Asianet Suvarna News Asianet Suvarna News

ಎಸ್‌ಐ ಕೇಸ್‌ನಲ್ಲಿ ಶಿರಸಿ ವ್ಯಕ್ತಿ ವಿಚಾರಣೆ: ಗಣಪತಿ ಭಟ್‌ ವಶ, ಬಳಿಕ ಬಿಡುಗಡೆ

ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಪೊಲೀಸರ ನಡುವೆ ಮಧ್ಯವರ್ತಿಯಾಗಿದ್ದ ಎಂಬ ಶಂಕೆ ಮೇರೆಗೆ ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತರೊಬ್ಬನನ್ನು ವಿಚಾರಣೆ ನಡೆಸಿ ಸಿಐಡಿ ಬಿಡುಗಡೆಗೊಳಿಸಿದೆ. 

karnataka psi recruitment scam cid police arrest another accused ganapathi bhat gvd
Author
Bangalore, First Published Jul 13, 2022, 5:00 AM IST | Last Updated Jul 13, 2022, 5:00 AM IST

ಶಿರಸಿ/ಬೆಂಗಳೂರು (ಜು.13): ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳು ಹಾಗೂ ನೇಮಕಾತಿ ವಿಭಾಗದ ಪೊಲೀಸರ ನಡುವೆ ಮಧ್ಯವರ್ತಿಯಾಗಿದ್ದ ಎಂಬ ಶಂಕೆ ಮೇರೆಗೆ ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತರೊಬ್ಬನನ್ನು ವಿಚಾರಣೆ ನಡೆಸಿ ಸಿಐಡಿ ಬಿಡುಗಡೆಗೊಳಿಸಿದೆ. ಶಿರಸಿ ತಾಲೂಕಿನ ಸಾಮಾಜಿಕ ಕಾರ್ಯಕರ್ತ ಗಣಪತಿ ಭಟ್‌ ವಿಚಾರಣೆಗೊಳಪಟ್ಟಿದ್ದು, ಸಿದ್ದಾಪುರ ಸಮೀಪದ ಹೇರೂರು ಗ್ರಾಮದಲ್ಲಿರುವ ಅವರ ಮನೆಯಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಬಳಿಕ ನಗರಕ್ಕೆ ಕರೆತಂದು ಗಣಪತಿ ಭಟ್‌ರನ್ನು ವಿಚಾರಣೆಗೊಳಪಡಿಸಿದ ತನಿಖಾ ತಂಡ ಮಂಗಳವಾರ ಬಿಡುಗಡೆಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಗಣಪತಿ ಭಟ್‌ ರಾಜಕೀಯ ಹಿನ್ನೆಲೆವುಳ್ಳವರಾಗಿದ್ದು, ಸ್ಥಳೀಯವಾಗಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಿದ್ದಾಪುರ ತಾಲೂಕಿನ ಕೆಲ ರಾಜಕೀಯ ನಾಯಕರ ಆಪ್ತ ಒಡನಾಟ ಸಹ ಇದೆ.  ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಬಂಧಿತನಾಗಿರುವ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್‌ ಜತೆ ಗಣಪತಿ ಭಟ್‌ ಸಂಪರ್ಕದಲ್ಲಿದ್ದು, ಕೆಲ ಅಭ್ಯರ್ಥಿಗಳ ಮತ್ತು ಡಿವೈಎಸ್ಪಿ ನಡುವೆ ಮಧ್ಯವರ್ತಿಯಾಗಿ ಡೀಲ್‌ ಕುದುರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. 

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ಪುತ್ರನ ಹೆಸರು..!

ಈ ಮಾಹಿತಿ ಮೇರೆಗೆ ಶಿರಸಿಗೆ ತೆರಳಿದ ಸಿಐಡಿ ಪೊಲೀಸರು, ಹೇರೂರು ಸಮೀಪದ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದರು. ವಿಚಾರಣೆ ವೇಳೆ ‘ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನಾನೂ ಯಾವ ಅಭ್ಯರ್ಥಿಗೂ ಅನುಕೂಲ ಮಾಡಿಕೊಟ್ಟಿಲ್ಲ. ಯಾರಿಂದೂ ಹಣ ಪಡೆದಿಲ್ಲ’ ಎಂದು ಗಣಪತಿ ಭಟ್‌ ಹೇಳಿದ್ದಾರೆ ಎನ್ನಲಾಗಿದೆ.

ಇಂದು ಕೋರ್ಟ್‌ಗೆ ಅಮೃತ್‌ ಪಾಲ್‌: ಪೊಲೀಸ್‌ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬುಧವಾರ ನ್ಯಾಯಾಲಯಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಸಿಐಡಿ ಹಾಜರುಪಡಿಸಲಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿಗಳ ಒಎಂಆರ್‌ಶೀಟ್‌ ತಿದ್ದಿದ ಆರೋಪಕ್ಕೆ ಎಡಿಜಿಪಿ ತುತ್ತಾಗಿದ್ದರು. 

ಪುಕ್ಸಟ್ಟೆ ಗಂಡ ಹೊಟ್ಟೆ ತುಂಬ ಉಂಡ: ಬಿಟ್ಟಿ ಇಟ್ಟಿಗೆ, ಕಬ್ಬಿಣಕ್ಕಾಗಿ ಎಸ್‌ಐ ಅಕ್ರಮದಲ್ಲಿ ಡಿವೈಎಸ್ಪಿ ಭಾಗಿ..!

ಈ ಸಂಬಂಧ ಅಮೃತ್‌ ಪಾಲ್‌ ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳು ಸಿಐಡಿ ವಶಕ್ಕೆ ಪಡೆದಿತ್ತು. ವಿಚಾರಣೆ ವೇಳೆ ತನಿಖೆಗೆ ಎಡಿಜಿಪಿ ಸಕಾರಾತಾತ್ಮಕವಾಗಿ ಸ್ಪಂದಿಸಿಲ್ಲ. ತಾನು ಯಾವುದೇ ತಪ್ಪು ಮಾಡಿಲ್ಲ ಎನ್ನುತ್ತಾರೆ ಹೊರತು ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಅಕ್ರಮ ಹೇಗೆ ನಡೆಯಿತು ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿಲ್ಲ ಎಂದು ಸಿಐಡಿ ಹೇಳಿದೆ.

Latest Videos
Follow Us:
Download App:
  • android
  • ios