ಬೆಂಗಳೂರಿನ ಹೋಟೆಲ್ನ ಬಾಲ್ಕನಿಯಿಂದ ಬಿದ್ದು 21 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅತಿಯಾದ ಗಲಾಟೆಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳುವ ವೇಳೆ ಈ ಘಟನೆ ನಡೆದಿದೆ.
- Home
- News
- State
- Karnataka News Live: ಪೊಲೀಸ್ ಚೆಕಿಂಗ್ ವೇಳೆ ಹೋಟೆಲ್ ಬಾಲ್ಕನಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
Karnataka News Live: ಪೊಲೀಸ್ ಚೆಕಿಂಗ್ ವೇಳೆ ಹೋಟೆಲ್ ಬಾಲ್ಕನಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!

ಬೆಳಗಾವಿ: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಸಿಬಿ ಪಾರ್ಟಿ ಮೂಲಕ ಚುನಾವಣೆಗೆ ಸ್ಪರ್ಧಿಸಿ 143 ಸ್ಥಾನಗಳ ಬಹುಮತದೊಂದಿಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿಯ ಭೋಜರಾಜ ಕ್ರೀಡಾಂಗಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ ಛತ್ರಪತಿ ಶಿವಾಜಿ ಮಹಾರಾಜ ಮತ್ತು ರಾಣಾ ಪ್ರತಾಪ್ ಸಿಂಹರಂತಹ ಆಡಳಿತ ಅನಿವಾರ್ಯವಾಗಿದೆ. ಇರುವ ಆಡಳಿತ ಪಕ್ಷವೇ ಇರಲಿ, ವಿರೋಧ ಪಕ್ಷವೇ ಇರಲಿ, ನಾನು ಇರುವ ಸತ್ಯ ಹೇಳುತ್ತೇನೆ. ಹೀಗಾಗಿ ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆಂದು ಬಿಜೆಪಿಯವರು ಉಚ್ಛಾಟನೆ ಮಾಡಿದ್ದಾರೆ.
Karnataka News Live15 December 2025 ಪೊಲೀಸ್ ಚೆಕಿಂಗ್ ವೇಳೆ ಹೋಟೆಲ್ ಬಾಲ್ಕನಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
Karnataka News Live15 December 2025 ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸಿ, ಸುತ್ತೂರಿನ ಶಿವರಾತ್ರಿ ಶಿವಯೋಗಿಶ್ವರರ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ಗೆ ಸೂಚನೆ ನೀಡಿದೆ.
Karnataka News Live15 December 2025 ತಂತ್ರಜ್ಞಾನದ ನೆರವಿನಿಂದ ಜೈಲುಗಳಲ್ಲಿ ಸುಧಾರಣೆ ತರಲು ಅಲೋಕ್ ಕುಮಾರ್ ನೇತೃತ್ವ
Karnataka News Live15 December 2025 ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ಅನುದಾನಿತ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯಪಾನ ಮಾಡಿದ್ದಾರೆ. ಈ ದೃಶ್ಯದ ವಿಡಿಯೋ ವೈರಲ್ ಆದ ನಂತರ, ಶಾಲಾ ಆಡಳಿತ ಮಂಡಳಿ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ.
Karnataka News Live15 December 2025 ವಿಂಡ್ ಫ್ಯಾನ್ಗಳಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು, ಮರೆಯಾದ ಹಕ್ಕಿಗಳ ಕಲರವ!
ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚುತ್ತಿರುವ ವಿಂಡ್ ಫ್ಯಾನ್ಗಳ ಶಬ್ದದಿಂದಾಗಿ ಅಂಕಸಮುದ್ರದಂತಹ ಪಕ್ಷಿಧಾಮಗಳಿಗೆ ಬರುವ ವಲಸೆ ಪಕ್ಷಿಗಳು ದೂರ ಸರಿಯುತ್ತಿವೆ. ರೈತರು ಹಣದಾಸೆಗೆ ಜಮೀನು ಲೀಸ್ ನೀಡುತ್ತಿದ್ದು, ಇದರಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಬಂದಿದೆ.
Karnataka News Live15 December 2025 ಪ್ರಧಾನಿಗೆ ಜೋರ್ಡಾನ್ನಲ್ಲಿ ಭವ್ಯ ಸ್ವಾಗತ - ಐಎಂಇಸಿ ಕಾರಿಡಾರ್ ಕುರಿತು ಚರ್ಚೆ ನಿರೀಕ್ಷೆ
7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ಜೋರ್ಡಾನ್ಗೆ ಭೇಟಿ ನೀಡಿದ್ದು,ಈ ಭೇಟಿಯು ಭಾರತ-ಜೋರ್ಡಾನ್ ಸಂಬಂಧವನ್ನು ಬಲಪಡಿಸುವುದಲ್ಲದೆ, ಸ್ಥಗಿತಗೊಂಡಿದ್ದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಮರುಚಾಲನೆ ಸಿಗುವ ನಿರೀಕ್ಷೆಯಿದೆ.
