02:14 PM (IST) Jul 02

Karnataka News Live 2nd July: 'ಬಾರೋ ಮಳೆರಾಯ..' ತನ್ನ ಎತ್ತಿನ ಮೇಲೆ ಬರೆದು ಮಳೆಗಾಗಿ ಪ್ರಾರ್ಥಿಸಿದ ಹೊಸಪೇಟೆ ರೈತ!

Baaro Maleraya.: ರಾಜ್ಯಾದ್ಯಂತ ಮಳೆ ಕೊರತೆ ಹಿನ್ನೆಲೆ ಕೃಷಿ ಚಟುವಟಿಕೆಗಳು ನಿಂತುಹೋಗಿವೆ. ರೈತರು ಆತಂಕಗೊಂಡಿದ್ದಾರೆ. ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹೊಸಪೇಟೆಯ ಮರಿಯಮ್ಮನಹಳ್ಳಿ ರೈತರು ಏನೆಲ್ಲ ಮಾಡುತ್ತಿದ್ದಾರೆ ನೋಡಿ.

Read Full Story
01:31 PM (IST) Jul 02

Karnataka News Live 2nd July: ಗದಗ - ಗೋಡಂಬಿ ಎಂದು ಔಡಲ ಕಾಯಿ ತಿಂದ 25ಕ್ಕೂ ಹೆಚ್ಚು ಶಾಲಾ ಮಕ್ಕಳು ತೀವ್ರ ಅಸ್ವಸ್ಥ!

ಗದಗ ತಾಲೂಕಿನ ಬೆಳಧಡಿ ತಾಂಡಾದಲ್ಲಿ, ಶಾಲಾ ಆಟದ ಸಮಯದಲ್ಲಿ ಗೋಡಂಬಿ ಬೀಜವೆಂದು ತಪ್ಪಾಗಿ ಭಾವಿಸಿ ವಿಷಕಾರಿ 'ಔಡಲ ಕಾಯಿ' ತಿಂದ ಪರಿಣಾಮ 25ಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ವಾಂತಿ, ಭೇದಿ, ತಲೆಸುತ್ತಿನಿಂದ ಬಳಲುತ್ತಿದ್ದ ಮಕ್ಕಳನ್ನು ತಕ್ಷಣವೇ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Full Story
01:30 PM (IST) Jul 02

Karnataka News Live 2nd July: Viabhav Sooryavanashi - ವೈಭವ್‌ಗಿಂತ ಜಾಸ್ತಿ‌ ಈ ಸ್ಟಾರ್ ಕ್ರಿಕೆಟರ್‌ಗೆ ಆಯ್ತಾ ಅನ್ಯಾಯ? ಉತ್ತರಿಸ್ತಾರಾ ಗಂಭೀರ್ ?

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ, ಕೋಚ್ ಗೌತಮ್ ಗಂಭೀರ್ ಅವರು ಅನುಭವಿ ಆ ಆಟಗಾರನ ಬದಲು ಬೇರೆಯವರನ್ನು ಬ್ಯಾಟಿಂಗ್‌ಗೆ ಕಳುಹಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು ಡ್ರೆಸ್ಸಿಂಗ್ ರೂಮ್‌ನಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read Full Story
01:14 PM (IST) Jul 02

Karnataka News Live 2nd July: Amruthadhaare Serial - ಇನ್ಫೋಸಿಸ್‌ ನಾರಾಯಣ್‌ ಮೂರ್ತಿ ರೀತಿ ಪತ್ನಿ ಬರಹಕ್ಕೆ ಬೆಂಬಲ ಕೊಟ್ಟ ಗೌತಮ್‌ ದಿವಾನ್

Amruthadhaare Kannada Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್‌ ದಿವಾನ್‌, ಭೂಮಿಕಾ ಕುರಿತಂತೆ ಕಥೆ ಸಾಗುತ್ತಿದೆ. ಈಗ ಇಬ್ಬರು ಮಕ್ಕಳ ಜೊತೆಗೆ ಈ ದಂಪತಿ ಖುಷಿಯಿಂದ ಜೀವನ ಮಾಡುತ್ತಿದೆ. ಆದರೆ ಮಕ್ಕಳು ಮಾಡಿದ ತರಲೆ ನಿಜಕ್ಕೂ ಭೂಮಿಕಾಗೆ ದೊಡ್ಡ ಸರ್ಪ್ರೈಸ್‌ ನೀಡಲಿದೆ.

