10:35 PM (IST) May 02

Karnataka News Live 2nd May: ಭಾಗ್ಯಲಕ್ಷ್ಮೀ ಧಾರಾವಾಹಿ ತನ್ಮಯ್‌ಗೆ ಒಲಿದ 'ಅದೃಷ್ಟಲಕ್ಷ್ಮೀ'; ಶೋಮ್ಯಾನ್‌ ಕಣ್ಣಿಗೆ ಬಿದ್ದ ನಿಹಾರ್‌ ಗೌಡ

Bhagyalakshmi Kannada Serial Episode Update: 'ಭಾಗ್ಯಲಕ್ಷ್ಮೀ' ಧಾರಾವಾಹಿಯಲ್ಲಿ ಪಟ ಪಟ ಅಂತ ಮಾತನಾಡುತ್ತ, ಸದಾ ತಾಯಿಗೆ ಸಪೋರ್ಟ್‌ ಮಾಡುತ್ತ ತನ್ಮಯ್ ಪಾತ್ರ ಈಗಾಗಲೇ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಈ ಪಾತ್ರದಲ್ಲಿ ನಿಹಾರ್ ಗೌಡ ನಟಿಸುತ್ತಿದ್ದಾರೆ. ಇನ್ನೊಂದು ಅವಕಾಶ ಸಿಕ್ಕಿದೆ.

Read Full Story
10:01 PM (IST) May 02

Karnataka News Live 2nd May: Karnataka Rains - ರಾಜ್ಯದಲ್ಲಿ ಮುಂದಿನ ಮೂರು ದಿನ ಎಲ್ಲೆಲ್ಲಿ ಮಳೆ ಆರ್ಭಟ - ಇಲ್ಲಿದೆ ಮಾಹಿತಿ

ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗುಂಡ್ಲುಪೇಟೆಯಲ್ಲಿ ಈಗಾಗಲೇ ಮಳೆಯಿಂದಾಗಿ ಬಾಳೆ ಬೆಳೆಗಾರರಿಗೆ ಅಪಾರ ನಷ್ಟವಾಗಿದೆ.
Read Full Story
09:53 PM (IST) May 02

Karnataka News Live 2nd May: Karwar - ಪತ್ನಿ ಮದ್ಯ ತಂದುಕೊಡದ್ದಕ್ಕೆ ಮನನೊಂದು ಆಟೋ ಚಾಲಕ ನೇಣಿಗೆ ಶರಣು

ಮದ್ಯಪಾನದ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದ ನಡುವೆಯೂ ಪತ್ನಿ ಮದ್ಯ ತಂದುಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆ*ತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತಾಲೂಕಿನ ಕದ್ರಾದಲ್ಲಿ ಸಂಭವಿಸಿದೆ.

Read Full Story
09:25 PM (IST) May 02

Karnataka News Live 2nd May: ಮೇ.15ಕ್ಕೆ ಸಿಎಂ ಬದಲಾವಣೆ? ಚರ್ಚೆಗೆ ಪ್ರತಿಕ್ರಿಯೆ ಬೇಡ - ಶಾಸಕ ಎ.ಎಸ್.ಪೊನ್ನಣ್ಣ

ರಾಜ್ಯದಲ್ಲಿ ಮೇ.15ಕ್ಕೆ ಮುಖ್ಯಮಂತ್ರಿ ಬದಲಾಗುತ್ತಾರೆ, ಸಚಿವ ಸಂಪುಟ ಬದಲಾಗುತ್ತದೆ ಎಂದು ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸದಂತೆ ಸೂಚನೆಯಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.

Read Full Story
09:15 PM (IST) May 02

Karnataka News Live 2nd May: ತವರೂರು ಕಾರವಾರಕ್ಕೆ ಆಗಮಿಸಿದ ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸೈಲ್; ಕಿರೀಟಕ್ಕೆ ಪೂಜೆ ಸಲ್ಲಿಕೆ

ಫೆಮಿನಾ ಮಿಸ್ ಇಂಡಿಯಾ 2026 ಕಿರೀಟ ಗೆದ್ದ, ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ ಅವರು ತಮ್ಮ ತವರೂರು ಕಾರವಾರಕ್ಕೆ ಭೇಟಿ ನೀಡಿದರು. ಅವರಿಗೆ ಅದ್ದೂರಿ ಸ್ವಾಗತ ದೊರೆತಿದ್ದು, ಅವರು 2027ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
Read Full Story
08:19 PM (IST) May 02

