08:26 AM (IST) Aug 21

Karnataka News Liveಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುತಿಸಲಾದ 3 ಗ್ರಾಮಗಳ ಹೆಸರು ರಿವೀಲ್; ಚಿನ್ನದ ಭೂಮಿ ಎಲ್ಲಿದೆ? ನೋಡಿ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆ ನಿವಾರಿಸಲು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಹಾಗಾದರೆ, ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಬರಲಿದೆ? ಕನಕಪುರ, ನೆಲಮಂಗಲ ಬಳಿ ಗುರುತಿಸಲಾದ 3 ಸ್ಥಳಗಳ ಸಂಪೂರ್ಣ ಮಾಹಿತಿ ಮತ್ತು ಸರ್ಕಾರದ ಮುಂದಿನ ಯೋಜನೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

Read Full Story
07:27 AM (IST) Aug 21

Karnataka News Liveವಾಲ್ಮೀಕಿ ಹಗರಣದ ಕಿಂಗ್‌ಪಿನ್‌ ನೆಕ್ಕುಂಟಿ ನಾಗರಾಜ್ ಡಿಕೆಶಿ ಜತೆಗಿರುವ ಫೋಟೋ ಬಿಡುಗಡೆ ಮಾಡಿದ ಸಿಟಿ ರವಿ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಹಗರಣ(Valmiki corporation scam)ದ ಕಿಂಗ್‌ಪಿನ್ ನೆಕ್ಕುಂಟಿ ನಾಗರಾಜ್(Nekkunte Nagaraj) ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಜತೆಗಿದ್ದ ಫೋಟೋಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ.

ವಾಲ್ಮೀಕಿ ಹಗರಣದ ಕಿಂಗ್‌ಪಿನ್ ಜೊತೆ ಡಿಕೆಶಿ ಫೋಟೋ ವೈರಲ್

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ(CT Ravi) ಮತ್ತಿತರರು ನೆಕ್ಕುಂಟಿ ನಾಗರಾಜ್ ಅವರು ಡಿ.ಕೆ.ಶಿವಕುಮಾರ್, ನೂತನ ಸಚಿವ ಬಿ.ನಾಗೇಂದ್ರ(B Nagendra) ಅವರ ಜತೆಗಿರುವ ಫೋಟೋಗಳನ್ನು ಬಿಡುಗಡೆ ಮಾಡಿದರು.

Read Full Story
07:26 AM (IST) Aug 21

Karnataka News LiveKPSC ನೇಮಕಾತಿ ಅಕ್ರಮ ಮತ್ತು ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ!

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ಸುಮಾ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್, ಡಾ.ಮಂಜುನಾಥ್‌ ಸಲ್ಲಿಸಿರುವ ಅರ್ಜಿ ಮತ್ತು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ ರದ್ದು ಕೋರಿ ಲೋಕೇಶ್‌ ಸೇರಿ ಹಲವು ಯಶಸ್ವಿ ಅಭ್ಯರ್ಥಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿತು.

Read Full Story