Read Full Story
12:44 PM (IST) Jul 02

Karnataka News Live 2nd July: ಬೆಂಗಳೂರು ಕಲ್ಲು ಕ್ವಾರಿ ದುರಂತ - ಯಾದಗಿರಿಯ ಓರ್ವ ಸೇರಿ ಒಟ್ಟು 7 ಸಾವು, 10 ನಿಮಿಷ ತಡವಾಗಿದ್ರೆ ಎಲ್ಲರೂ ಉಳಿತಿದ್ರು ಆದ್ರೆ....!

ಬೆಂಗಳೂರಿನ ಮಾಗಡಿ ರಸ್ತೆಯ ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ಬಂಡೆ ಕುಸಿತದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದಾರೆ. ನಿಯಮ ಉಲ್ಲಂಘಿಸಿ ಬಫರ್ ಜೋನ್ ಒತ್ತುವರಿ ಮಾಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
Read Full Story
12:36 PM (IST) Jul 02

Karnataka News Live 2nd July: Bhagyavantaru Serial - ಅಪ್ಪನ ಆಸೆಯಂತೆ ಶ್ರೀಮಂತ ಮನೆಗೆ ಸೊಸೆಯಾದ ಜನನಿ; ಅಲ್ಲೇ ಇರೋದು ಟ್ವಿಸ್ಟ್!

Bhagyavantaru Serial: ಸನ್‌ ಉದಯ ವಾಹಿನಿಯು ಹೊಸ ಹೊಸ ಧಾರಾವಾಹಿಗಳನ್ನು ಪರಿಚಯಿಸುತ್ತಿದೆ. ಈಗ ‘ಭಾಗ್ಯವಂತರು’ ಎನ್ನುವ ಹೊಸ ಸೀರಿಯಲ್‌ ಪರಿಚಯಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

Read Full Story
12:36 PM (IST) Jul 02

Karnataka News Live 2nd July: Golden Star Ganesh Birthday - ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ; ಈ 'ಬೃಂದಾವಿಹಾರಿ' ಕೈನಲ್ಲಿ ಇಷ್ಟೊಂದು ಸಿನಿಮಾಗಳಿವೆ!

2024ರಲ್ಲಿ ಬಿಡುಗಡೆಯಾದ 'ಕೃಷ್ಣಂ ಪ್ರಣಯ ಸಖಿ' ಚಿತ್ರ ಸೂಪರ್ ಹಿಟ್ ಆಗುವ ಮೂಲಕ ನಟ ಗಣೇಶ್ ಮತ್ತೆ ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದಾರೆ. ಸದ್ಯ ನಟ ಗಣೇಶ್ ಅವರು ಹಲವು ಸಿನಿಮಾಗಳಿಗೆ ಸಹಿ ಮಾಡಿದ್ದು, ಕೆಲವು ಸಿನಿಮಾಗಳು ಶೂಟಿಂಗ್ ಹಂತದಲ್ಲಿದ್ದರೆ ಇನ್ನೂ ಕೆಲವು ಸಿನಿಮಾಗಳು ಪ್ರೊಡಕ್ಷನ್ ಹಂತದಲ್ಲಿವೆ.

Read Full Story
12:32 PM (IST) Jul 02

Karnataka News Live 2nd July: ಅತಿ ಹೆಚ್ಚು ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದು ಯಾರು? ಎಷ್ಟು ದಿನ ನಡೆದಿತ್ತು ಗೊತ್ತಾ ಆ ಹೋರಾಟ?

ಈ ಲೇಖನವು ಇತಿಹಾಸದಲ್ಲಿ ನಡೆದ ಅತಿ ದೀರ್ಘ ಉಪವಾಸ ಸತ್ಯಾಗ್ರಹದ ಬಗ್ಗೆ ವಿವರಿಸುತ್ತದೆ. ಅಲ್ಲದೆ, ಭಗತ್ ಸಿಂಗ್ ಅವರಂತಹ ಇತರ ಸ್ವಾತಂತ್ರ್ಯ ಹೋರಾಟಗಾರರ ಉಪವಾಸ ಸತ್ಯಾಗ್ರಹಗಳನ್ನೂ ಉಲ್ಲೇಖಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

Read Full Story
11:42 AM (IST) Jul 02

Karnataka News Live 2nd July: ರಾಜ್ಯ ಸರ್ಕಾರದ 'ಕೇಸ್ ವಾಪಸಿ' ನಿರ್ಧಾರಕ್ಕೆ ಹೈಕೋರ್ಟ್ ತಡೆ!; ಲಾಡ್ಲೆ ಮಶಾಕ್‌ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್‌ ರದ್ದು ತೀರ್ಮಾನಕ್ಕೆ ಬ್ರೇಕ್‌

ಆಳಂದ ಕೋಮು ಗಲಭೆ ಸೇರಿದಂತೆ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ಕ್ರಮದಲ್ಲಿ ಮೇಲ್ನೋಟಕ್ಕೆ ದೋಷಗಳಿವೆ ಎಂದಿದೆ.