Karnataka News Live15 December 2025 ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ - ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!
'ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಸಿಂಗಾಪುರ, ದುಬೈ ಇವೆಂಟ್ಗಳಿಗಾಗಿ ಕನ್ನಡ ಅಭಿಮಾನಿ ಮಹಿಳೆಯರಿಂದ ಲಕ್ಷಾಂತರ ಹಣ ವಸೂಲಿ ಮಾಡಿ ವಂಚನೆ ಮಾಡಲಾಗಿದೆ. ಆರೋಪಿ ಶಿವಕುಮಾರ್ ನಗರ ನವಿಲೆ ವಿರುದ್ಧ ದೂರು ನೀಡಿರುವ ಮೀನಾಕ್ಷಿ ಮತ್ತು ರಂಜಿತಾ, ಸಿಎಂ ಫಂಡ್ನ 15 ಲಕ್ಷ ರೂ. ದುರುಪಯೋಗದ ಆರೋಪ ಮಾಡಿದ್ದಾರೆ.
Karnataka News Live15 December 2025 ವಿಭೂತಿಗಳಲ್ಲೇ ಐಕ್ಯರಾದ ಭಾರತದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ! ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಶಿಷ್ಟವಾಗಿ ನೆರವೇರಿತು. ದಾವಣಗೆರೆಯನ್ನು ವಾಣಿಜ್ಯ ಹಾಗೂ ಶೈಕ್ಷಣಿಕ ನಗರಿಯಾಗಿದೆ.
Karnataka News Live15 December 2025 ಬಿಲ್ ಪಾವತಿಸದ ಸರ್ಕಾರ; ತಾಲೂಕು ಆಫೀಸಿನ ಟೇಬಲ್, ಕುರ್ಚಿ, ಕಂಪ್ಯೂಟರ್ ಜಪ್ತಿ ಮಾಡಿದ ಕೋರ್ಟ್!
ಸರ್ಕಾರದಿಂದ ಹಾರ್ಡ್ವೇರ್ ವ್ಯಾಪಾರಿಗೆ ಪಾವತಿಸಬೇಕಿದ್ದ ₹6 ಲಕ್ಷ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ತಾಲ್ಲೂಕು ಪಂಚಾಯತಿ ಕಚೇರಿಯ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ, ಅಧಿಕಾರಿಗಳು ಕುರ್ಚಿ, ಕಂಪ್ಯೂಟರ್ ವಶಕ್ಕೆ ಪಡೆದಿದ್ದಾರೆ.
Karnataka News Live15 December 2025 Amruthadhaare - ಜೊತೆಯಲ್ಲಿ ಗೌತಮ್-ಭೂಮಿ! ಮಕ್ಕಳು ಶಾಕ್ - ಅಪ್ಪ-ಅಮ್ಮನ್ನೇ ಹೇಗೆ ಆಡಿಸ್ತಿದ್ದಾರೆ ನೋಡಿ!
ಅಮೃತಧಾರೆ ಧಾರಾವಾಹಿಯಲ್ಲಿ, ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು ಅಜ್ಜಿ ಸಾಯುವ ನಾಟಕವಾಡಿದ್ದಾರೆ. ಅಜ್ಜಿಯ ಕೊನೆಯಾಸೆ ಈಡೇರಿಸಲು ಹೊರಟ ಈ ಜೋಡಿಗೆ, ಅವರ ಮಕ್ಕಳಾದ ಆಕಾಶ್ ಮತ್ತು ಮಿಂಚು ಕೂಡ ಆಟವಾಡಿಸಲು ಸಜ್ಜಾಗಿದ್ದಾರೆ.
Karnataka News Live15 December 2025 ಎದುರುಮನೆ ಹುಡುಗಿಯೊಂದಿಗೆ ಓಡಿಹೋದ ಮಗ; ತಾಯಿಗೆ ಮನಬಂದಂತೆ ಥಳಿಸಿದ ಲೋಕಲ್ ಪೊಲೀಸ್!
ಅಂತರ್ಜಾತಿ ವಿವಾಹವಾದ ಮಗನ ಸುಳಿವು ಕೇಳುವ ನೆಪದಲ್ಲಿ, ಧಾರವಾಡದ ಕುಂದಗೋಳ ಪೊಲೀಸರು ಆತನ ತಾಯಿ ಲಕ್ಷ್ಮವ್ವ ಮೇಲೆ ಠಾಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಜೊತೆಗೆ ಹಣ, ಚಿನ್ನಾಭರಣ ದೋಚಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Karnataka News Live15 December 2025 Brahmagantu - ಚಾಲೆಂಜ್ ಸೋತು ಮನೆಬಿಟ್ಟ ದೀಪಾ- ಖುಷಿ ಬದ್ಲು ಅಡಕತ್ತರಿಯಲ್ಲಿ ಒದ್ದಾಡಿದ ಸೌಂದರ್ಯ! ಏನಾಯ್ತು?
