Asianet Suvarna News Asianet Suvarna News

ನಿವೃತ್ತ ಐಪಿಎಸ್ ಅಧಿಕಾರಿ ಕೊರೋನಾ ಮಹಾಮಾರಿಗೆ ಬಲಿ

*ನಿವೃತ್ತ ಐಪಿಎಸ್ ಅಧಿಕಾರಿ ಕೊರೋನಾ ಮಹಾಮಾರಿಗೆ ಬಲಿ
* ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಬಳಿಯ ಸಾಗರ ಆಸ್ಪತ್ರೆಯಲ್ಲಿ ನಿಧನ
* ಇತ್ತೀಚೆಗೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.

Karnataka retired ips officer kvr tagore Dies from Corona at Bengaluru rbj
Author
Bengaluru, First Published May 12, 2021, 3:08 PM IST

ಬೆಂಗಳೂರು, (ಮೇ.12): ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ಆರ್. ಟ್ಯಾಗೂರ್ ಅವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಇತ್ತೀಚೆಗೆ ಟ್ಯಾಗೂರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಬಳಿಯ ಸಾಗರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ, ಇಂದು (ಬುಧವಾರ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರು ಕರ್ನಾಟಕ ರಾಜ್ಯ ಪೊಲೀಸ್​ ಡಿಜಿಪಿ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಮುದ್ದೇಬಿಹಾಳ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಕೊರೋನಾಗೆ ಬಲಿ

ಅಲ್ಲದೇ 2006ರಲ್ಲಿ ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಭಿಷೇಕ ಪ್ರಚಾರದ ಉಸ್ತುವಾರಿ ವಹಿಸಿಕೊಂಡು ಕಾರ್ಯನಿರ್ವಹಿಸಿದ್ದರು.

ಈ ಕಿಲ್ಲರ್ ಕೊರೋನಾ ಜನ ಸಾಮಾನ್ಯರು ಸೇರಿದಂತೆ ನಟ, ನಟಿ, ರಾಜಕಾರಣಿ, ಕ್ರೀಡಾಪಟುಗಳನ್ನು ಬಲಿಪಡೆದುಕೊಂದೆ. ಇನ್ನು ಕೆಲವರು ಸೂಕ್ತ ಸಮಯಕ್ಕೆ ಆಕ್ಸಿಜನ್ ಬೆಡ್, ಐಸಿಯು ಸಿಗದೇ ಸಾವನ್ನಪ್ಪಿದ್ದಾರೆ.

Follow Us:
Download App:
  • android
  • ios