ಶಾಲಾ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮತ್ತು ಎನ್ಎಸ್ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಪದ್ಧತಿ ಕೈಬಿಟ್ಟು ಗ್ರೇಡ್ ನೀಡುವ ಕರಡು ಅಧಿಸೂಚನೆ ಹೊರಡಿಸಿದೆ. 2025-26ನೇ ಸಾಲಿನಿಂದ ಜಾರಿಗೆ ಬರಲಿರುವ ಈ ನಿಯಮದಂತೆ, ಒಟ್ಟು ಫಲಿತಾಂಶ 525 ಅಂಕಗಳಿಗೆ ಸೀಮಿತಗೊಳಿಸಲಾಗುವುದು
- Home
- News
- State
- State News Live: SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್ಎಸ್ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ
State News Live: SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್ಎಸ್ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ

ಬೆಂಗಳೂರು (ಏ.11): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಬಳಿಕ ಎಲ್ಲರ ಗಮನವೀಗ ಲೋಕಲ್ ಸಮರದತ್ತ ನೆಟ್ಟಿದೆ. ಪಂಚಾಯತಿ ಹಾಗೂ ನಗರ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪತ್ರ ಬಳಕೆ ಮಾಡುವ ಬಿಲ್ ಮಾತ್ರ ಇನ್ನೂ ಪರಿಶೀಲನೆಯಲ್ಲಿದೆ. ಇವಿಎಂ ಬದಲು ಮತಪತ್ರ ಬಳಸಲು ಬಿಲ್ ಅನ್ನು ರಾಜ್ಯ ಸರ್ಕಾರ ಅಂಗೀಕರಿಸಿತ್ತು. ಆದರೆ, ಈ ವಿಧೇಯಕ ಇನ್ನೂ ರಾಜ್ಯಪಾಲರ ಬಳಿಯೇ ಬಾಕಿ ಉಳಿದಿದೆ. ಈ ಬಿಲ್ ಹೊರತುಪಡಿಸಿ ಉಳಿದ 10 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 11th April: SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್ಎಸ್ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ
Karnataka News Live 11th April: ದಾವಣಗೆರೇಲಿ ನಮ್ಮವರಿಂದಲೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಷಡ್ಯಂತ್ರ - ಸಲೀಂ ಅಹ್ಮದ್ ಸ್ಫೋಟಕ ಹೇಳಿಕೆ
ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಪಕ್ಷದ ಕೆಲವು ಮುಖಂಡರೇ ಷಡ್ಯಂತ್ರ ನಡೆಸಿದ್ದಾರೆ ಎಂದು ಸಲೀಂ ಅಹಮದ್ ಗಂಭೀರ ಆರೋಪ ಮಾಡಿದ್ದಾರೆ. ಈ ಪಿತೂರಿಯ ನಡುವೆಯೂ, ಅಲ್ಪಸಂಖ್ಯಾತರ ಮತಗಳಿಂದ ಕಾಂಗ್ರೆಸ್ ಭಾರಿ ಬಹುಮತದಿಂದ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Karnataka News Live 11th April: ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡುವ ಹಾಗಿಲ್ಲ, ಸಿಎಂ ಸೂಚನೆ
ಗೃಹಲಕ್ಷ್ಮೀ ಯೋಜನೆಯ ಸಹಾಯಧನವನ್ನು ಖಾಸಗಿ ಫೈನಾನ್ಸ್ ಸಂಸ್ಥೆಗಳು ಹಳೇ ಸಾಲದ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಅವರು ದೂರು ಸಲ್ಲಿಸಿದ್ದರು.