Read Full Story
11:25 AM (IST) Jul 02

Karnataka News Live 2nd July: ಕಾರಿನಲ್ಲಿ ಎಸಿ ಹಾಕುವ ಮುನ್ನ ಇದನೊಮ್ಮೆ ಗಮನಿಸಿ! ಆ 'ಸೈಲೆಂಟ್ ಕಿಲ್ಲರ್' ಅಸಲಿಯತ್ತು ಏನು ಗೊತ್ತಾ?

ಗಾಜಿಯಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ನಿಲ್ಲಿಸಿದ ಕಾರಿನಲ್ಲಿ ಎಸಿ ಆನ್ ಮಾಡಿ ಮಲಗಿ ಸಾವನ್ನಪ್ಪಿದ್ದಾರೆ. ಆದೆರೆ ಆ ಸಾವಿನ ಹಿಂದೆ ಕಾರಿನ ಎಸಿಯೇ ಕಂಟಕವಾಯ್ತಾ? ಆದ್ದರಿಂದ ಎಸಿಹಾಕುವ ಮುನ್ನ ಈ ಸುದ್ದಿಯನ್ನು ಒಮ್ಮೆ ನೋಡಿ. 

Read Full Story
11:09 AM (IST) Jul 02

Karnataka News Live 2nd July: ಮುಖ್ಯಮಂತ್ರಿಗಳೇ, ಬಿಡದಿಗೊಂದು ನ್ಯಾಯ?, ಆಳಂದಗೊಂದು ನ್ಯಾಯ ಸರೀನಾ? ಸಿಎಂಗೆ ಆಳಂದ ರೈತರು ಬರೆದ ಪತ್ರದಲ್ಲೇನಿದೆ?

ಟೌನ್‌ಶಿಪ್ ಮಾಡಲು ಬಿಡದಿಯಲ್ಲಿ ರೈತರಿಗೆ ಎಕರೆಗೆ ₹2.07 ಕೋಟಿ ನೀಡುವಾಗ, ವಿಂಡ್ ಪವರ್ ಕಂಪನಿಗಳಿಗೆ ಜಮೀನು ನೀಡಿದ ಆಳಂದ ರೈತರಿಗೆ ಕೇವಲ ₹2-4 ಲಕ್ಷ ನೀಡುವುದು ತಾರತಮ್ಯ ಅಲ್ಲವೇ? ಮುಖ್ಯಮಂತ್ರಿಗಳೇ ಬಿಡದಿಗೊಂದು ನ್ಯಾಯ, ಆಳಂದ ರೈತರಿಗೊಂದು ನ್ಯಾಯವಾ? ಎಂದು ಬಿಜೆಪಿ ಮುಖಂಡ ಪ್ರಶ್ನಿಸಿದ್ದಾರೆ.

Read Full Story
10:42 AM (IST) Jul 02

Karnataka News Live 2nd July: ಹೆಸರಘಟ್ಟದ ದಿಬ್ಬೂರಿನಲ್ಲಿ ಮೈಸೂರು Wadiyar ಕಾಲದ ಶಾಸನ ಪತ್ತೆ; ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಡೀ ಗ್ರಾಮ ದಾನ

ಬೆಂಗಳೂರು ಉತ್ತರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ, ಮೈಸೂರು ಅರಸ ಇಮ್ಮಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯ ಕಾಲದ (ಕ್ರಿ.ಶ. 1750) ಅಪೂರ್ವ ಶಿಲಾಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ನಿರ್ವಹಣೆಗಾಗಿ ಗ್ರಾಮವನ್ನು ದಾನವಾಗಿ ನೀಡಿದ್ದನ್ನು ದಾಖಲಿಸಿದೆ.

