ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಆದೇಶದಂತೆ ರಾಜೀನಾಮೆ ನೀಡುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ತಮ್ಮ ರಾಜೀನಾಮೆಯನ್ನು ತಡೆಯಲು ಆಪ್ತ ಸಚಿವರು ಮತ್ತು ಶಾಸಕರು ನಡೆಸಿದ ಸಹಿ ಸಂಗ್ರಹದಂತಹ ಪ್ರಯತ್ನಗಳನ್ನು ಅವರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.
Karnataka Political Update Live: ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನುಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಲು ಸಜ್ಜಾಗಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಬುಧವಾರ ರಾತ್ರಿ ದಿಢೀರ್ ತಮ್ಮ ತವರು ರಾಜ್ಯ ಮಧ್ಯಪ್ರದೇಶದ ಇಂದೋರ್ಗೆ ತೆರಳಿದ್ದಾರೆ. ಅಲ್ಲಿಂದ ಈಗ ಮುಂಬೈಗೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತಮ್ಮ ತವರಿಗೆ ತೆರಳಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ಬರುವವರೆಗೆ ಕಾಯುತ್ತಾರೋ ಅಥವಾ ಲೋಕಭವನಕ್ಕೆ ತೆರಳಿ ರಾಜೀನಾಮೆ ಕೊಟ್ಟು ಬರುತ್ತಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇದರ ಜೊತೆಗೆ ವರದಿ ಪ್ರಕಾರ ದಿಢೀರ್ ರಾಜ್ಯಪಾಲರ ಇಂದೋರ್ ಪ್ರವಾಸದಿಂದ ಅವರು ವಾಪಸ್ ಬರುವ ಬಗ್ಗೆ ಇನ್ನೂ ವೇಳಾಪಟ್ಟಿ ಖಚಿತವಾಗಿಲ್ಲ. ರಾಜ್ಯಪಾಲರು ಬಂದರೆ ಮಾತ್ರವೇ ಇಂದು ರಾಜಿನಾಮೆ. ಇಲ್ಲದೆ ಇದ್ದರೆ ರಾಜಿನಾಮೆ ಕೊಡುವ ಸಮಯ ಮುಂದಕ್ಕೆ ಹೋಗಲಿದೆ. ಲೋಕಭವನಕ್ಕೆ ರಾಜೀನಾಮೆ ಪತ್ರ ನೀಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ರಾಜ್ಯಪಾಲರನ್ನು ಭೇಟಿಯಾಗೇ ರಾಜೀನಾಮೆ ಸಲ್ಲಿಸಬೇಕು.