Karnataka News Live 2nd May: ಕಾರ್ಮಿಕರ ಜೀವನ ಭದ್ರತೆಗೆ ಕೇಂದ್ರ ಸರ್ಕಾರ ಬದ್ಧ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಾರ್ಮಿಕರ ಜೀವನ ಭದ್ರತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅವರಿಗೆ ಅನುಕೂಲವಾಗುವ ಕಾಯ್ದೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Read Full Story
07:54 PM (IST) May 02

Karnataka News Live 2nd May: ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಸ್ಫೋಟಕ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹರಿಹರ ಮತ್ತು ಕೂಡಲಸಂಗಮ ಪಂಚಮಸಾಲಿ ಪೀಠಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಲ್ಲದೆ, ಬಿ.ಎಸ್. ಯಡಿಯೂರಪ್ಪನವರ ಪುತ್ರ ವ್ಯಾಮೋಹವನ್ನು ಟೀಕಿಸಿದ್ದಾರೆ.

Read Full Story
07:33 PM (IST) May 02

Karnataka News Live 2nd May: ಒಂದು ವರ್ಷದೊಳಗೆ ಹೊಸ ಬಸ್ ನಿಲ್ದಾಣ ಕಾಮಗಾರಿ ಪೂರ್ಣ - ಶಾಸಕ ಜನಾರ್ದನ ರೆಡ್ಡಿ

ಒಂದು ವರ್ಷದೊಳಗೆ ನೂತನ ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ನಗರದ ಹೇರೂರು ರಸ್ತೆಯ ಮಾರ್ಗದಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣದ ಶಂಖು ಸ್ಥಾಪನೆ ನೆರವೇರಿಸಿ ಮಾತನಾಡಿದರು.

Read Full Story
07:06 PM (IST) May 02

Karnataka News Live 2nd May: ಭಕ್ತನಂತೆ ಬರ್ತಾನೆ, ದೇವರ ಆಭರಣ ಕದ್ದು ಪರಾರಿಯಾಗ್ತಾನೆ - ಕಲಬುರ್ಗಿ ಖದೀಮ ಯಾರು ನೋಡಿ

ಕಲಬುರ್ಗಿಯ ಅಡ್ವೊಕೇಟ್ ಕಾಲನಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ, 1.37 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿ ಮೊಹಮ್ಮದ್ ಶೇಖ್‌ನನ್ನು ಬಂಧಿಸಿ, ಕಳುವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Read Full Story
06:11 PM (IST) May 02

Karnataka News Live 2nd May: ದೆಹಲಿಗೆ ಹೋಗಿ ಅಮಿತ್‌ ಶಾರನ್ನು ಭೇಟಿಯಾದ Rishab Shetty ; ಕುತೂಹಲ ಮೂಡಿಸಿದ ಭೇಟಿ; ಉದ್ದೇಶ ಏನಾಗಿತ್ತು?

Kantara Movie Actor Rishab Shetty News: ಕಾಂತಾರ ಸಿನಿಮಾವನ್ನು ನಿರ್ದೇಶಿಸಿ, ನಟಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟ ರಿಷಬ್‌ ಶೆಟ್ಟಿ ಈಗ ಮುಂದಿನ ಸಿನಿಮಾದ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಕಾರಣ ಏನು? 

Read Full Story
05:56 PM (IST) May 02

Karnataka News Live 2nd May: ಯೋಗೇಶ್ ಗೌಡ ಹತ್ಯೆ ಪ್ರಕರಣ ಆಪರಾಧಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ, ಸರ್ಕಾರ ಮಹತ್ವದ ಆದೇಶ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿ ಎಂದು ತೀರ್ಪು ಬಂದ ಹಿನ್ನೆಲೆಯಲ್ಲಿ, ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಜನಪ್ರತಿನಿಧಿ ಕಾಯ್ದೆಯ ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಶಿಕ್ಷೆಯಿಂದ ಬಿಡುಗಡೆಯಾದ ನಂತರವೂ ಆರು ವರ್ಷಗಳ ಕಾಲ ಈ ಅನರ್ಹತೆ ಮುಂದುವರಿಯಲಿದೆ.
Read Full Story
05:55 PM (IST) May 02

Karnataka News Live 2nd May: Bengaluru - ಬಾರದ ಲೋಕಕ್ಕೆ ಪಯಣಿ ಬೆಳೆಸಿದ ಮಹಿಳಾ ಅಧಿಕಾರಿ ಎಸ್‌ಪಿ ಲಾವಣ್ಯ ಎನ್.

