ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಕಾಂಗ್ರೆಸ್ ಘಟಕವೇ ತಿರುಗಿಬಿದ್ದಿದೆ. ತಮಿಳುನಾಡಿನ ಅನುಮತಿಯಿಲ್ಲದೆ ಒಂದೇ ಒಂದು ಇಟ್ಟಿಗೆಯನ್ನೂ ಹಾಕಲು ಬಿಡುವುದಿಲ್ಲವೆಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಯಂ ಟ್ಯಾಗೋರ್ ಎಚ್ಚರಿಕೆ ನೀಡಿದ್ದಾರೆ.
- Home
- News
- State
- State News Live: Mekedatu project - '1 ಇಟ್ಟಿಗೆ ಹಾಕಲೂ ಬಿಡೋಲ್ಲ..' ಮೇಕೆದಾಟು ಯೋಜನೆ, ಕರ್ನಾಟಕ ಸರ್ಕಾರಕ್ಕೆ ತಮಿಳ ನಾಡು ಕಾಂಗ್ರೆಸ್ ಎಚ್ಚರಿಕೆ!
State News Live: Mekedatu project - '1 ಇಟ್ಟಿಗೆ ಹಾಕಲೂ ಬಿಡೋಲ್ಲ..' ಮೇಕೆದಾಟು ಯೋಜನೆ, ಕರ್ನಾಟಕ ಸರ್ಕಾರಕ್ಕೆ ತಮಿಳ ನಾಡು ಕಾಂಗ್ರೆಸ್ ಎಚ್ಚರಿಕೆ!

ಬೆಂಗಳೂರು (ಜು.3): 'ತೀವ್ರ ಜಲಕ್ಷಾಮದ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀರು, ವಿದ್ಯುತ್ ಅಭಾವ ಸೃಷ್ಟಿಯಾಗಲಿದೆ. ರಾಜ್ಯಾದ್ಯಂತ ಬಹುತೇಕ ಜಲಾಶಯಗಳ ಒಳಹರಿವು ಶೂನ್ಯಕ್ಕೆ ಇಳಿದಿದ್ದು, ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ' ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಎಲ್ನಿನೊ ಪರಿ ಣಾಮದಿಂದ ಉಂಟಾಗಲಿರುವ ಬರದ ಸ್ಥಿತಿ ಹಾಗೂ ಪರಿಣಾಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 3rd July: Mekedatu project - '1 ಇಟ್ಟಿಗೆ ಹಾಕಲೂ ಬಿಡೋಲ್ಲ..' ಮೇಕೆದಾಟು ಯೋಜನೆ, ಕರ್ನಾಟಕ ಸರ್ಕಾರಕ್ಕೆ ತಮಿಳ ನಾಡು ಕಾಂಗ್ರೆಸ್ ಎಚ್ಚರಿಕೆ!
Karnataka News Live 3rd July: ಮಂಡ್ಯ - ನಡುರಸ್ತೆಯಲ್ಲೇ ಲಾರಿ ಚಾಲಕನ ಮೇಲೆ ಪ್ರಭಾವಿಯ ಪುತ್ರ ಮತ್ತು ಗ್ಯಾಂಗ್ನಿಂದ ಗುಂಡಿನ ದಾಳಿ, ದರೋಡೆ ಯತ್ನ!
Karnataka News Live 3rd July: ಸಂಪುಟ ವಿಸ್ತರಣೆ - 5ಕ್ಕೆ ಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ದೆಹಲಿಗೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜು.5ರಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದ ನಂತರ, ಜು.10 ರಿಂದ 12ರೊಳಗೆ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಿದೆ.
Karnataka News Live 3rd July: ರಾಜ್ಯದ ಎಲ್ಲ ಶಾಲಾ ಆಡಳಿತ ಮಂಡಳಿವರೇ ಗಮನಿಸಿ - ಮಗುವಿನ ರಕ್ಷಣೆ ಯಾರದ್ದು? ಹೈಕೋರ್ಟ್ ಮಹತ್ವದ ಅಭಿಪ್ರಾಯ! ಏನಿದು ಪ್ರಕರಣ?
