ರಸ್ತೆಯ ಮೇಲೆ ಕಸ ಎಸೆಯಬೇಡಿ. ನಗರಸಭೆ ವಾಹನಕ್ಕೆ ನೀಡಿ ಎಂದ ಇಲ್ಲಿನ ನಗರಸಭೆಯ ಪೌರಕಾರ್ಮಿಕನ ಮೇಲೆ ಹಲ್ಲೆ ಇಬ್ಬರು ವ್ಯಕ್ತಿಗಳು ಸೋಮವಾರ ರಾತ್ರಿ ಹಲ್ಲೆ ಮಾಡಿದ್ದಾರೆ.

 ಕಾರವಾರ (ಸೆ.13) :  ರಸ್ತೆಯ ಮೇಲೆ ಕಸ ಎಸೆಯಬೇಡಿ. ನಗರಸಭೆ ವಾಹನಕ್ಕೆ ನೀಡಿ ಎಂದ ಇಲ್ಲಿನ ನಗರಸಭೆಯ ಪೌರಕಾರ್ಮಿಕನ ಮೇಲೆ ಹಲ್ಲೆ ಇಬ್ಬರು ವ್ಯಕ್ತಿಗಳು ಸೋಮವಾರ ರಾತ್ರಿ ಹಲ್ಲೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ನಗರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವ ಚೇತನಕುಮಾರ ಕೊರಗ ಎಂಬುವವರು ಸ್ವಚ್ಛತಾ ಕೆಲಸದ ಪಾಳಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಸಮೀಪ ನಿತಿನ್ ಹರಿಕಂತ್ರ ಎಂಬುವವರು ಕಸ ಬಿಸಾಡುತ್ತಿದ್ದರು. ಇದನ್ನು ಗಮನಿಸಿದ ಚೇತನಕುಮಾರ ರಸ್ತೆಗಳನ್ನು ಸ್ವಚ್ಛತೆ ಮಾಡಿದ್ದು ಪುನಃ ಇಲ್ಲಿ ಕಸ ಬಿಸಾಡಬೇಡಿ. ನಗರಸಭೆಯ ಕಸ ಸಂಗ್ರಹಣೆ ಮಾಡುವ ವಾಹನಕ್ಕೆ ನೀಡಿ ಎಂದು ತಿಳಿಸಿದ್ದಾರೆ. ಆಗ ನಿತಿನ ಹರಿಕಂತ್ರ ಹಾಗೂ ನಿತೇಶ ಹರಿಕಂತ್ರ ಚೇತನ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ನಾನು ಇಲ್ಲಿಯೇ ಕಸ ಬಿಸಾಡುತ್ತೇನೆ. ನನಗೆ ಹೇಳುವವನು ನೀನು ಯಾರು? ಕಸ ಆರಿಸುವವ ನೀನು. ನಿನ್ನ ಹಾಗೂ ನಿನ್ನ ಜಾತಿಯ ಕೆಲಸ ನಾವು ಬಿಸಾಡಿದ ಕಸ ಆರಿಸುವುದು, ಈ ಕಸ ತೆಗೆದುಕೊಂಡು ಹೋಗು ಎಂದು ಹೇಳಿ ಹಲ್ಲೆ ಮಾಡಿದ್ದಾರೆ. ಅಲ್ಲದೆ ಚೇತನ ಅವರನ್ನು ಬಿಡಿಸಲು ಬಂದ ಕಚೇರಿ ಸಿಬ್ಬಂದಿ ಪುರುಷೋತ್ತಮ ಕೊರಗ ಅವರ ಮೇಲೆ ಕೂಡಾ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ‌ ಮದ್ಯಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಡುಕರಿಂದ‌ ವ್ಯಕ್ತಿ ಮೇಲೆ ಹಲ್ಲೆ!

ಮನವಿ:

ಪೌರಕಾರ್ಮಿಕರ ಹಾಗೂ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ ಕಾರವಾರ ಘಟಕದ ಪದಾಧಿಕಾರಿಗಳು ಪೌರಾಯುಕ್ತ ಚಂದ್ರಮೌಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಇದರಿಂದ ನಗರಸಭೆ ಪೌರಕಾರ್ಮಿಕರಿಗೆ ಮನೆ-ಮನೆ ತಿರುಗಿ ಸ್ವಚ್ಛತೆ ಕೆಲಸ ಮಾಡಲು ಜೀವ ಭಯ ಕಾಡುತ್ತಿದೆ. ನಾವು ಆರೋಪಿಗಳನ್ನು ಬಂಧಿಸುವವರೆಗೂ ಆ ವಾರ್ಡ್ ಕಸ ತೆಗೆಯುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ನಗರಸಭೆಯ ವಿವಿಧ ವಿಭಾಗದ ಸಿಬ್ಬಂದಿ ಇದ್ದರು. 

ಇಷ್ಟೊತ್ತಿಗೆ ಬರಗಾಲ ಘೋಷಣೆ ಆಗಬೇಕಿತ್ತು, ಸೆಪ್ಟೆಂಬರ್ ಬಂದ್ರೂ ಆಗಿಲ್ಲ: ಬೊಮ್ಮಾಯಿ ಕಿಡಿ

ರಸ್ತೆಯ ಮೇಲೆ ಕಸ ಎಸೆಯಬಾರದು ಎಂದು ತಿಳಿವಳಿಕೆ ನೀಡಿದ ನಮ್ಮ ಸಿಬ್ಬಂದಿ ಚೇತನ ಹಾಗೂ ಪುರುಷೋತ್ತಮ ಮೇಲೆ ಸೋಮವಾರ ರಾತ್ರಿ ಬಸ್‌ನಿಲ್ದಾಣದ ಸಮೀಪ ಹಲ್ಲೆ ಮಾಡಿದ ಬಗ್ಗೆ ತಿಳಿದಿದೆ. ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮವಹಿಸಲು ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಕಾನೂನಿನ ಪ್ರಕಾರ ಸಾರ್ವಜನಿಕರು ಕಸವನ್ನು ಎಸೆಯುವುದು ಕೂಡಾ ತಪ್ಪು.

ಕೆ.ಚಂದ್ರಮೌಳಿ, ಪೌರಾಯುಕ್ತ

ದಿನದ ಕೆಲಸ ಮುಗಿಸಿಕೊಂಡು ತೆರಳುತ್ತಿದ್ದ ವೇಳೆ ಸಾರ್ವಜನಿಕರೊಬ್ಬರು ರಸ್ತೆಯ ಮೇಲೆ ಕಸ ಎಸೆಯುತ್ತಿರುವುದನ್ನು ಗಮನಿಸಿದ ಚೇತನ ಆ ರೀತಿ ಮಾಡಬೇಡಿ ಎಂದಿದ್ದಾರೆ. ಅವಾಚ್ಯ ಶಬ್ದದಿಂದ ನಿಂದಿಸಿ ಆಗ ಆ ವ್ಯಕ್ತಿ ಏಕಾಏಕಿ ಹಲ್ಲೆ ಮಾಡಿದ್ದಾರೆ. ಚೇತನ ಅವರನ್ನು ಬಿಡಿಸಲು ಹೋದ ನಮಗೂ ಹಲ್ಲೆ ಮಾಡಿದ್ದಾರೆ. ಅವರ ಇಬ್ಬರ ವಿರುದ್ಧ ಕಾನೂನು ಕ್ರಮವಾಗಬೇಕು.

ಪುರುಷೋತ್ತಮ ಕೊರಗ ಹಲ್ಲೆಗೊಳಗಾದ ಸಿಬ್ಬಂದಿ