ಬೆಸ್ಕಾಂ ವಿಜಿಲೆನ್ಸ್ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ 2010ರ ಬ್ಯಾಚ್‌ನ ಕೆಎಸ್‌ಪಿಎಸ್ ಅಧಿಕಾರಿ ಲಾವಣ್ಯ ಎನ್. ಅವರು ಕೊಲೊನ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 39 ವರ್ಷದ ಲಾವಣ್ಯ ಅವರು ಪತಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Read Full Story
05:45 PM (IST) May 02

Karnataka News Live 2nd May: ಒಟಿಟಿಗೆ ಬಂದ ಡಾರ್ಲಿಂಗ್‌ ಕೃಷ್ಣ, ಮಿಲನಾ ನಾಗರಾಜ್‌ರ Love Mocktail 3 Movie; ಯಾವಾಗ ರಿಲೀಸ್?‌

Darling Krishna: ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ನಟನೆಯ ಲವ್ ಮಾಕ್ಟೇಲ್ 3 ಸಿನಿಮಾ ಮನಮುಟ್ಟುವ ಭಾವನಾತ್ಮಕ ಕಥೆಯಾಗಿದೆ. ಇದಕ್ಕೆ ಡಾರ್ಲಿಂಗ್ ಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾವನ್ನು ಕ್ರಿಸ್ಮಿ ಫಿಲಂಸ್ ಲಾಂಛನದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್ ನಿರ್ಮಾಣ ಮಾಡಿದ್ದಾರೆ.

Read Full Story
05:41 PM (IST) May 02

Karnataka News Live 2nd May: ಈ ಬಾರಿ ಬೇಸಿಗೆಯಲ್ಲಿ ಉತ್ತಮ ಮಳೆ, ಕಾಡ್ಗಿಚ್ಚಿನ ಆತಂಕ ದೂರ - ಪ್ರವಾಸಿಗರ ಕಣ್ಣಿಗಂತೂ ಹಸಿರಿನ ಸಿಂಚನ

ಬಂಡೀಪುರದಲ್ಲಿ ಈ ವರ್ಷ ಬೆಂಕಿ ಬೀಳುವ ಆತಂಕ ದೂರವಾಗಿದೆ. ಅರಣ್ಯ ಸಿಬ್ಬಂದಿಯ ನಿರಂತರ ಕಾರ್ಯಾಚರಣೆ ಜೊತೆಗೆ ವರುಣ ಕೂಡ ಸಾಥ್ ನೀಡಿದ್ದು, ಇದೀಗ ಬಂಡೀಪುರದಲ್ಲಿ ಹಸಿರು ಚಿಗುರೊಡೆಯುತ್ತಿದ್ದು ಅರಣ್ಯಾಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ.

Read Full Story
05:29 PM (IST) May 02

Karnataka News Live 2nd May: ಶೃಂಗೇರಿ - ಮತ ಮರು ಎಣಿಕೆಯಲ್ಲಿ ಕೂಡ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡಗೆ ಗೆಲುವು, ಕಾರ್ಯಕರ್ತರ ಸಂಭ್ರಮ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೂಲ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೈಕೋರ್ಟ್ ನಿರ್ದೇಶನದಂತೆ ನಡೆದ ಈ ಮರುಪರಿಶೀಲನೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಗೆಲುವು ಮತ್ತೊಮ್ಮೆ ದೃಢಪಟ್ಟಿದೆ.
Read Full Story
05:25 PM (IST) May 02

Karnataka News Live 2nd May: PHOTOS - ವಿವಾಹ ವಾರ್ಷಿಕೋತ್ಸವದಂದು ಪತಿ ಚಿರಂಜೀವಿ ಸರ್ಜಾ ಕನಸು ಈಡೇರಿಸಿದ ನಟಿ ಮೇಘನಾ ರಾಜ್‌ ಸರ್ಜಾ!

