08:23 AM (IST) Apr 10

Karnataka news live:ಇರಾನ್ ಇಸ್ರೇಲ್ ಯುದ್ಧದಿಂದಾಗಿ ಔಷಧೀಯ ಡ್ರಗ್ಸ್‌ ಬರುವುದು ತಡವಾಗ್ತಿದೆ - ಆರೋಗ್ಯ ಸಚಿವ

ಇರಾನ್‌-ಇಸ್ರೇಲ್‌ ಯುದ್ಧದಿಂದಾಗಿ ಔಷಧ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಪೂರೈಕೆ ತಡವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಔಷಧಗಳ ಕೊರತೆ ಬೆಲೆ ಏರಿಕೆ ಸಾಧ್ಯತೆಯಿದ್ದು, ಇದರ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.

Read Full Story
08:11 AM (IST) Apr 10

Karnataka news live:PUC results 2026 - ಜಿಬಿಎ ಪಿಯು ಕಾಲೇಜುಗಳಲ್ಲಿ ಶೆ.74 ಪಿಯು ಫಲಿತಾಂಶ!

PUC results 2026 ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪದವಿ ಪೂರ್ವ ಕಾಲೇಜುಗಳು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.16 ರಷ್ಟು ಫಲಿತಾಂಶ ದಾಖಲಿಸಿದ್ದು, ಕಳೆದ ವರ್ಷಕ್ಕಿಂತ ಶೇ.4ರಷ್ಟು ಸುಧಾರಣೆ ಕಂಡಿವೆ. 

Read Full Story
07:59 AM (IST) Apr 10

Karnataka news live:ಬಾಗಲಕೋಟೆ, ದಾವಣಗೆರೆ ಶೇ.68.43ರಷ್ಟು ಮತದಾನ - ಟಗರಿನೊಂದಿಗೆ ಬಂದ ಕೈ ಅಭ್ಯರ್ಥಿ, ಹಣ ಹಂಚಿಕೆ ವಿಡಿಯೋ ವೈರಲ್

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೇ.68ಕ್ಕೂ ಹೆಚ್ಚು ಮತದಾನವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಟಗರಿನೊಂದಿಗೆ ಬಂದು ಮತ ಚಲಾಯಿಸಿದ್ದು, ಹಣ ಹಂಚಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.
Read Full Story
07:27 AM (IST) Apr 10

Karnataka news live:ಪ್ರತ್ಯೇಕವಾಗಿ ವಾಸವಿದ್ದ ಪತ್ನಿಯ ಮೇಲೆ ಬಲವಂತದ ಸಂಭೋಗ, ಕಾನೂನು ಸಂಕಷ್ಟಕ್ಕೆ ಸಿಲುಕಿದ ಪತಿ! ಏನಿದು ಪ್ರಕರಣ?

ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲವಂತದ ಸಂಭೋಗ ನಡೆಸಿದ ಆರೋಪ ಎದುರಿಸುತ್ತಿರುವ ಪತಿಯ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರತ್ಯೇಕಗೊಂಡ ಪತ್ನಿಯೊಂದಿಗೆ ಬಲವಂತದ ಸಂಭೋಗವು ಐಪಿಸಿ 376(ಬಿ) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Read Full Story