Read Full Story
10:28 AM (IST) Jul 02

Karnataka News Live 2nd July: ‘ಪಾಕ್‌ ಜತೆ ರಹಸ್ಯ ಸಭೆ ನಡೆಸಲು ನಿಮಗೆ ಅಧಿಕಾರ ಕೊಟ್ಟವರ್‍ಯಾರು? ಬಿಜೆಪಿಯ ರಾಮ್‌ ಮಾಧವ್‌ಗೆ ಹರಿಪ್ರಸಾದ್‌ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, ಬಿಜೆಪಿ ಮುಖಂಡ ರಾಮ್ ಮಾಧವ್ ಅವರು ಪಾಕಿಸ್ತಾನದ ಐಎಸ್‌ಐ ಅಧಿಕಾರಿಗಳೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಾವುದೇ ಸಂವಿಧಾನಿ ಹುದ್ದೆಯಲ್ಲಿರದಿದ್ದರೂ ವಿದೇಶದಲ್ಲಿ ರಹಸ್ಯ ಸಭೆ ನಡೆಸಲು ಅಧಿಕಾರ ಕೊಟ್ಟವರ್ಯಾರು ಎಂದು ಕಿಡಿ.

Read Full Story
10:00 AM (IST) Jul 02

Karnataka News Live 2nd July: ಗೃಹಜ್ಯೋತಿ ಸ್ಕೀಂಗೆ ಜಾತಿ, ಪಾನ್‌ ಕಾರ್ಡ್‌ ಕೇಳೋದ್ರಲ್ಲಿ ತಪ್ಪೇನಿದೆ? - ಸಚಿವ ಜಾರ್ಜ್‌

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭವಾಗಿದೆ. ವಾಣಿಜ್ಯ ಉದ್ದೇಶಕ್ಕೆ ಬಳಕೆ ಸೇರಿದಂತೆ ಗೃಹಜ್ಯೋತಿ ಯೋಜನೆ ಕೆಲವರಿಂದ ದುರುಪಯೋಗ ಆಗುತ್ತಿದೆ ಹೀಗಾಗಿ ಪರಿಶೀಲನೆ ನಡೆಯುತ್ತಿದೆ. ಜಾತಿ ಪ್ರಮಾಣಪತ್ರ ಪಾನ್ ಕಾರ್ಡ್ ಕೇಳಿದ್ರೆ ತಪ್ಪೇನಿಲ್ಲ ಎಂದು ಸಚಿವ ಕೆಜೆ ಚಾರ್ಜ್ ಸಮರ್ಥಿಸಿಕೊಂಡರು.

Read Full Story
09:39 AM (IST) Jul 02

Karnataka News Live 2nd July: Darling Krishna Movie - 'ಲವ್‌ಬರ್ಡ್ಸ್‌' ಬಳಿಕ ಪಿಸಿ ಶೇಖರ್‌ ಜೊತೆ ಡಾರ್ಲಿಂಗ್‌ ಕೃಷ್ಣ ಹೊಸ ಸಿನಿಮಾ

Darling Krishna Movie: ನಟ ಡಾರ್ಲಿಂಗ್‌ ಕೃಷ್ಣ ಅವರ ಹೊಸ ಸಿನಿಮಾ ಸೆಟ್ಟೇರಿದೆ. ಈ ಬಾರಿ ಅವರು ನಿರ್ದೇಶಕ ಪಿಸಿ ಶೇಖರ್‌ ಜೊತೆ ಕೈಜೋಡಿಸಿದ್ದಾರೆ. “ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ "ಮಹಾನ್" ಸಿನಿಮಾ ನಿರ್ಮಾಪಕ ಪ್ರಕಾಶ್ ಬೂದೂರು, ಈಗ ಹೊಸ ಸಿನಿಮಾವನ್ನು ಆರಂಭಿಸಿದ್ದಾರೆ.

Read Full Story
09:36 AM (IST) Jul 02

Karnataka News Live 2nd July: ಯಶವಂತಪುರದಲ್ಲಿ ಕಲ್ಲು ಕ್ವಾರಿ ಬಂಡೆ ಸ್ಫೋಟ - 7 ಮಂದಿ ಅಮಾಯಕರು ಬಲಿ, ಹಲವರು ಗಂಭೀರ ಅಂದು ಚಿರತೆ ಇಂದು ಮನುಷ್ಯರು!

