ಕೆಎಸ್‌ಆರ್‌ಟಿಸಿ ಗುಜರಿ ಬಸ್‌ ಬಳಸಿಕೊಂಡು ನಿರ್ಮಿಸಿದ್ದ ‘ಸ್ತ್ರೀ ಶೌಚಾಲಯ’ ಮತ್ತು ‘ಮೊಬೈಲ್‌ ಫೀವರ್‌ ಕ್ಲಿನಿಕ್‌’ಗೆ ‘ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ’ ವರ್ಗದಲ್ಲಿ ‘ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ’ ಲಭಿಸಿದೆ.

ಬೆಂಗಳೂರು (ಅ. 15): ಕೆಎಸ್‌ಆರ್‌ಟಿಸಿ ಗುಜರಿ ಬಸ್‌ ಬಳಸಿಕೊಂಡು ನಿರ್ಮಿಸಿದ್ದ ‘ಸ್ತ್ರೀ ಶೌಚಾಲಯ’ ಮತ್ತು ‘ಮೊಬೈಲ್‌ ಫೀವರ್‌ ಕ್ಲಿನಿಕ್‌’ಗೆ ‘ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ’ ವರ್ಗದಲ್ಲಿ ‘ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ’ ಲಭಿಸಿದೆ.

Add Asianetnews Kannada as a Preferred SourcegooglePreferred

ವಲ್ಡ್‌ರ್‍ ಎಚ್‌ಆರ್‌ಡಿ ಕಾಂಗ್ರೆಸ್‌ ಮುಂಬೈನಲ್ಲಿ ಹಮ್ಮಿಕೊಂಡಿದ್ದ ವರ್ಚುವಲ್‌ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಮಾತನಾಡಿ, ಕೊರೋನಾ ಪರಿಸ್ಥಿತಿಯಲ್ಲಿ ವಾರಿಯರ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ನಿಗಮದ ಸಿಬ್ಬಂದಿಗೆ ಈ ಪ್ರಶಸ್ತಿ ಅರ್ಪಿಸುವುದಾಗಿ ತಿಳಿಸಿದರು. ಅಂತೆಯೆ ಸ್ತ್ರೀ ಶೌಚಾಲಯ ಮತ್ತು ಮೊಬೈಲ್‌ ಫೀವರ್‌ ಕ್ಲಿನಿಕ್‌ಗೆ ತಗುಲಿದ ವೆಚ್ಚ, ಅದರ ಉಪಯೋಗ ಸೇರಿದಂತೆ ಇತರೆ ಮಾಹಿತಿ ವಿನಿಮಯ ಮಾಡಿಕೊಂಡರು.

KSRTC ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ ನ್ಯೂಸ್

ಕೊರಿಯರ್‌ನಲ್ಲಿ ಬಂದ ಫಲಕ: ಕೊರೋನಾ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಮುಂಬೈ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಹೀಗಾಗಿ ಆಯೋಜಕರು ಕಾರ್ಯಕ್ರಮಕ್ಕೂ ಮುನ್ನವೇ ಕೊರಿಯರ್‌ ಮೂಲಕ ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನಿಗಮಕ್ಕೆ ತಲುಪಿಸಿದ್ದರು.