Actress Meghana Raj Sarja: ನಟಿ ಮೇಘನಾ ಸರ್ಜಾಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಇಂದು ಅವರು ಪತಿ ಚಿರಂಜೀವಿ ಸರ್ಜಾರನ್ನು ನೆನೆದು, ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭಾವುಕರಾಗಿ ಬರೆದುಕೊಂಡಿದ್ದಾರೆ. 

Read Full Story
05:24 PM (IST) May 02

Karnataka News Live 2nd May: ಡಿವೋರ್ಸ್​ ಸಲ್ಲಿಸೋದಿದ್ರೆ ಮದುವೆ ರಿಜಿಸ್ಟರ್​ ಆಗಿರಲೇಬೇಕಾ? ಹೈಕೋರ್ಟ್​ ಕೊಟ್ಟ ತೀರ್ಪಿನ ಡಿಟೇಲ್ಸ್​ ಇಲ್ಲಿದೆ

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಕಾಯ್ದೆಯಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಮದುವೆ ನೋಂದಣಿ ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Read Full Story
04:47 PM (IST) May 02

Karnataka News Live 2nd May: ಮಾದೇವ ಚಿತ್ರಕ್ಕಿಂತ ದೊಡ್ಡದಾಗಿ ಈ ಸಿನಿಮಾ ಗೆಲ್ಲೋ ಭರವಸೆ ಇದೆ - ವಿನೋದ್‌ ಪ್ರಭಾಕರ್

ಒಂದು ಸಿನಿಮಾದಿಂದ ಸಿಗುವುದೇ ಅಂತಿಮ ಅನುಭವ ಅಲ್ಲ. ನನ್ನ ತಂದೆ ಪ್ರಭಾಕರ್‌ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ನಿರ್ಮಾಣ ಹಾಗೂ ನಿರ್ದೇಶನ ಕೂಡ ಮಾಡಿದವರು ಎಂದರು ವಿನೋದ್‌ ಪ್ರಭಾಕರ್‌.

Read Full Story
04:44 PM (IST) May 02

Karnataka News Live 2nd May: ನಿರ್ಮಾಪಕ ಸಾರಾ ಗೋವಿಂದ್ ಬೆದರಿಕೆ ಆರೋಪ, ಠಾಣೆ ಮೆಟ್ಟಲೇರಿದ ನಟ ಚೇತನ್ ಅಹಿಂಸಾ!

ಡಾ.ರಾಜ್‌ಕುಮಾರ್ ಸ್ಮಾರಕದ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ, ತಮಗೆ ಜೀವ ಬೆದರಿಕೆ ಹಾಕಿದ್ದಾರೆಂದು ನಟ ಚೇತನ್ ಅಹಿಂಸಾ ಅವರು ಸಾರಾ ಗೋವಿಂದ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್, ಸಾರಾ ಗೋವಿಂದ್ ಅವರ ಮೇಲೆ ದಬ್ಬಾಳಿಕೆ ಮತ್ತು ಹಿಂದಿನ ಅಪರಾಧಗಳ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
Read Full Story
04:32 PM (IST) May 02

Karnataka News Live 2nd May: ಕನ್ನಡದಲ್ಲಿ ಇವರೇ ನನ್ನ ನೆಚ್ಚಿನ ನಟ - ದೈವ-ಭೂತಗಳ ಬಗ್ಗೆ ನಟಿ ಪೂಜಾ ಹೆಗ್ಡೆ ಮಾತು

ಚಿಕ್ಕಂದಿನಿಂದಲೂ ಭೂತ, ದೈವ ಹಾಗೂ ಆಚರಣೆಗಳನ್ನು ನೋಡುತ್ತಾ ಬೆಳೆದವಳು ನಾನು. ಹೀಗಾಗಿ ನನಗೆ ಅವುಗಳ ಮಹತ್ವ ಗೊತ್ತಿದೆ. ‘ಕಾಂತಾರ’ ಸಿನಿಮಾ ಭೂತ ಹಾಗೂ ದೈವಗಳ ಆರಾಧನೆಯನ್ನು ಇಡೇ ದೇಶಕ್ಕೆ ಪರಿಚಯಿಸಿತು.

Read Full Story