08:33 AM (IST) Aug 10

Karnataka news liveವಿಜಯಪುರ ರೈತರಿಗೆ ಒಣದ್ರಾಕ್ಷಿ ಬಂಪರ್; ಆನ್‌ಲೈನ್ ಟ್ರೇಡಿಂಗ್ ಯಶಸ್ಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್!

ವಿಜಯಪುರದಲ್ಲಿ ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿದ್ದ ಒಣದ್ರಾಕ್ಷಿ ವಹಿವಾಟಿನಿಂದ ರೈತರಿಗೆ ಆಗುತ್ತಿದ್ದ ವಂಚನೆಗೆ ಕಡಿವಾಣ ಹಾಕಲು ಆನ್‌ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಆದ್ಯತೆ ನೀಡಲಾಗಿದೆ. ಇದರಿಂದ ₹5 ಕೋಟಿಯಿಂದ ₹12 ಕೋಟಿಗೆ ವಹಿವಾಟು ಏರಿಕೆಯಾಗಿದ್ದು, ರೈತರಿಗೆ ಉತ್ತಮ ಬೆಲೆ ಲಭ್ಯವಾಗಿದೆ.

Read Full Story
07:59 AM (IST) Aug 10

Karnataka news liveBallari - ನಾಗೇಂದ್ರ ರಾಜೀನಾಮೆ ಕೇಳೋರಿಗೆ ಮರ್ಯಾದೆ ಇದೆಯೇನ್ರಿ? - ಸಚಿವ ಖಂಡ್ರೆ

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಿರುದ್ಧ ಸಚಿವ ಈಶ್ವರ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ರಿಪಬ್ಲಿಕ್ ಆಫ್ ಬಳ್ಳಾರಿ' ಮಾಡಿ ಬಳ್ಳಾರಿಗೆ ಕುಖ್ಯಾತಿ ತಂದವರಿಗೆ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story
07:45 AM (IST) Aug 10

Karnataka news liveದೇಶದಲ್ಲಿ ಗಲಭೆಗೆ ಸಂಚು - ರಾಯಚೂರು ಯುವಕ ಸೆರೆ, ಕೊಲ್ಲಿ ವ್ಯಕ್ತಿ ಜೊತೆ ಇನ್‌ಸ್ಟಾಗ್ರಾಂನಲ್ಲಿ ಶಾಕಿಂಗ್ ಚರ್ಚೆ!

ರಾಯಚೂರಿನಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ ಮೊಹಮ್ಮದ್‌ ಶಾಹಿಲ್‌ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅರಬ್ ಮೂಲದ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಸಂಪರ್ಕದಲ್ಲಿದ್ದು, ದೇಶದಲ್ಲಿ ಗಲಭೆ ಸೃಷ್ಟಿಸಲು ಯೋಜನೆ ರೂಪಿಸುತ್ತಿದ್ದ ಆರೋಪ ಎದುರಿಸುತ್ತಿದ್ದಾನೆ.
Read Full Story
07:27 AM (IST) Aug 10

Karnataka news liveಬಿಡದಿ ಟೌನ್‌ಶಿಪ್: ಡಿಕೆಶಿಗೆ ದುರ್ಯೋಧನನ ಹಠ, ಇದರಿಂದ್ಲೇ ನಾಶ: ಅಶೋಕ್‌ ವಾಗ್ದಾಳಿ

ರಾಮನಗರ (ಆ.10) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರೇ ಬಿಡದಿ ಟೌನ್‌ಶಿಪ್‌(Bidadi Township) ಜಾರಿ ಮಾಡುವುದಾಗಿ ದುರ್ಯೋಧನನ ರೀತಿ ಹಠ ಮಾಡಬೇಡಿ. ಇಲ್ಲದಿದ್ದರೆ ದುರ್ಯೋಧನನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ಈ ಟೌನ್‌ಶಿಪ್ ವಿರುದ್ಧದ ಹೋರಾಟವೇ ಕಾಂಗ್ರೆಸ್ ಸರ್ಕಾರದ ಕೊನೆ ಮೊಳೆಯಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.

ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಪ್ರಾರಂಭವಾದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇದೊಂದು ದುಷ್ಟ ಸರ್ಕಾರ, ದುಷ್ಟ ಮುಖ್ಯಮಂತ್ರಿ. ಇವರ ವಿರುದ್ಧವೇ ಈ ಹೋರಾಟ ನಡೆಯುತ್ತಿದೆ ಎಂದರು.

ಬಿಡದಿ ಟೌನ್‌ಶಿಪ್ ಜಾರಿ ಮಾಡಿದರೆ ಉಳಿಗಾಲವಿಲ್ಲ:

ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್‌ ರಚಿಸಿದ್ದ ಸತ್ಯ ಶೋಧನಾ ಸಮತಿ ವರದಿಯಲ್ಲಿ ಈ ಯೋಜನೆ ಮಾಡಿದರೆ ಉಳಿಗಾಲ ಇಲ್ಲವೆಂದು ತಿಳಿಸಿದೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಆ ವರದಿಯನ್ನು ಬಹಿರಂಗ ಪಡಿಸಬೇಕು. ಇಲ್ಲದಿದ್ದರೆ ನಿಮ್ಮ ಯೋಗ್ಯತೆ ರಾಜ್ಯದ ಜನರ ಮುಂದೆ ಹರಾಜಾಗುತ್ತದೆ ಎಂದು ಎಚ್ಚರಿಸಿದರು.

Read Full Story