ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಬೈರಕುಪ್ಪ ಸೇತುವೆ ಯೋಜನೆಯನ್ನು ತ್ವರಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಂಡೀಪುರ ಅರಣ್ಯ ಮಾರ್ಗವನ್ನು ತಪ್ಪಿಸಿ, ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಈ ಯೋಜನೆಯು 30 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು.

ವಯನಾಡ್‌: ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸಲಿರುವ ಬೈರಕುಪ್ಪ ಯೋಜನೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಸರ್ಕಾರಗಳು ಸಮನ್ವಯದೊಂದಿಗೆ ಕೆಲಸ ಮಾಡುತ್ತಿವೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಗೆ ಅರಣ್ಯ ಪ್ರದೇಶದ ಬದಲು ಕಂದಾಯ ಭೂಮಿಯನ್ನು ಬಳಸಲು ನಿರ್ಧರಿಸಲಾಗಿದೆ. ಇದರಿಂದ ಸೇತುವೆಗೆ ಅನುಮೋದನೆ ಸಿಗುವುದು ಸುಲಭವಾಗಬಹುದು. ಈ ಬಗ್ಗೆ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಆ ಸ್ಥಳಕ್ಕೂ ಭೇಟಿ ನೀಡಿದ್ದೇನೆ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯನ್ನು ಬಳಸಿಕೊಂಡು ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

ಯೋಜನೆ ಹಿನ್ನೆಲೆ?:

ಕರ್ನಾಟಕದ ಕೊಡಗು ಜಿಲ್ಲೆಯ ಬೈರಕುಪ್ಪದಿಂದ ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ಕಟ್ಟಿದರೆ ಅದು ಕೇರಳದ ಪೆರಿಕಲ್ಲೂರನ್ನು ಸಂಪರ್ಕಿಸುತ್ತದೆ. ಇದರಿಂದಾಗಿ ಬಂಡೀಪುರ ಅರಣ್ಯ ಮಾರ್ಗವನ್ನು ಬಳಸದೆಯೇ ವಾಹನಗಳು ಸುಲಭವಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ಮಾಡಬಹುದು. ಜೊತೆಗೆ ಸಮಯ ಮತ್ತು ಸಂಚಾರದ ಅವಧಿಯೂ ಕಡಿತವಾಗುತ್ತದೆ. 30 ವರ್ಷಗಳ ಹಿಂದೆಯೇ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತಾದರೂ ಯೋಜನೆ ನೆಲ ಬಿಟ್ಟು ಮೇಲೆ ಎದ್ದಿಲ್ಲ.