ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈವೋಲ್ಟೇಜ್ ಸಭೆಯ ನಂತರ, ಸಿಎಂ ಸಿದ್ದರಾಮಯ್ಯ ರಹಸ್ಯ ಚರ್ಚೆ ನಡೆಸಿ ಬೆಂಗಳೂರಿಗೆ ಮರಳಿದ್ದಾರೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದುಕೊಂಡಿದ್ದು, ಬುಧವಾರ ನಡೆಯಲಿರುವ ಮಹತ್ವದ ಉಪಹಾರ ಕೂಟಕ್ಕೆ ಹಾಜರಾಗಲಿದ್ದಾರೆ. ಕುತೂಹಲಕರ ಮಾಹಿತಿ ಇಲ್ಲಿದೆ ನೋಡಿ
- Home
- News
- State
- Karnataka CM change Buzz: DK Shivakumar - ದೆಹಲಿ ಹೈವೋಲ್ಟೇಜ್ ಸಭೆ ಬಳಿಕ ಎಲ್ಲವೂ ಸಸ್ಪೆನ್ಸ್! ಸಿದ್ದು ರಾತ್ರಿಯೇ ವಾಪಸಾದ್ರೂ ಡಿಕೆಶಿ ದೆಹಲಿಯಲ್ಲೇ ಉಳಿದಿರುವುದೇಕೆ?
Karnataka CM change Buzz: DK Shivakumar - ದೆಹಲಿ ಹೈವೋಲ್ಟೇಜ್ ಸಭೆ ಬಳಿಕ ಎಲ್ಲವೂ ಸಸ್ಪೆನ್ಸ್! ಸಿದ್ದು ರಾತ್ರಿಯೇ ವಾಪಸಾದ್ರೂ ಡಿಕೆಶಿ ದೆಹಲಿಯಲ್ಲೇ ಉಳಿದಿರುವುದೇಕೆ?
ಬೆಂಗಳೂರು: ರಾಜ್ಯ ರಾಜಕಾರಣದ ಬದಲಾವಣೆಗಳ ಕುರಿತು ಮಂಗಳವಾರದ ದೆಹಲಿ ಸಭೆಯಲ್ಲಿ ಮಹತ್ವದ ಚರ್ಚೆಯಾಗಿರುವ ಬೆನ್ನಲ್ಲೇ ಬುಧವಾರ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ. ರಾಜ್ಯ ರಾಜಕೀಯ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಪುಟ ಸಹೋದ್ಯೋಗಿಗಳನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ.

ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕ್ಕೆ ಕರೆದಿದ್ದು, ಬಳಿಕ ಯಾವ ಬೆಳವಣಿಗೆಗಳು ನಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಪರೋಕ್ಷ ಸಂದೇಶ ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪಹಾರ ಕೂಟ ಕರೆದಿರುವುದು ಮಹತ್ವ ಪಡೆದುಕೊಂಡಿದ್ದು, ಬಳಿಕ ರಾಜಕೀಯವಾಗಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.
Karnataka Politics Live 27 May 2026DK Shivakumar - ದೆಹಲಿ ಹೈವೋಲ್ಟೇಜ್ ಸಭೆ ಬಳಿಕ ಎಲ್ಲವೂ ಸಸ್ಪೆನ್ಸ್! ಸಿದ್ದು ರಾತ್ರಿಯೇ ವಾಪಸಾದ್ರೂ ಡಿಕೆಶಿ ದೆಹಲಿಯಲ್ಲೇ ಉಳಿದಿರುವುದೇಕೆ?
Karnataka Politics Live 27 May 2026ಸಿದ್ದುಗೆ ರಾಜ್ಯಸಭೆ ಆಫರ್; ಸಿಎಂ ಸ್ಥಾನಕ್ಕೆ ರಾಜೀನಾಮೆ ಗ್ಯಾರಂಟಿ, ಯತೀಂದ್ರ, ಖರ್ಗೆ ಸೇರಿ ನಾಲ್ವರಿಗೆ ಡಿಸಿಎಂ ಪಟ್ಟ?
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಖುದ್ದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸದಸ್ಯರಾಗುವ ಆಹ್ವಾನ ನೀಡಿದ್ದು, ತನ್ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವಂತೆ ಪರೋಕ್ಷ ಸೂಚನೆ ನೀಡಿದ್ದಾರೆ.