ಹಿಂದಿಯೇತರ ರಾಜ್ಯಗಳಿಗೆ ಆಗುತ್ತಿರುವ ಉದ್ಯೋಗ ಸಂಬಂಧಿತ ಅನ್ಯಾಯದ ವಿರುದ್ಧ ಹೋರಾಡಲು ಕರ್ನಾಟಕ ಸೇರಿದಂತೆ 14 ರಾಜ್ಯಗಳು 'ಅಖಿಲ ಭಾರತ ಮಾತೃ ಭಾಷಾ ವೇದಿಕೆ'ಯನ್ನು ರಚಿಸಿವೆ.
State News Live: 14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ

ಬೆಂಗಳೂರು (ಸೆ.5): ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬರಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಬಾಗಲಕೋಟೆಯಲ್ಲಿ ರೈತರ ಜಮೀನಿಗೆ ತೆರಳಿ ಬೆಳೆ ವೀಕ್ಷಣೆ ಮಾಡಿದರು. ಸಮೀಕ್ಷೆಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಐದು ಲಕ್ಷ ರು.ವರೆಗಿನ ಸಾಲ ಮನ್ನಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದರು. ಸಾಲಮನ್ನಾ ಬೇಡಿಕೆ ಸರಿಯಿದೆ. ರೈತರ ಸಾಲ ಮನ್ನಾಗೆ ನೆರವು ಕೋರಿ ದೆಹಲಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುತ್ತೇವೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬರಗಾಲದ ಬಗ್ಗೆ ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಬೇಕು. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಇತರೆ ನಾಯಕರು ನಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು ಎಂದಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 5th September: 14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ
Karnataka News Live 5th September: ಸಾಲ ಮನ್ನಾಕ್ಕೆ ನೆರವು ಕೇಳಿ ಕೇಂದ್ರಕ್ಕೆ ರಾಜ್ಯದಿಂದ ಸರ್ವಪಕ್ಷ ನಿಯೋಗ - ಸಿಎಂ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಾಗಲಕೋಟೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆ ಹಾನಿ ವೀಕ್ಷಿಸಿದರು. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ ಬಿಜೆಪಿಗೆ, ಕೇಂದ್ರದಿಂದಲೇ ಸಾಲ ಮನ್ನಾ ಮಾಡಿಸಲು ದೆಹಲಿಗೆ ಬರುವಂತೆ ಸವಾಲು ಹಾಕಿದರು.