08:08 AM (IST) Aug 20

Karnataka News Liveಮೈಸೂರಲ್ಲಿ ಹಂಚಿಕೆಯಾಗಿದ್ದ 1100 ಮುಡಾ ಸೈಟ್‌ ರದ್ದು - ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಮುಡಾದಲ್ಲಿ ನಿಯಮ ಉಲ್ಲಂಘಿಸಿ ಹಂಚಲಾಗಿದ್ದ 50:50 ಬದಲಿ ನಿವೇಶನಗಳನ್ನು ರದ್ದುಪಡಿಸಿರುವುದಾಗಿ ತಿಳಿಸಿದ್ದಾರೆ. ವಿಚಾರಣಾ ಆಯೋಗದ ಶಿಫಾರಸಿನಂತೆ, ಸುಮಾರು ₹2000 ಕೋಟಿ ಮೌಲ್ಯದ 1100 ನಿವೇಶನಗಳ ಹಂಚಿಕೆಯನ್ನು ರದ್ದುಗೊಳಿಸಲಾಗಿದೆ.

Read Full Story
07:50 AM (IST) Aug 20

Karnataka News Liveಲೋಕಾಯುಕ್ತ ದಾಳಿ - ಭೂಸ್ವಾಧೀನಾಧಿಕಾರಿ ಬಳಿಯೇ 100 ಎಕರೆ ಕೃಷಿ ಜಮೀನು ಪತ್ತೆ!

ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಕೇಳಿಬಂದಿದೆ. ದಾಳಿಯ ವೇಳೆ 100 ಎಕರೆ ಕೃಷಿ ಭೂಮಿ, ₹2.53 ಕೋಟಿ ನಗದು ಸೇರಿದಂತೆ ಒಟ್ಟು ₹18 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

Read Full Story
07:29 AM (IST) Aug 20

Karnataka News Liveನಾಗೇಂದ್ರ ರಾಜೀನಾಮೆ ಪಡೆಯೋವರೆಗೆ ಹೋರಾಟ ನಿಲ್ಲಲ್ಲ: ಸತತ ಮೂರನೇ ದಿನವೂ ಬಿಜೆಪಿ ಪ್ರತಿಭಟನೆ, ಕಲಾಪದಲ್ಲೂ ಪ್ರತಿಪಕ್ಷ ಗದ್ದಲ

ವಿಧಾನಸಭೆ (ಆ.20): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬುಧವಾರವೂ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಗದ್ದಲ ಮುಂದುವರೆದಿದ್ದು, ಗಲಾಟೆಗೆ ಅರ್ಧ ದಿನದ ಕಲಾಪ ಬಲಿಯಾಯಿತು. ಗದ್ದಲದ ನಡುವೆಯೇ ಪ್ರಶ್ನೋತ್ತರ ನಡೆಸಿ, ವಿಧೇಯಕಗಳ ಮಂಡನೆ ಮಾಡಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಬುಧವಾರ ಮಧ್ಯಾಹ್ನ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಕುರಿತ ಸಂತಾಪ ಸೂಚನೆ ನಿರ್ಣಯ ಅಂಗೀಕರಿಸಿದ ಬೆನ್ನಲ್ಲೇ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಲು ಶುರು ಮಾಡಿದರು. ಭ್ರಷ್ಟ ನಾಗೇಂದ್ರ ಅವರನ್ನು ವಜಾಗೊಳಿಸಬೇಕು. ಅಲ್ಲಿಯವರೆಗೆ ಸದನ ನಡೆಯಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಸ್ಪಷ್ಟಪಡಿಸಿದರು.

Read Full Story