- Home
- News
- State
- Karnataka News Live: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.40 ಕೋಟಿ ಲೂಟಿ - ಕಿಂಗ್ಪಿನ್ ರವೀಂದ್ರಕುಮಾರ್ ಅರೆಸ್ಟ್!
Karnataka News Live: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.40 ಕೋಟಿ ಲೂಟಿ - ಕಿಂಗ್ಪಿನ್ ರವೀಂದ್ರಕುಮಾರ್ ಅರೆಸ್ಟ್!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ಮಹತ್ವದ ಮಾತುಕತೆ ನಡೆಸಿದರು. ಸುಮಾರು ಒಂದೂಕಾಲು ಗಂಟೆ ನಡೆದ ಮಾತುಕತೆ ವೇಳೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಖಾಲಿ ಇರುವ ಸಚಿವ ಸ್ಥಾನ ತುಂಬುವುದು ಹಾಗೂ ಸಂಪುಟದಲ್ಲಿ ಬದಲಾವಣೆ ಮಾಡುವ ವಿಚಾರಗಳ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ ರಾಜ್ಯ ಸರ್ಕಾರದಲ್ಲಿ ಖಾಲಿಯಿರುವ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪಡೆಯಲುಲಾಬಿ ಮಾಡುವುದಕ್ಕೆ 10 ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ದೆಹಲಿಗೆ ದಾಂಗುಡಿ ಇಟ್ಟಿದ್ದಾರೆ. ತಮಗೆ ನಿಗಮ ಮಂಡಳಿಗಳನ್ನಾದರೂ ದಯಪಾಲಿಸುವಂತೆ ಹೈಕಮಾಂಡ್ ಮುಂದೆ ಮೊರೆಯಿಟ್ಟಿದ್ದಾರೆ. ಆದರೆ, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಕ್ಕೆ ವಾಪಸ್ ಬಂದಿದ್ದು, ಮುಂದೆ ಯಾವ ಬದಲಾವಣೆ ಆಗಲಿದೆ ನಿರೀಕ್ಷಿಸಲಾಗಿದೆ.
Karnataka News Liveಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.40 ಕೋಟಿ ಲೂಟಿ - ಕಿಂಗ್ಪಿನ್ ರವೀಂದ್ರಕುಮಾರ್ ಅರೆಸ್ಟ್!
Karnataka News Live6 ವರ್ಷಗಳ ಬಳಿಕ ಧಾರವಾಡಕ್ಕೆ ಶಾಸಕ ವಿನಯ್ ಕುಲಕರ್ಣಿ ಎಂಟ್ರಿ, ಆದ್ರೆ ಮೊದಲ ಆಯ್ಕೆ ಮನೆಯಲ್ಲ!
ಧಾರವಾಡ (ಆ.28): ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಕೊನೆಗೂ ರಿಲೀಫ್ ಸಿಕ್ಕಿದ್ದು, ಇಂದು (ದಿನಾಂಕ) ಅಧಿಕೃತವಾಗಿ ಧಾರವಾಡ ಜಿಲ್ಲೆಗೆ ಪ್ರವೇಶಿಸಿದ್ದಾರೆ. ಆದರೆ, ಧಾರವಾಡಕ್ಕೆ ಬಂದಿಳಿದ ತಕ್ಷಣ ಅವರು ತಮ್ಮ ಮನೆಗೆ ತೆರಳದೆ, ನೇರವಾಗಿ ದೇವರ ದರ್ಶನ ಹಾಗೂ ಮಠಾಧೀಶರ ಆಶೀರ್ವಾದ ಪಡೆಯಲು 'ಟೆಂಪಲ್ ರನ್' (Temple Run) ಆರಂಭಿಸಿದ್ದಾರೆ.
Karnataka News Liveಎಲ್ಲಾ ತ್ಯಾಗಕ್ಕೆ ನಾಗೇಂದ್ರ ಸಿದ್ಧ, ಆತ ಪಕ್ಷನಿಷ್ಠ ನಾಯಕ: ಡಿಕೆಶಿ
ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ವಾಲ್ಮೀಕಿ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಸುಮಾರು ಒಂದೂಕಾಲು ಗಂಟೆ ನಡೆದ ಮಾತುಕತೆ ವೇಳೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಖಾಲಿ ಇರುವ ಸಚಿವ ಸ್ಥಾನ ತುಂಬುವುದು ಹಾಗೂ ಸಂಪುಟದಲ್ಲಿ ಬದಲಾವಣೆ ಮಾಡುವ ವಿಚಾರಗಳ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಬಳಿಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೂ ಅವರು ಮಾತುಕತೆ ನಡೆಸಿದರು. ಈ ಮಧ್ಯೆ, ಸಚಿವ ನಾಗೇಂದ್ರ ಕೂಡ ದೆಹಲಿಗೆ ಆಗಮಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.