Asianet Suvarna News Asianet Suvarna News

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲಿಲ್ಲ: CWRC ಮುಂದೆ ಕರ್ನಾಟಕ ವಾದ

ಕಾವೇರಿ ಜಲಾನಯನದ ಯಾವುದೇ ಜಲಾಶಯಗಳಿಂದ ತಮಿಳುನಾಡಿಗೆ ನೀರನ್ನು ಹರಿಸುವ ಸ್ಥಿತಿಯಲ್ಲಿಲ್ಲ ಎಂದು ಸಿಡಬ್ಯೂಆರ್‌ಸಿ ಸಭೆಯಲ್ಲಿ ಕರ್ನಾಟಕ ವಾದ ಮಂಡನೆ ಮಾಡಿದೆ.

Karnataka not in position to release Cauvery water from reservoirs argues front of CWRC sat
Author
First Published Sep 26, 2023, 1:54 PM IST

ನವದೆಹಲಿ (ಸೆ.26): ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದಲ್ಲಿ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಈ ಪೈಕಿ ಕಾವೇರಿ ಜಲಾನಯನ ಪ್ರದೇಶದಲ್ಲಿಯೇ 32 ಜಿಲ್ಲೆಗಳಿವೆ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರಿ ನಿಯಂತ್ರಣ ಸಮಿತಿ ಮುಂದೆ ವಾದ ಮಂಡನೆ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಕಾವೇರಿ ನೀರಿ ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ ಮಾಡಿದ್ದಾರೆ. ಈ ವೇಳೆ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಸಮಿತಿಯ ಮುಂದೆ ಇಡುವ ಪ್ರಯತ್ನ ಮಾಡಿದ್ದಾರೆ. ಸೆ.25ರವರೆಗೆ ಕರ್ನಾಟಕದ ಕಾವೇರಿ ಜಲಾನಯನ ವ್ಯಾಪ್ತಿಗೊಳಪಡುವ 4 ಜಲಾಶಯಗಳಿಗೆ ಶೇ.53.04 ಪರ್ಸೆಂಟ್‌ ಒಳ ಹರಿವಿನ ಕೊರತೆಯಾಗಿದೆ. ಕರ್ನಾಟಕ ಸರ್ಕಾರವು ಕಳೆದ ಸೆ.13ರಂದು ರಾಜ್ಯದ 161 ತಾಲೂಕುಗಳನ್ನು ಬರ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ ಎಂದು ವಾದ ಮಂಡಿಸಲಾಗಿದೆ.

ಕಾವೇರಿ ನೀರಿಗಾಗಿ ಕರ್ನಾಟಕಕ್ಕೆ ಪ್ರಾಣಸಂಕಟ, ತಮಿಳುನಾಡಿಗೆ ಚೆಲ್ಲಾಟ: ನಿತ್ಯ 12,500 ನೀರು ಹರಿಸುವಂತೆ ಪಟ್ಟು

ಕರ್ನಾಟಕ ಬರಪೀಡಿದ ತಾಲೂಕುಗಳಲ್ಲಿ 34 ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿದೆ. ಅದರಲ್ಲಿಯೂ 32 ತೀವ್ರ ಬರ ಪೀಡಿತ ತಾಲೂಕುಗಳಾಗಿವೆ. ಉಳಿದಂತೆ 15 ಸಾಧಾರಣ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಅಂಶವನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ಗಂಭೀರವಾಗಿ ಪರಿಗಣಿಸಬೇಕು. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ವಾದ ಮಂಡನೆಯನ್ನು ಮಾಡಲಾಗಿದೆ.

Follow Us:
Download App:
  • android
  • ios