06:32 AM (IST) Sep 06

Karnataka News Live 6th September: ಹುಬ್ಬಳ್ಳಿ ಗಣೇಶೋತ್ಸವ: ಫ್ಲೈಓವರ್ ದಾಟಲಿವೆಯೇ ಬೃಹತ್ ಗಣಪತಿಗಳು? ಪರ‍್ಯಾಯ ಮಾರ್ಗ

ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್, ಗಣೇಶ ವಿಸರ್ಜನಾ ಮೆರವಣಿಗೆಗೆ ಅಡ್ಡಿಯಾಗುವುದಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸ್ಪಷ್ಟಪಡಿಸಿದ್ದಾರೆ. 18 ಅಡಿ ಎತ್ತರದವರೆಗಿನ ಗಣಪತಿಗಳು ಹಳೆಯ ಮಾರ್ಗದಲ್ಲೇ ಸಾಗಲಿದ್ದು, ಅದಕ್ಕಿಂತ ಎತ್ತರದ ನಾಲ್ಕು ಬೃಹತ್ ಗಣಪತಿಗಳಿಗೆ ಪರ್ಯಾಯ ಮಾರ್ಗವನ್ನು ಕಲ್ಪಿಸಲಾಗಿದೆ.

Read Full Story
06:32 AM (IST) Sep 06

Karnataka News Live 6th September: ನಗರದ ಶೇ.30 ಪೌರಕಾರ್ಮಿಕರು ಕೆಲಸಕ್ಕೆ ಚಕ್ಕರ್‌, ಮೂರು ಬಾರಿ ನೋಟಿಸ್‌ ಬಳಿಕ ವಜಾ: ಕೃಷ್ಣ ಬೈರೇಗೌಡ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಸಮರ್ಪಕವಾಗಿ ಕರ್ತವ್ಯಕ್ಕೆ ಹಾಜರಾಗದ ಪೌರ ಕಾರ್ಮಿಕರನ್ನು ವಜಾಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Read Full Story
06:29 AM (IST) Sep 06

Karnataka News Live 6th September: Dr ಹಾಗೂ Profಗೆ ಇದೀಗ Tr ಹೊಸ ಸೇರ್ಪಡೆ, ರಾಜ್ಯದ ಶಿಕ್ಷಕರಿಗೆ ಇನ್ನು Tr ವಿಶೇಷಣದ ಗೌರವ

ಕೂಡ್ಲಿಗಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆಯೂ 'Tr' (ಟೀಚರ್) ಎಂದು ಸೇರಿಸಿ ಗೌರವಿಸುವ ಹೊಸ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

Read Full Story
06:29 AM (IST) Sep 06

Karnataka News Live 6th September: ಹೆಲಿಕಾಪ್ಟರಲ್ಲಿ ಬರ ವೀಕ್ಷಣೆ ಎಷ್ಟು ಸರಿ?: ವಿಜಯೇಂದ್ರ ಕಿಡಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ 'ಬಳ್ಳಾರಿ ಚಲೋ' ಪಾದಯಾತ್ರೆಯು ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿದ್ದಾರೆ. ತಮ್ಮ ಹೋರಾಟದಿಂದಾಗಿಯೇ ಸರ್ಕಾರ ಎಚ್ಚೆತ್ತುಕೊಂಡಿದೆ ಎಂದಿದ್ದಾರೆ.

Read Full Story
06:29 AM (IST) Sep 06

Karnataka News Live 6th September: ನೌಕರರಿಗೆ ಸಿಹಿ ಸುದ್ದಿ, ಶೀಘ್ರವೇ ರಾಜ್ಯ ಸರ್ಕಾರದಿಂದ ಒಪಿಎಸ್‌ ಜಾರಿ

ಶಿಕ್ಷಕರು ಮತ್ತು ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೇ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.

Read Full Story