Karnataka News Live15 December 2025 ಕುಟುಂಬವೇ ಹೆಮ್ಮೆಪಡುವಂತೆ ಮಾಡಿದ Kiccha Sudeep ಮಗಳು ಸಾನ್ವಿ! ಇದಪ್ಪಾ..ಸಾಧನೆ ಅಂದ್ರೆ..!
Kiccha Sudeep Daughter Sanvi Song: ಇದೇ ತಿಂಗಳ 25ರಂದು ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ಹಾಡು ಬಿಡುಗಡೆ ಮಾಡಲಾಗಿದೆ.
Karnataka News Live15 December 2025 Karna - ಹಿಂದೆ ಯಮರಾಯ ನಿಂತಿರೋದು ಗೊತ್ತಿಲ್ದೇ ಹಾಯಾಗಿದ್ದಾನೆ ಪಾಪಿ ಸಂಜಯ್! ಮುಂದಿದೆ ಮಾರಿಹಬ್ಬ
Karnataka News Live15 December 2025 BBK 12 - ಧ್ರುವಂತ್ ಹೆದರಬೇಕು- ಸೀಕ್ರೆಟ್ ರೂಮಲ್ಲಿ ಸಣ್ಣ ಪ್ರಶ್ನೆಗೆ ರಣಚಂಡಿಯಾದ ರಕ್ಷಿತಾ ಶೆಟ್ಟಿ
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಧ್ರುವಂತ್, ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿಲ್ಲ, ಬದಲಾಗಿ ಸೀಕ್ರೇಟ್ ರೂಮ್ ಪ್ರವೇಶ ಮಾಡಿದ್ದಾರೆ. ಮನೆಯೊಳಗಡೆ ಏನು ನಡೆಯುತ್ತಿದೆ ಎಂದು ಅವರು ರೂಮ್ನಲ್ಲಿ ನೋಡುತ್ತಿದ್ದಾರೆ.
Karnataka News Live15 December 2025 ದಿಢೀರ್ ಲೈವ್ಗೆ ಬಂದ ಉಪೇಂದ್ರ, ಫ್ಯಾನ್ಸ್ಗೆ ಕೊಟ್ಟರೊಂದು ಗುಡ್ನ್ಯೂಸ್ - ಇಂಥ ಛಾನ್ಸ್ ಮತ್ತೆ ಸಿಗಲ್ಲ ನೋಡಿ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ '45' ಚಿತ್ರದ ಟ್ರೈಲರ್ ಬಿಡುಗಡೆಗೆ ಸಜ್ಜಾಗಿದೆ. ನಟ ಉಪೇಂದ್ರ ಅವರು ಶಿವರಾಜ್ಕುಮಾರ್ ಮತ್ತು ರಾಜ್ ಬಿ. ಶೆಟ್ಟಿ ಅವರೊಡನೆ ತಾವೂ ಭಾಗವಹಿಸುವ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಅಭಿಮಾನಿಗಳನ್ನು ಆಹ್ವಾನಿಸಿದ್ದಾರೆ.
Karnataka News Live15 December 2025 ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?
Karnataka News Live15 December 2025 ಬೆಂಗಳೂರು ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಅಗ್ನಿ ಅವಘಡ - ನಡುರಸ್ತೆಯಲ್ಲೇ ಭಸ್ಮವಾದ ಕಾರು
Karnataka News Live15 December 2025 BBK 12 - ಕರ್ಮ ರಿಟರ್ನ್ಸ್.. ಬಂದು ಹೊಡೆಯತ್ತೆ - ದೊಡ್ಮನೆಯಲ್ಲಿ ಶಾಪ ಹಾಕಿದ ಚೈತ್ರಾ ಕುಂದಾಪುರ
Bigg Boss Kannada Season 12 Episode Update: ಬಿಗ್ ಬಾಸ್ ಮನೆಯಲ್ಲಿ ಹೊಸ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ಸೋತವರು ಮನೆಯಿಂದ ಹೊರಗಡೆ ಹೋಗಲು ನಾಮಿನೇಟ್ ಆಗುತ್ತಾರೆ. ಈಗ ಈ ಟಾಸ್ಕ್ ವಿಚಾರವಾಗಿ ದೊಡ್ಡ ಜಗಳವೇ ಆಗಿದೆ. ಸದ್ಯ ಪ್ರೋಮೋ ರಿಲೀಸ್ ಆಗಿದೆ.