Asianet Suvarna News Asianet Suvarna News

ಸಾರಿಗೆ ನೌಕರರಿಗೆ ಸಿಹಿಸುದ್ದಿ: ಬಿಎಸ್‌ವೈಗೆ ಧನ್ಯವಾದ ಹೇಳಿದ ಸವದಿ

ಲಾಕ್ ಡೌನ್ ನಿಂದಾಗಿ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಸಂಚಾರ ಬಂದ್ ಆಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ವೇತನ ಕಡಿತದ ಭೀತಿಯನ್ನು ಎದುರಿಸುವಂತಾಗಿತ್ತು. ಇಂತಹ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

KSRTC BMTC NWKRTC, NEKRTC employee May Month Salary Released Says Dycm Laxman Savadi
Author
Bengaluru Railway Station, First Published Jun 11, 2020, 10:34 PM IST

ಬೆಂಗಳೂರು, (ಜೂನ್.11):  ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ  ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು (ಗುರುವಾರ)  ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದಿದ್ದಾರೆ. 

ಕೊರೋನಾ ಆತಂಕ: ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಕೆಎಸ್‌ಆರ್‌ಟಿಸಿ

ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆಯಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Follow Us:
Download App:
  • android
  • ios