Karnataka News Live 11th April: ಗರ್ಭಿಣಿ ಹೊಟ್ಟೆಗೆ ಒದ್ದ ಸಾಲ ವಸೂಲಿಗಾರರು - ಅವಧಿಪೂರ್ವ ಹೆರಿಗೆಯಾಗಿ ಅವಳಿ ಮಕ್ಕಳು ಸಾವು
Karnataka News Live 11th April: Dinesh Gundu Rao - ಚುನಾವಣೆ ಫಲಿತಾಂಶಕ್ಕೂ ನಾಯಕತ್ವಕ್ಕೂ ಸಂಬಂಧ ಇಲ್ಲ - ದಿನೇಶ್ ಗುಂಡೂರಾವ್
Karnataka News Live 11th April: 2nd PUC exam result: ತಾಯಿ ಮಗಳು ಒಟ್ಟಿಗೇ ಪಿಯು ಪರೀಕ್ಷೇಲಿ ಪಾಸ್ | ತುಮಕೂರಲ್ಲಿ ಕಟ್ಟಡ ಕಾರ್ಮಿಕನ ಮಗ ರಾಜ್ಯಕ್ಕೆ 3ನೇ ರ್ಯಾಂಕ್!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ, ತಾಯಿ ನೇತ್ರಾವತಿ ಮತ್ತು ಮಗಳು ಹೇಮಶ್ರೀ ಏಕಕಾಲದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಲಿ ಉತ್ತೀರ್ಣರಾಗುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಮಗಳು ಹೇಮಶ್ರೀ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದರೆ, ತಾಯಿ ಕೂಡ ತೇರ್ಗಡೆಯಾಗಿ ಸ್ಪೂರ್ತಿಯಾಗಿದ್ದಾರೆ.
Karnataka News Live 11th April: JDS Mega convention: ಜಿಬಿಎ ಚುನಾವಣೆಗೆ ಜೆಡಿಎಸ್ ಸಜ್ಜು! ಇಂದು ಜೆಡಿಎಸ್ ಬೃಹತ್ ಸಮಾವೇಶ
ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಿದ್ಧತೆ ನಡೆಸಲು ಜೆಡಿಎಸ್ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
Karnataka News Live 11th April: HD Kumaraswamy: ನನ್ನ ಮಗ ಸೇವೆಗೆ, ಸಿಎಂ ಮಗ ವಸೂಲಿಗೆ: ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿಗಾಗಿ ನೇಮಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮಗ ನಿಖಿಲ್ ಜನರ ಅಪೇಕ್ಷೆಯಂತೆ ರಾಜಕೀಯಕ್ಕೆ ಬಂದಿದ್ದಾನೆ ಎಂದ ಅವರು, ಸಿದ್ದರಾಮಯ್ಯ ರಾಜಕೀಯ ತೊರೆಯಲು ಮುಂದಾಗಿದ್ದ ಹಳೆಯ ಘಟನೆಯನ್ನು ನೆನಪಿಸಿಕೊಂಡರು.
Karnataka News Live 11th April: PUC Results 2026: ಮಗನ ಜೊತೆಗೆ ಪರೀಕ್ಷೆ ಬರೆದ 57ರ ತಂದೆ ಸಹ ಪಿಯುಸಿ ಪಾಸ್!
57 ವರ್ಷದ ಫೈನಾನ್ಶಿಯರ್ ಮೋಹನ್ ರಾಜ್ ಅವರು ತಮ್ಮ ಪಿಯು ಶಿಕ್ಷಣ ಪೂರ್ಣಗೊಳಿಸದ ಕೊರಗನ್ನು ನೀಗಿಸಿಕೊಂಡಿದ್ದಾರೆ. ತಮ್ಮ ಕಿರಿಯ ಮಗನ ಜೊತೆ ಪರೀಕ್ಷೆ ಬರೆದು, ಕಲಾ ವಿಭಾಗದಲ್ಲಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರ ಮಗ ವಾಣಿಜ್ಯ ವಿಭಾಗದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾನೆ.
Karnataka News Live 11th April: Ballot paper bill: ಲೋಕಲ್ ಸಮರಕ್ಕೆ ಬ್ಯಾಲೆಟ್ ಪತ್ರ ಬಳಕೆ ವಿಧೇಯಕ ರಾಜ್ಯಪಾಲರ ಬಳಿಯೇ ಬಾಕಿ!
ಬಜೆಟ್ ಅಧಿವೇಶನದಲ್ಲಿ ಮಂಡನೆಯಾದ 11 ವಿಧೇಯಕಗಳ ಪೈಕಿ, ಮರ್ಯಾದೆಗೇಡು ಹತ್ಯೆ ತಡೆಯುವ 'ಇವ ನಮ್ಮವ' ವಿಧೇಯಕ ಸೇರಿದಂತೆ ಹತ್ತು ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವ ತಿದ್ದುಪಡಿ ವಿಧೇಯಕ ತಡೆ ಹಿಡಿದಿದ್ದಾರೆ.