ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತ ಶಿಕ್ಷಕಿಯೊಬ್ಬರು ಹಠಾತ್ ನಿಧನರಾಗಿದ್ದಾರೆ. ಸಾವಿಗೂ ಮುನ್ನ ಬರೆದಿರುವ ನೋಟ್ ಇದೀಗ ಸಂಚಲನ ಮೂಡಿಸಿದೆ.
- Home
- News
- State
- State News Live: 'ಅಮ್ಮ ನನ್ನನ್ನು ಕ್ಷಮಿಸು..' ಪ್ರೀತಿಸಿ ಮದುವೆಯಾಗಿ ನಾಲ್ಕೇ ತಿಂಗಳಿಗೆ ದುರಂತ ಅಂತ್ಯಕಂಡ ಶಿಕ್ಷಕಿ..!
State News Live: 'ಅಮ್ಮ ನನ್ನನ್ನು ಕ್ಷಮಿಸು..' ಪ್ರೀತಿಸಿ ಮದುವೆಯಾಗಿ ನಾಲ್ಕೇ ತಿಂಗಳಿಗೆ ದುರಂತ ಅಂತ್ಯಕಂಡ ಶಿಕ್ಷಕಿ..!

ಬೆಂಗಳೂರು (ಜು.13): ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿಡಬ್ಲ್ಯುಸಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಂಗಳವಾರ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾನುವಾರ ತಡ ರಾತ್ರಿ ದೆಹಲಿಗೆ ಮರಳಲಿದ್ದಾರೆ. ಸಹಜವಾಗಿ ಸೋಮವಾರ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಹೈಕಮಾಂಡ್ ಒಪ್ಪಿದರೆ ಜುಲೈ 15ರ ಮೊದಲೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 13th July: 'ಅಮ್ಮ ನನ್ನನ್ನು ಕ್ಷಮಿಸು..' ಪ್ರೀತಿಸಿ ಮದುವೆಯಾಗಿ ನಾಲ್ಕೇ ತಿಂಗಳಿಗೆ ದುರಂತ ಅಂತ್ಯಕಂಡ ಶಿಕ್ಷಕಿ..!
Karnataka News Live 13th July: ಹೊಸನಗರ - ಪ್ರಿಯಕರನ ಜೊತೆಗೆ ಸುಖ ಬೇಕಿತ್ತು, ಮಗು ಬೇಡವಾಯ್ತು! ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಬಿಟ್ಟು ಹೋದ ಜನ್ಮದಾತೆ!
Karnataka News Live 13th July: ಹಾವೇರಿ ಬೆಳಗಾವಿ ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಚಿಂತನೆ, ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?
Karnataka News Live 13th July: Karnataka Cabinet expansion - ವಿದೇಶದಿಂದ ರಾಹುಲ್ ಗಾಂಧಿ ವಾಪಸ್; ಸಂಪುಟ ವಿಸ್ತರಣೆ ಚರ್ಚೆಗೆ ಡಿಕೆ, ಬಿಕೆ, ಸಿದ್ದು ನಾಳೆ ದಿಲ್ಲಿಗೆ?
ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಹಿಂತಿರುಗಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿ ಹಲವು ನಾಯಕರು ಹೈಕಮಾಂಡ್ ಅನುಮೋದನೆಗೆ ದೆಹಲಿಗೆ ತೆರಳಲು ಸಜ್ಜು, ಜುಲೈ 15ರೊಳಗೆ ವಿಸ್ತರಣೆ ನಡೆಯುವ ಸಾಧ್ಯತೆ
Karnataka News Live 13th July: ಮೈಸೂರಿನ ತಂತ್ರ ಅಸ್ಸಾಂನಲ್ಲೂ ಪ್ರಯೋಗ: ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡಿದ್ರೆ LED Screen ಮೇಲೆ ಪ್ರದರ್ಶನ!
ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ಮೈಸೂರಿನ ಕನ್ನಡಿ ತಂತ್ರದಂತೆ, ಅಸ್ಸಾಂನ ಟಿನ್ಸುಕಿಯಾ ಪುರಸಭೆಯು 'ಹಾಲ್ ಆಫ್ ಶೇಮ್' ಅಭಿಯಾನ ಆರಂಭಿಸಿದೆ. ಈ ಅಭಿಯಾನದಡಿ, ನಿಯಮ ಉಲ್ಲಂಘಿಸುವವರ ದೃಶ್ಯವನ್ನು ಸಿಸಿಟಿವಿಯಲ್ಲಿ ಸೆರೆಹಿಡಿದು, ಬೃಹತ್ ಎಲ್ಇಡಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
Karnataka News Live 13th July: Gadag saraswati temple vandalism: ಗದುಗಿನ ಐತಿಹಾಸಿಕ ಸರಸ್ವತಿ ದೇಗುಲದಲ್ಲಿ ದೇವಿ ಮೂರ್ತಿ ಭಗ್ನಗೊಳಿಸಿ ವಿಕೃತಿ
ಗದಗದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುರಾತನ ಸರಸ್ವತಿ ದೇವಿಯ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. 8ನೇ ಶತಮಾನಕ್ಕೆ ಸೇರಿದ ಈ ದೇವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ರಕ್ಷಣೆಯಲ್ಲಿದ್ದು, ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.
Karnataka News Live 13th July: 'ಸಣ್ಣ ಮೀನುಗಳನ್ನು ಹಿಡಿದರೆ ಪ್ರಯೋಜನವಿಲ್ಲ..' ಲೋಕಾಯುಕ್ತಕ್ಕೆ ಹೈಕೋರ್ಟ್ ಮಾರ್ಮಿಕ ಮಾತು, ಏನಿದು ಪ್ರಕರಣ?
ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತ ಸಂಸ್ಥೆ ತಪ್ಪು ಮಾಡಿದ ದೊಡ್ಡ ಮೀನುಗಳನ್ನು ಬಿಟ್ಟು, ಸಣ್ಣ ಮೀನುಗಳನ್ನು ಹಿಡಿದರೆ ಪ್ರಯೋಜನವಿಲ್ಲ ಎಂದಿರುವ ಹೈಕೋರ್ಟ್ ದೊಡ್ಡ ಮೀನುಗಳನ್ನು ಕೈಬಿಟ್ಟರೆ, ಸಣ್ಣ ಮೀನುಗಳು ನರಳುವುದಕ್ಕೆ ಹೈಕೋರ್ಟ್ ಅನುಮತಿಸುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದೆ.
Karnataka News Live 13th July: ಐದೇ ವರ್ಷದಲ್ಲಿ ಯಾದಗಿರಿಯ 16116 ಗರ್ಭಗಳೇ ನಾಪತ್ತೆ! - ಗರ್ಭ ಧರಿಸಿದ್ದವರಿಗೆ ಹೆರಿಗೆಯಾಯಿತೆ? ಗರ್ಭಪಾತವಾಯಿತೆ? ಲೆಕ್ಕವೇ ಇಲ್ಲ
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ನೋಂದಣಿಯಾದ 53,595 ಗರ್ಭಗಳಲ್ಲಿ 16,116 ಗರ್ಭಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಈ ನಾಪತ್ತೆಯಾದ ಗರ್ಭಗಳಲ್ಲಿ ಬಹುತೇಕವು ಅಕ್ರಮ ಲಿಂಗ ಪತ್ತೆ ನಂತರ ನಡೆದ ಹೆಣ್ಣು ಭ್ರೂಣ ಹತ್ಯೆಗೆ ಬಲಿಯಾಗಿವೆ ಎಂದು ಸರ್ಕಾರದ ತನಿಖಾ ವರದಿಯು ಬಹಿರಂಗಪಡಿಸಿದೆ.