ಕೆಎಸ್‌ಆರ್‌ಟಿಸಿ ನೌಕರರಿಗೆ ಮತ್ತೊಂದು  ಗುಡ್ ನ್ಯೂಸ್ ಇಲ್ಲಿದೆ. ನಿರ್ದೇಶಕರು ಈ ಸುದ್ದಿಯನ್ನು ನೀಡಿದ್ದಾರೆ ಏನದು..?

 ಬೆಂಗಳೂರು (ಡಿ.02): ರಾಷ್ಟ್ರೀಯ ರಜಾ ದಿನಗಳು ಹಾಗೂ ಹಬ್ಬದ ದಿನದಂದು ಕಾರ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನದ ಬದಲು ‘ಪರಿಹಾರ ರಜೆ’ ನೀಡುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಕೊರೋನಾದಿಂದ ಪ್ರಯಾಣಿಕರ ಕೊರತೆ ಹಾಗೂ ಸಾರಿಗೆ ಆದಾಯ ಕುಂಠಿತವಾಗಿದ್ದು, ನೌಕರರ ವೇತನಕ್ಕೆ ಸರ್ಕಾರ ಅನುದಾನ ನೀಡಿದೆ.

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು ..

 ಹೀಗಾಗಿ ರಾಷ್ಟ್ರೀಯ ರಜೆ ದಿನ ಹಾಗೂ ಹಬ್ಬದ ದಿನ ಕಾರ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ‘ಪರಿಹಾರ ರಜೆ’ ನೀಡಬೇಕು.

ಈ ದಿನಗಳಂದು ಅಗತ್ಯಕ್ಕೆ ತಕ್ಕಷ್ಟುಸಿಬ್ಬಂದಿಯನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದು ತಿಳಿಸಿದ್ದಾರೆ.