ಶಾಲಾ ಬಸ್ನಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ, ಮಗು ಬಸ್ ಹತ್ತಿದಾಗಿನಿಂದ ಮನೆಗೆ ಸುರಕ್ಷಿತವಾಗಿ ತಲುಪುವವರೆಗೂ ಶಾಲಾ ಆಡಳಿತ ಮಂಡಳಿಯೇ ಜವಾಬ್ದಾರಿ ಎಂದು ಕೋರ್ಟ್ ಸ್ಪಷ್ಟಪನೆ. ಮದ್ದೂರಿನ ದಿವ್ಯಜ್ಯೋತಿ ಶಾಲೆ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
Karnataka News Live 3rd July: ಡ್ಯಾಂ ತುಂಬುವವರೆಗೆ ಯಾವ ರೈತರೂ ಬೆಳೆಹಾಕಲೇಬೇಡಿ - ರಾಜ್ಯದ ರೈತರಿಗೆ ಸಿಎಂ ಕಿವಿಮಾತು
ಜೂನ್ ತಿಂಗಳು ಕಳೆದರೂ ಈ ಬಾರಿ ರಾಜ್ಯಾದ್ಯಂತ ಮಳೆ ಕೊರತೆ ಹಿನ್ನೆಲೆ ಕೃಷಿ ಚಟುವಟಿಕೆ ಇಲ್ಲದೆ ರೈತರು ಆತಂಕದಲ್ಲಿದ್ದಾರೆ. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದ 'ಡ್ಯಾಂ ತುಂಬುವವರೆಗೆ ಯಾವ ರೈತರೂ ಬೆಳೆಹಾಕಲೇಬೇಬಾರದು ಎಂದು ರಾಜ್ಯದ ರೈತರಿಗೆ ಸಿಎಂ ಕಿವಿಮಾತು ಹೇಳಿದ್ದಾರೆ.
Karnataka News Live 3rd July: ವಿಶೇಷ ಚೇತನರಿಗೆ ಬಂಪರ್ ಕೊಡುಗೆ: KIADB ಸೈಟ್ ದರದಲ್ಲಿ 20 ಲಕ್ಷವರೆಗೆ ರಿಯಾಯ್ತಿ! ಸಿಎಂ ಡಿಕೆ ಶಿವಕುಮಾರ್ ಮಹತ್ವ ನಿರ್ಧಾರ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಐಎಡಿಬಿ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿ ಅಂಗವಿಕಲರಿಗೆ ಭೂಮಿ ಮೌಲ್ಯದ ಶೇ.10 ಅಥವಾ ಗರಿಷ್ಠ 20 ಲಕ್ಷ ರೂ. ರಿಯಾಯಿತಿ ನೀಡಲು ಅನುಮೋದನೆ ನೀಡಲಾಗಿದೆ.
Karnataka News Live 3rd July: ಭೂ ವ್ಯಾಜ್ಯದ ಠೇವಣಿ ಹಣ ಬಿಡುಗಡೆಗೆ ಲಂಚ; ಕೇಂದ್ರ ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ, ಬಂಧನ ವೇಳೆ ಹೈಡ್ರಾಮ!
ಭೂ ವ್ಯಾಜ್ಯ ಪ್ರಕರಣದ ಠೇವಣಿ ಹಣ ಬಿಡುಗಡೆ ಮಾಡಲು ₹13 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮಹಾಲೆಕ್ಕ ಪರಿಶೋಧಕ ಕಚೇರಿಯ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇದು ಕೇಂದ್ರ ಸರ್ಕಾರಿ ಕಚೇರಿಯಲ್ಲೇ ಸಿಬ್ಬಂದಿಯನ್ನು ಲೋಕಾಯುಕ್ತರು ಬಂಧಿಸಿದ ಮೊದಲ ಪ್ರಕರಣವಾಗಿದೆ.
Karnataka News Live 3rd July: Prajaseve: ಇನ್ನು ಕಚೇರಿ ಸುತ್ತಾಟ ಬೇಡ, ಮನೆ ಬಾಗಿಲಿಗೇ ಬರಲಿದ್ದಾರೆ ಸಚಿವರು, ಡಿಕೆಶಿ ಸರ್ಕಾರ ಹೊಸ 'ಪ್ರಜಾಸೇವೆ' ಆರಂಭ! ಯಾವಾಗ ಬರ್ತಾರೆ?
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 'ಪ್ರಜಾಸೇವೆ' ಅಭಿಯಾನದ ಅಡಿಯಲ್ಲಿ, ಜಿಲ್ಲಾ ಸಚಿವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರವೇ ಅವರ ಮನೆ ಬಾಗಿಲಿಗೆ ಹೋಗುವ ಈ ಯೋಜನೆಗಾಗಿ ಪ್ರತ್ಯೇಕ ಸಚಿವಾಲ ಸಹ ರಚಿಸಿದೆ