ಬೆಂಗಳೂರಿನ ಹೊರವಲಯದ ಚಿಕ್ಕನಹಳ್ಳಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಸ್ಫೋಟದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಸ್ಥಳದಲ್ಲಿ ಚಿರತೆ ಸಾವನ್ನಪ್ಪಿದಾಗಲೂ ಅಧಿಕಾರಿಗಳು ಕ್ರಮ ಕೈಗೊಳ್ಳದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story
09:20 AM (IST) Jul 02

Karnataka News Live 2nd July: America America 2 Movie - ಪೃಥ್ವಿ ಅಂಬಾರ್‌, ನಿರೂಪ್‌ ಭಂಡಾರಿ, ಶಾನ್ವಿ ಶ್ರೀವಾತ್ಸವ ಜೊತೆ 'ಅಮೆರಿಕ ಅಮೆರಿಕ 2'

America America 2 Movie: 90 ರ ದಶಕದಲ್ಲಿ ಭರ್ಜರಿ ಯಶಸ್ಸು ಕಂಡ ಚಿತ್ರ ‘ಅಮೇರಿಕಾ ಅಮೇರಿಕಾ’‌ ಸಿನಿಮಾಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಕರು. ಈಗ ಅದೇ ಶೀರ್ಷಿಕೆಯಲ್ಲಿ ‘ಅಮೇರಿಕಾ ಅಮೇರಿಕಾ 2’ ಎಂಬ ಚಿತ್ರ ನಿರ್ಮಾಣವಾಗಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರೇ ಇದನ್ನೂ ನಿರ್ದೇಶಿಸಿದ್ದಾರೆ. 

Read Full Story
08:05 AM (IST) Jul 02

Karnataka News Live 2nd July: 4850 ಕೋಟಿ ರಾಜಧನ ವಸೂಲಿಗೆ ಮುಂದಾದ ಸರ್ಕಾರ, ರಾಜ್ಯದಲ್ಲಿ ಜಲ್ಲಿಕಲ್ಲು, ಎಂ ಸ್ಯಾಂಡ್ ಸರಬರಾಜು ಬಂದ್‌?

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಡ್ರೋನ್ ಸಮೀಕ್ಷೆ ಆಧರಿಸಿ ವಿಧಿಸಿರುವ ₹4850 ಕೋಟಿ ರಾಜಧನ ದಂಡದ ವಿರುದ್ಧ ಕಲ್ಲು ಗಣಿ ಮತ್ತು ಸ್ಟೋನ್ ಕ್ರಶರ್ ಮಾಲೀಕರು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಮೀಕ್ಷೆ ಅವೈಜ್ಞಾನಿಕ ಎಂದು ಆರೋಪಿಸಿರುವ ಮಾಲೀಕರ ಒಕ್ಕೂಟ, ಬಂದ್‌ಗೆ ಕರೆ ನೀಡಲು ತೀರ್ಮಾನಿಸಿದೆ.

Read Full Story
07:53 AM (IST) Jul 02

Karnataka News Live 2nd July: ಯುವತಿ ಸ್ನಾನದ ದೃಶ್ಯ ರೆಕಾರ್ಡ್‌ ಆರೋಪ - ಕಾನೂನು ಪ್ರಕ್ರಿಯೆ ವಿರುದ್ಧ ಮಧ್ಯಂತರ ತಡೆ

ಪಕ್ಕದ ಮನೆಯ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ವಿಡಿಯೋ ಮಾಡಿದ ಆರೋಪ ಎದುರಿಸುತ್ತಿರುವ ಯುವಕನಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆರೋಪಿಯ ಮೊಬೈಲ್‌ನಲ್ಲಿ ಒಂದೇ ಒಂದು ಫೋಟೋ ಅಥವಾ ವಿಡಿಯೋ ಕಂಡುಬಂದರೂ ಅರ್ಜಿ ವಜಾಗೊಳಿಸುವುದಾಗಿ ನ್ಯಾಯಾಲಯ ಎಚ್ಚರಿಕೆ ನೀಡಿದೆ.

Read Full Story
07:53 AM (IST) Jul 02

Karnataka News Live 2nd July: 'ದೇವ್ರು ನಿಮ್ಗೆ ಒಳ್ಳೇದು ಮಾಡೋಲ್ಲ..' - ಬೊಲೆರೋದಲ್ಲಿ ಬಂದು ದೇವರಿಗೆ ಬಿಟ್ಟಿದ್ದ ಗೂಳಿ ಕದ್ದೊಯ್ದ ಖದೀಮರು!

ಚನ್ನಗಿರಿ ತಾಲೂಕಿನ ಸಂಗಾಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ್ದ 'ಕರಿಬಸವ' ಎಂಬ ಪವಿತ್ರ ಗೂಳಿಯನ್ನು ದುಷ್ಕರ್ಮಿಗಳು ಬೊಲೆರೋ ವಾಹನದಲ್ಲಿ ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಗೂಳಿ ರಕ್ಷಿಸುವಂತೆ ಆಗ್ರಹಿಸಿದ್ದಾರೆ.

Read Full Story