೆ ಬುದ್ಧಿ ಕೊಟ್ಟ ಗಂಡ - ಹೆಂಡತಿ ಮೇಲಿನ ಸಿಟ್ಟಿಗೆ ಪತ್ನಿ, ಮಕ್ಕಳಿದ್ದ ರೂಮ್ಗೆ ನುಗ್ಗಿ..
ಹೆಂಡತಿಯ ಶೀಲದ ಮೇಲೆ ಸದಾ ಅನುಮಾನ ಪಡುತ್ತಿದ್ದ ವ್ಯಕ್ತಿಯೊಬ್ಬ, ಜಿಲೆಟಿನ್ ಕಡ್ಡಿಗಳನ್ನು ಇಡೀ ಮೈಗೆ ಕಟ್ಟಿಕೊಂಡು ಮನೆಗೆ ನುಗ್ಗಿ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆ. ಈ ಭೀಕರ ದುರಂತದಲ್ಲಿ ಆತ ಹಾಗೂ ಆತನ 16 ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹೆಂಡತಿ, ಮಗ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜ್ಯವೇ ಬೆಚ್ಚಿ ಬೀಳಿಸುವ ಈ ಭಯಾನಕ ಘಟನೆಯ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Karnataka News Liveಹಸುಗಳಿಂದ ಬೆಂಗಳೂರಲ್ಲಿ ಭಾರೀ ಟ್ರಾಫಿಕ್ ಜಾಮ್ ಆರೋಪ - ಗೋವುಗಳ ಮಾಲೀನ ವಿರುದ್ಧ ಎಫ್ಐಆರ್..!
ಬೆಂಗಳೂರಲ್ಲಿ ಒಂದು ಅಪರೂಪದ ಪ್ರಕರಣ ದಾಖಲಾಗಿದೆ. ಟ್ರಾಫಿಕ್ ಜಾಮ್ ಮಾಡಿದ ಹಸುಗಳ ಮಾಲೀಕನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ..
Karnataka News LiveTamilnadu Politics - ಡಿಎಂಕೆ-ಬಿಜೆಪಿ ನಡುವೆ ಮೈತ್ರಿ? ದ್ರಾವಿಡ ಪಕ್ಷಕ್ಕೆ ನೇರ ಆಹ್ವಾನ ನೀಡಿತಾ ಕೇಸರಿ ಪಡೆ! ವೈರಲ್ ಆ ಒಂದು ಮಾತು!
ಡಿಎಂಕೆ ಮತ್ತು ಬಿಜೆಪಿ ಮೈತ್ರಿ ಕುರಿತಾದ ಚರ್ಚೆ ತೀವ್ರಗೊಂಡಿವೆ. ರಾಜಕೀಯದಲ್ಲಿ ಶಾಶ್ವತ ಶತ್ರು-ಮಿತ್ರರಿಲ್ಲ ಎಂಬ ಡಿಎಂಕೆ ನಾಯಕಿ ಕನಿಮೊಳಿ ಸೋಮು ಮತ್ತು ಬಿಜೆಪಿ ನಾಯಕಿ ವನತಿ ಶ್ರೀನಿವಾಸನ್ ಅವರ ಒಂದೇ ರೀತಿಯ ಹೇಳಿಕೆಗಳು ಈ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿವೆ.
Karnataka News LiveViral - 40ನೇ ವಯಸ್ಸಿನಲ್ಲಿ ಕೆಲಸ ಹೋಯ್ತು, ಆದ್ರೆ ವ್ಯಕ್ತಿ ಹೇಳಿದ್ದೇನು ಗೊತ್ತಾ? ಆ ಮಾತು ಈಗ ಫುಲ್ ವೈರಲ್!
40ನೇ ವಯಸ್ಸಿನಲ್ಲಿ 18 ವರ್ಷಗಳ ಕಾರ್ಪೊರೇಟ್ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬರು, ಇದನ್ನು ಜೀವನದ 'ರೀಸೆಟ್ ಬಟನ್' ಎಂದು ಪರಿಗಣಿಸಿದ್ದಾರೆ. ಈ ಅನಿರೀಕ್ಷಿತ ಲೇಆಫ್ ಅವರಿಗೆ ನಿಜವಾದ ಸ್ನೇಹ, ಹಣದ ಮೌಲ್ಯ ಮತ್ತು ಕಾರ್ಪೊರೇಟ್ ಭ್ರಮೆಯ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಕಲಿಸಿದೆ ಎಂದಿದ್ದಾರೆ. ಅಲ್ಲದೇ ಅವರ ಅನುಭವದ ಮಾತಿನ ವಿಡಿಯೋ ಈಗ ವೈರಲ್ ಆಗುತ್ತಿದೆ.
Karnataka News Live‘ದಾನ ನಾಶ ಮಾಡಿದರೆ ಅಪಾರ ಪಾಪ’ ಕ್ರಿ.ಶ 800 ರ ಅಪರೂಪದ ಶಾಸನ ಪತ್ತೆ - ಕರಾವಳಿ ಇತಿಹಾಸಕ್ಕೆ ಸಿಕ್ಕಿತು ಹೊಸ ಬೆಳಕು!
Karnataka News LiveInspiring Story - ಸೋಲೊಪ್ಪದ ಟೆಕ್ಕಿ - 36 ಇಂಟರ್ವ್ಯೂಗಳಲ್ಲಿ ರಿಜೆಕ್ಷನ್ ಅನುಭವಿಸಿದ ಬೆಂಗಳೂರಿನ ಯುವಕನಿಗೆ ಈಗ ₹30 ಲಕ್ಷದ ಪ್ಯಾಕೇಜ್!
ನನಗೆ ದೊಡ್ಡ ಸಂಬಳ ಸಿಕ್ಕಿಲ್ಲ, ಆದರೆ ಇಷ್ಟು ತಿಂಗಳುಗಳ ನಂತರ ನನ್ನ ಕುಟುಂಬಕ್ಕೆ ಆರ್ಥಿಕವಾಗಿ ಬೆಂಬಸಿಲು ಇದರಿಂದ ನನಗೆ ಸಾಧ್ಯವಾಗಿದೆ ಎಂದು ಯುವಕ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ.