ನೋಡಲ್‌ ಅಧಿಕಾರಿಯಾಗಿ ಎಂಜಿನಿಯರ್‌ ದ್ಯಾಮಣ್ಣ ನೇಮಕ| ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ| ಶೀಘ್ರವೇ ಜಂಟಿ ಮೇಲುಸ್ತುವಾರಿ ಸಮಿತಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಮನವಿ| 

ಬೆಂಗಳೂರು(ಮಾ.01): ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಬೆಳಗಾವಿಯ ನವಿಲುತೀರ್ಥ ಜಲಾಶಯದ ಅಧೀಕ್ಷಕ ಅಭಿಯಂತರ ಕೃಷ್ಣೋಜಿರಾವ್‌ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

Add Asianetnews Kannada as a Preferred SourcegooglePreferred

ಈ ಕುರಿತು ರಾಜ್ಯ ಸರ್ಕಾರ ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪತ್ರ ಬರೆದಿದ್ದು, ಶೀಘ್ರವೇ ಜಂಟಿ ಮೇಲುಸ್ತುವಾರಿ ಸಮಿತಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಮನವಿ ಮಾಡಿದೆ. ಅಲ್ಲದೆ ಈ ಸಮಿತಿ ವಿವಾದಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಅಗತ್ಯ ನೆರವು ನೀಡಲು ಹಿಡಕಲ್‌ ಜಲಾಶಯದ ಜಿಆರ್‌ಬಿಸಿ ಸರ್ಕಲ್‌ ಅಧಿಕ್ಷಕ ಅಭಿಯಂತರ ಆರ್‌.ವಿ.ದ್ಯಾಮಣ್ಣನವರ್‌ ಅವರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿದೆ.

ಮೋದಿ ಮುಂದೆ ಗೋವಾ ಸಿಎಂ ಮಹದಾಯಿ ಕ್ಯಾತೆ

ಮೂರು ರಾಜ್ಯಗಳ ಅಧಿಕಾರಿಗಳನ್ನೊಳಗೊಂಡ ಮೇಲುಸ್ತುವಾರಿ ಸಮಿತಿಯು ಮಾರ್ಚ್‌ ಮೊದಲ ಅಥವಾ ಎರಡನೇ ವಾರದಲ್ಲಿ ಸ್ಥಳಕ್ಕೆ ಭೇಟಿ ನೀಡಬಹುದಾಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿಗೆ ನೋಡಲ್‌ ಅಧಿಕಾರಿಯನ್ನು ಗೋವಾ ಮತ್ತು ಮಹಾರಾಷ್ಟ್ರಗಳಿಂದ ನೇಮಕಗೊಂಡ ಅಧಿಕಾರಿಗಳು ಸಂಪರ್ಕಿಸುವಂತೆ ರಾಜ್ಯ ಸರ್ಕಾರ ಪತ್ರದಲ್ಲಿ ತಿಳಿಸಿದೆ.

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂಕೋರ್ಟ್‌ನ ನ್ಯಾ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಗೋವಾದ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸುವಂತೆ ಆದೇಶಿಸಿತ್ತು.