ಸಾರಿಗೆ ನೌಕರರಿಗೆ ಸಿಹಿಸುದ್ದಿ: ಬಿಎಸ್ವೈಗೆ ಧನ್ಯವಾದ ಹೇಳಿದ ಸವದಿ
ಲಾಕ್ ಡೌನ್ ನಿಂದಾಗಿ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಸಂಚಾರ ಬಂದ್ ಆಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ವೇತನ ಕಡಿತದ ಭೀತಿಯನ್ನು ಎದುರಿಸುವಂತಾಗಿತ್ತು. ಇಂತಹ ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ಬೆಂಗಳೂರು, (ಜೂನ್.11): ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು (ಗುರುವಾರ) ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದಿದ್ದಾರೆ.
ಕೊರೋನಾ ಆತಂಕ: ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಕೆಎಸ್ಆರ್ಟಿಸಿ
ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್ಡೌನ್ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.